ಮೈಸೂರು : ಇದೇ ತಿಂಗಳ ದಿನಾಂಕ 18 ರಂದು ನಗರದ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಎಜುಕೇರ್ ಐಟಿಇಎಸ್ ಮತ್ತು ವುಮೆನ್ ಕ್ಯಾನ್ ಫೌಂಡೇಶನ್ ವತಿಯಿಂದ ಮಹಿಳೆಯರಿಗಾಗಿಯೇ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.
ಇಂದು ಜಿಲ್ಲಾಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಜುಕೇರ್ ವ್ಯವಸ್ಥಾಪಕ ನಿರ್ದೇಶಕರಾದ ರಚನಾ ಮಹೇಶ್ ಅವರು ಅಂದು ಬೆಳಿಗ್ಗೆ ೯.೩೦ ರಿಂದ ೬.೩೦ರವರೆಗೆ ಕಾರ್ಯಕ್ರಮ ನಡೆಲಿದೆ. ಇದು ಮಹಿಳೆಯರಿಗಾಗಿ ನಡೆಸುತ್ತಿರುವ ಉದ್ಯೋಗ ಮೇಳವಾಗಿದೆ. ಈಗಾಗಲೇ ೩೦ ಕಂಪನಿಗಳು ಬರುವುದಾಗಿ ನೋಂದಾವಣಿಯಾಗಿವೆ ಎಂದು ತಿಳಿಸಿದ್ದಾರೆ.
ಯಾರೆಲ್ಲಾ ಮಹಿಳೆಯರು ಭಾಗವಹಿಸಬಹುದು ?
೧೮ರಿಂದ ೪೫ ವರ್ಷದ ಮಹಿಳೆಯರು ಮೇಳದಲ್ಲಿ ಉದ್ಯೋಗ ಹುಡುಕಬಹುದು. ಎಸ್ಎಸ್ಎಲ್ಸಿಯಿಂದ ಹಿಡಿದು ಯಾವುದೇ ಪದವಿ, ಡಿಪ್ಲೋಮಾ ಪಡೆದವರು ಅರ್ಹರಿದ್ದಾರೆ. ಇನ್ನು ಮಾರಾಟ ಪ್ರದರ್ಶನದಲ್ಲಿ ಮಹಿಳೆಯರೇ ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡಬಹುದು. ಹೀಗೆ ಮಾರಾಟ ಮಾಡುವ ಮಹಿಳೆಯರು ತಮ್ಮ ಸಂಸ್ಥೆಯ ಬ್ಯಾನರ್ ಅನ್ನು ಒಳಗೊಂಡಿರಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: ೬೩೬೪೩೪೦೦೨೭, ೭೨೦೪೮೦೯೦೮೫, ೮೬೬೦೨೩೯೬೯೯ ಸಂಪರ್ಕಿಸಬಹುದಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲ ಡಾ.ಸೋಮಣ್ಣ, ಡಾ.ನಿರಂಜನಬಾಬು, ಪ್ರತಿಭಾ ಗುರುರಾಜ್, ಶೋಭಾ, ನಂದಿನಿ ಇತರರು ಇದ್ದರು.
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…
ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…
ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…
ಹೇಮಂತ್ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…
ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…