ಜಿಲ್ಲೆಗಳು

ನ್ಯಾಷನಲ್ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಆಗಿ ಹೊರಹೊಮ್ಮಿದ : ಕರ್ನಾಟಕದ ಮಹಿಳಾ ತಂಡ

ಮೈಸೂರು: ಟೂರ್ನಿಯುದ್ದಕ್ಕೂ ಆಕ್ರಮಣಕಾರಿ ಪ್ರದರ್ಶನ ನೀಡಿದ ಕರ್ನಾಟಕದ ಮಹಿಳಾ ತಂಡ ನ್ಯಾಷನಲ್ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಕೊಯಂತ್ತೂರಿನ ಹಿಂದೂಸ್ತಾನ್ ಕಾಲೇಜ್ ಆಫ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ನಡೆದ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಶಿಪ್‌ನ ಫೈನಲ್ ಪಂದ್ಯದಲ್ಲಿ ಎದುರಾಳಿ ಗುಜರಾತ್ ತಂಡಕ್ಕೆ ಒಂದು ಅಂಕವನ್ನು ಬಿಟ್ಟು ಕೊಡದೆ ಕರ್ನಾಟಕ ತಂಡ ದಿಗ್ವಿಜಯ ಸಾಧಿಸಿ ಸಾಧನೆಗೈದಿದ್ದಾರೆ.

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಗುಜರಾತ್, ಝಾರ್ಖಂಡ್, ಉತ್ತರಖಂಡ, ಕೇರಳ ವಿವಿಧ ರಾಜ್ಯಗಳ ೯ ತಂಡಗಳು ಚಾಂಪಿಯನ್ ಶಿಪ್‌ನಲ್ಲಿ ಪಾಲ್ಗೊಂಡಿದ್ದವು. ಆದರೆ, ಕರ್ನಾಟಕ ತಂಡದ ಆಕ್ರಮಣಕಾರಿ ಆಟ ಇತರೆ ತಂಡಗಳನ್ನು ಮಂಕು ಮಾಡಿತು. ತಂಡದ ನಾಯಕಿ ಜ್ಯೋತಿ, ಗೀತಾ ಮತ್ತು ಸರಸ್ವತಿ ಬೆಸ್ಟ್ ಸರ್ವಿಸ್‌ರ್ ಪ್ರಶಸ್ತಿಗೆ ಭಾಜನರಾಗಿ ಸಂಭ್ರಮಿಸಿದರು.

ಮಂಜುಳಾ ಬಜಂತ್ರಿ, ಮಂಜುಳಾ ಲಮಾಣಿ, ನಂದಿತಾ, ಫರ್ವಿನ್ ಮೆಹಬೂಬ್, ರಿಜ್ವಾನ್ ಜಮೇದಾರ್, ರೇಣುಕಾ, ಆಶಾ, ಸಂಗೀತ, ಗಾಯತ್ರಿ, ಆಸಿಂಬಿ, ಜಯಪ್ರದ ತಂಡದಲ್ಲಿದ್ದರು.

ಕೊಯಂತ್ತೂರಿನ ಹಿಂದೂಸ್ತಾನ್ ಕಾಲೇಜ್ ಆಫ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ನಡೆದ ನ್ಯಾಷನಲ್ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಶಿಪ್‌ನಲ್ಲಿ ವಿಜೇತರಾದ ಕರ್ನಾಟಕ ಮಹಿಳಾ ತಂಡವನ್ನು ಚಿತ್ರದಲ್ಲಿ ಕಾಣಬಹುದು.

andolana

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

5 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

5 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

6 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

7 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

12 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

12 hours ago