ಮೈಸೂರು : ಇದೇ ತಿಂಗಳ ದಿನಾಂಕ 18 ರಂದು ನಗರದ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಎಜುಕೇರ್ ಐಟಿಇಎಸ್ ಮತ್ತು ವುಮೆನ್ ಕ್ಯಾನ್ ಫೌಂಡೇಶನ್ ವತಿಯಿಂದ ಮಹಿಳೆಯರಿಗಾಗಿಯೇ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.
ಇಂದು ಜಿಲ್ಲಾಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಜುಕೇರ್ ವ್ಯವಸ್ಥಾಪಕ ನಿರ್ದೇಶಕರಾದ ರಚನಾ ಮಹೇಶ್ ಅವರು ಅಂದು ಬೆಳಿಗ್ಗೆ ೯.೩೦ ರಿಂದ ೬.೩೦ರವರೆಗೆ ಕಾರ್ಯಕ್ರಮ ನಡೆಲಿದೆ. ಇದು ಮಹಿಳೆಯರಿಗಾಗಿ ನಡೆಸುತ್ತಿರುವ ಉದ್ಯೋಗ ಮೇಳವಾಗಿದೆ. ಈಗಾಗಲೇ ೩೦ ಕಂಪನಿಗಳು ಬರುವುದಾಗಿ ನೋಂದಾವಣಿಯಾಗಿವೆ ಎಂದು ತಿಳಿಸಿದ್ದಾರೆ.
ಯಾರೆಲ್ಲಾ ಮಹಿಳೆಯರು ಭಾಗವಹಿಸಬಹುದು ?
೧೮ರಿಂದ ೪೫ ವರ್ಷದ ಮಹಿಳೆಯರು ಮೇಳದಲ್ಲಿ ಉದ್ಯೋಗ ಹುಡುಕಬಹುದು. ಎಸ್ಎಸ್ಎಲ್ಸಿಯಿಂದ ಹಿಡಿದು ಯಾವುದೇ ಪದವಿ, ಡಿಪ್ಲೋಮಾ ಪಡೆದವರು ಅರ್ಹರಿದ್ದಾರೆ. ಇನ್ನು ಮಾರಾಟ ಪ್ರದರ್ಶನದಲ್ಲಿ ಮಹಿಳೆಯರೇ ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡಬಹುದು. ಹೀಗೆ ಮಾರಾಟ ಮಾಡುವ ಮಹಿಳೆಯರು ತಮ್ಮ ಸಂಸ್ಥೆಯ ಬ್ಯಾನರ್ ಅನ್ನು ಒಳಗೊಂಡಿರಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: ೬೩೬೪೩೪೦೦೨೭, ೭೨೦೪೮೦೯೦೮೫, ೮೬೬೦೨೩೯೬೯೯ ಸಂಪರ್ಕಿಸಬಹುದಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲ ಡಾ.ಸೋಮಣ್ಣ, ಡಾ.ನಿರಂಜನಬಾಬು, ಪ್ರತಿಭಾ ಗುರುರಾಜ್, ಶೋಭಾ, ನಂದಿನಿ ಇತರರು ಇದ್ದರು.
ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್ಗಳನ್ನು ಅಳವಡಿಸಿ…
ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…
ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…
ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ…
ನವೀನ್ ಡಿಸೋಜ ಖಾಸಗಿ ಸಹಭಾಗಿತ್ವದಲ್ಲಿ ಆರಂಭಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ; ಟ್ರಾಫಿಕ್ ಕಿರಿಕಿರಿಗೂ ಕಡಿವಾಣ ಮಡಿಕೇರಿ: ನಗರದ ರಾಜಾಸೀಟ್ ಆವರಣದಲ್ಲಿ…
ಮಂಜು ಕೋಟೆ ಕೋಟೆ: ಹಿಮಾಲಯ, ಇನ್ನಿತರ ಪ್ರದೇಶಗಳಿಂದ ವಲಸೆ ಬಂದಿರುವ ಹಕ್ಕಿಗಳು; ಪರಿಸರ ಪ್ರಿಯರಲ್ಲಿ ಸಂತ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿರುವ ಜಲಾಶಯಗಳ…