ಜಿಲ್ಲೆಗಳು

ವಿಶ್ವಮಾನವ ಸಂದೇಶದ ಹರಿಕಾರ ರಾಷ್ಟ್ರ ಕವಿ ಕುವೆಂಪು – ಕೆ ಹರೀಶ್ ಗೌಡ

ಮೈಸೂರು:  ನಾಡಿಗೆ ವಿಶ್ವಮಾನವ ಸಂದೇಶ ಸಾರಿದ ಕನ್ನಡ ಸಾಹಿತ್ಯದ ಮೇರು ಕವಿ ಕುವೆಂಪು ಎಂದು ಚಾಮರಾಜ ಕ್ಷೇತ್ರದ ಶಾಸಕರಾದ ಕೆ ಹರೀಶ್ ಗೌಡ ಅವರು ತಿಳಿಸಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಅವರು ಮಾತನಾಡಿ, ಮನುಜಮತ, ವಿಶ್ವಪಥ ಸರ್ವೋದಯ, ಸಮನ್ವಯ ಹಾಗೂ ಪೂರ್ಣದೃಷ್ಟಿ ಎಂಬ ಪಂಚಮಂತ್ರಗಳ ಹರಿಕಾರರಾದ ರಾಷ್ಟ್ರಕವಿ ಕುವೆಂಪು ಅವರ 119ನೇ ಜನ್ಮದಿನದ ಶುಭಾಶಯಗಳನ್ನು ತಿಳಿಸಿದರು.

ನಾನು ಮಗುವಾಗಿದ್ದಾಗಲೇ ಕುವೆಂಪುರವರನ್ನು ನೇರವಾಗಿ ಕಂಡು, ಅವರ ತೊಡೆ ಮೇಲೆ ಕುಳಿತ ಸಂತಸದ ಕ್ಷಣ ನನ್ನ ಜೀವಮಾನದುದ್ದಕ್ಕೂ ನನ್ನ ಜೊತೆಗಿರುತ್ತದೆ. ಕನ್ನಡದ ಶ್ರೇಷ್ಠ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿ ನಮ್ಮ ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಕುವೆಂಪು ಅವರು ಹೆಚ್ಚಿಸಿದ್ದಾರೆ.

20 ನೇ ಶತಮಾನ ಕಂಡ ದೈತ್ಯ ಪ್ರತಿಭೆ, ರಸ ಋಷಿ, ಮೇರುಕವಿ ಅವರು ತಮ್ಮ ಸಾಹಿತ್ಯದ ಮೂಲಕ ಸದಾ ಜೀವಂತ ಎಂದು ಅಭಿಪ್ರಾಯಪಟ್ಟರು.

ಚಾಮುಂಡೇಶ್ವರಿ ಕ್ಷೇತ್ರದ ವಿಧಾನಸಭಾ ಶಾಸಕರಾದ ಜಿ ಟಿ ದೇವೇಗೌಡ ಅವರು ಮಾತನಾಡಿ, ಕುವೆಂಪು ಅವರ ಜೀವನವೇ ಒಂದು ಮಹಾನ್ ಸಂದೇಶವಾಗಿತ್ತು. ಅವರು ಜಾತೀಯತೆ, ಅರ್ಥಹೀನ ಆಚರಣೆಗಳನ್ನು ವಿರೋಧಿಸುತ್ತಿದ್ದರು.

ಕುವೆಂಪು ಅವರ ಶ್ರೀ ರಾಮಾಯಣ ದರ್ಶನಂ ಎಂಬ ಮಹಾಕಾವ್ಯ ಅವರಿಗೆ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟಿತು ಎಂದು ತಿಳಿಸಿದರು.

ವಿಧಾನ ಪರಿಷತ್ತಿನ ಶಾಸಕರಾದ ಸಿ ಎನ್ ಮಂಜೇಗೌಡ ಅವರು ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣದಲ್ಲಿ ಕುವೆಂಪುರವರ ಬರಹಗಳು ಅತ್ಯಂತ ಪ್ರಭಾವ ಬೀರುತ್ತವೆ. ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಶ್ರೇಷ್ಠ ಸಾಹಿತಿ ಕುವೆಂಪುರವರನ್ನು ಕನ್ನಡ ನಾಡು ಚಿರಕಾಲ ಸ್ಮರಿಸುತ್ತದೆ ಎಂದರು.

ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ನಿವೃತ್ತ ಪ್ರಾಧ್ಯಾಪಕರಾದ ಡಾ. ಎಚ್ಎಲ್ ಮಲ್ಲೇಶಗೌಡ ಅವರು ಮಾತನಾಡಿ, ಸಾಹಿತ್ಯದ ಎಲ್ಲಾ ಮಜಲುಗಳಲ್ಲಿ ಉತ್ತುಂಗದ ಶಿಖರವೇರಿದ ಕವಿ ಕುವೆಂಪು.

ದ ರಾ ಬೇಂದ್ರೆಯವರು ಕುವೆಂಪುರವರನ್ನು ಯುಗದ ಕವಿ ಜಗದ ಕವಿ ಎಂದು ಹಾಡಿ ಹೊಗಳಿದ್ದಾರೆ. ಇಂದಿನ ಯುವ ಪೀಳಿಗೆಯಿಂದ ಕುವೆಂಪುರವರನ್ನು ಓದುವ ಕೆಲಸವಾಗಬೇಕು. ಕುವೆಂಪುರವರ ವಿಶ್ವಮಾನವ ಸಂದೇಶ ಸಾಕಾಗಾರಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ತಿನ ಶಾಸಕರಾದ ಡಾಕ್ಟರ್ ಡಿ ತಿಮ್ಮಯ್ಯ, ಮೈಸೂರು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರಾದ ಜಿ.ಎಸ್ ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ವಿ.ಎನ್ ಮಲ್ಲಿಕಾರ್ಜುನ ಸ್ವಾಮಿ, ಸಹಾಯಕ ನಿರ್ದೇಶಕರಾದ ಡಾ. ಎಂ ಡಿ ಸುದರ್ಶನ್ ಸೇರಿದಂತೆ ಇತರರು ಭಾಗವಹಿಸಿದ್ದರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago