ಹನೂರು : ಚಾಮರಾಜನಗರ ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ನಿಂಪುವಾರ್ತೆ ದಿನಪತ್ರಿಕೆ ಸಂಪಾದಕ ಎನ್.ರಾಜೇಶ್ ಅವರಿಗೆ ಡಾ.ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ದೊರೆತಿದೆ.
ನವ ದೆಹಲಿಯಲ್ಲಿ ಡಿಸೆಂಬರ್ 11 ರಂದು ನಡೆದ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ 38 ನೇ ವಾರ್ಷಿಕ ಸಮಾರಂಭದಲ್ಲಿ ರಾಷ್ಟ್ರೀಯ ಅಧ್ಯಕ್ಷ ಸುಮನಾಸ್ಕರ್ ಹಾಗೂ ಸಂಘಟನಾ ಕಾರ್ಯದರ್ಶಿ ಚೆಲುವರಾಜ್ ಅವರು ಪ್ರಶಸ್ತಿ ಪತ್ರ ಹಾಗೂ ಪದಕ ನೀಡಿ ಸನ್ಮಾನಿಸಿದರು.
ರಾಷ್ಟ್ರದ ವಿವಿಧ ರಾಜ್ಯಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾದನೆ ಮಾಡಿರುವ ಗಣ್ಯರನ್ನು ಈ ಸಂಧರ್ಭದಲ್ಲಿ ಗೌರವಿಸಲಾಯಿತು.
ಕರ್ನಾಟಕ ರಾಜ್ಯದಿಂದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ 50 ಕ್ಕೂ ಹೆಚ್ಚು ಸಾಧಕರು ಪಾಲ್ಗೊಂಡಿದ್ದರು.
ಚಾಮರಾಜನಗರ ಜಿಲ್ಲೆಯಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ನಿಂಪುವಾರ್ತೆ ದಿನಪತ್ರಿಕೆ ಸಂಪಾದಕ ಎನ್.ರಾಜೇಶ್ ಅವರಿಗೂ ಸಹ ಡಾ.ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…