ಮೈಸೂರು : ಇದೇ ತಿಂಗಳ ದಿನಾಂಕ 18 ರಂದು ನಗರದ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಎಜುಕೇರ್ ಐಟಿಇಎಸ್ ಮತ್ತು ವುಮೆನ್ ಕ್ಯಾನ್ ಫೌಂಡೇಶನ್ ವತಿಯಿಂದ ಮಹಿಳೆಯರಿಗಾಗಿಯೇ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.
ಇಂದು ಜಿಲ್ಲಾಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಜುಕೇರ್ ವ್ಯವಸ್ಥಾಪಕ ನಿರ್ದೇಶಕರಾದ ರಚನಾ ಮಹೇಶ್ ಅವರು ಅಂದು ಬೆಳಿಗ್ಗೆ ೯.೩೦ ರಿಂದ ೬.೩೦ರವರೆಗೆ ಕಾರ್ಯಕ್ರಮ ನಡೆಲಿದೆ. ಇದು ಮಹಿಳೆಯರಿಗಾಗಿ ನಡೆಸುತ್ತಿರುವ ಉದ್ಯೋಗ ಮೇಳವಾಗಿದೆ. ಈಗಾಗಲೇ ೩೦ ಕಂಪನಿಗಳು ಬರುವುದಾಗಿ ನೋಂದಾವಣಿಯಾಗಿವೆ ಎಂದು ತಿಳಿಸಿದ್ದಾರೆ.
ಯಾರೆಲ್ಲಾ ಮಹಿಳೆಯರು ಭಾಗವಹಿಸಬಹುದು ?
೧೮ರಿಂದ ೪೫ ವರ್ಷದ ಮಹಿಳೆಯರು ಮೇಳದಲ್ಲಿ ಉದ್ಯೋಗ ಹುಡುಕಬಹುದು. ಎಸ್ಎಸ್ಎಲ್ಸಿಯಿಂದ ಹಿಡಿದು ಯಾವುದೇ ಪದವಿ, ಡಿಪ್ಲೋಮಾ ಪಡೆದವರು ಅರ್ಹರಿದ್ದಾರೆ. ಇನ್ನು ಮಾರಾಟ ಪ್ರದರ್ಶನದಲ್ಲಿ ಮಹಿಳೆಯರೇ ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡಬಹುದು. ಹೀಗೆ ಮಾರಾಟ ಮಾಡುವ ಮಹಿಳೆಯರು ತಮ್ಮ ಸಂಸ್ಥೆಯ ಬ್ಯಾನರ್ ಅನ್ನು ಒಳಗೊಂಡಿರಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: ೬೩೬೪೩೪೦೦೨೭, ೭೨೦೪೮೦೯೦೮೫, ೮೬೬೦೨೩೯೬೯೯ ಸಂಪರ್ಕಿಸಬಹುದಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲ ಡಾ.ಸೋಮಣ್ಣ, ಡಾ.ನಿರಂಜನಬಾಬು, ಪ್ರತಿಭಾ ಗುರುರಾಜ್, ಶೋಭಾ, ನಂದಿನಿ ಇತರರು ಇದ್ದರು.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…