ಜಿಲ್ಲೆಗಳು

ನ.18 ರಂದು ಮಹಿಳೆಯರಿಗಾಗಿ ಉದ್ಯೋಗ ಮೇಳ ಆಯೋಜನೆ

ಮೈಸೂರು :  ಇದೇ ತಿಂಗಳ ದಿನಾಂಕ 18 ರಂದು ನಗರದ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ  ಎಜುಕೇರ್ ಐಟಿಇಎಸ್ ಮತ್ತು ವುಮೆನ್ ಕ್ಯಾನ್ ಫೌಂಡೇಶನ್ ವತಿಯಿಂದ ಮಹಿಳೆಯರಿಗಾಗಿಯೇ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.

ಇಂದು ಜಿಲ್ಲಾಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಜುಕೇರ್ ವ್ಯವಸ್ಥಾಪಕ ನಿರ್ದೇಶಕರಾದ ರಚನಾ ಮಹೇಶ್ ಅವರು ಅಂದು ಬೆಳಿಗ್ಗೆ ೯.೩೦ ರಿಂದ ೬.೩೦ರವರೆಗೆ ಕಾರ್ಯಕ್ರಮ ನಡೆಲಿದೆ. ಇದು ಮಹಿಳೆಯರಿಗಾಗಿ ನಡೆಸುತ್ತಿರುವ ಉದ್ಯೋಗ ಮೇಳವಾಗಿದೆ. ಈಗಾಗಲೇ ೩೦ ಕಂಪನಿಗಳು ಬರುವುದಾಗಿ ನೋಂದಾವಣಿಯಾಗಿವೆ ಎಂದು ತಿಳಿಸಿದ್ದಾರೆ.

ಯಾರೆಲ್ಲಾ ಮಹಿಳೆಯರು ಭಾಗವಹಿಸಬಹುದು ? 

೧೮ರಿಂದ ೪೫ ವರ್ಷದ ಮಹಿಳೆಯರು ಮೇಳದಲ್ಲಿ ಉದ್ಯೋಗ ಹುಡುಕಬಹುದು. ಎಸ್‌ಎಸ್‌ಎಲ್‌ಸಿಯಿಂದ ಹಿಡಿದು ಯಾವುದೇ ಪದವಿ, ಡಿಪ್ಲೋಮಾ ಪಡೆದವರು ಅರ್ಹರಿದ್ದಾರೆ. ಇನ್ನು ಮಾರಾಟ ಪ್ರದರ್ಶನದಲ್ಲಿ ಮಹಿಳೆಯರೇ ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡಬಹುದು. ಹೀಗೆ ಮಾರಾಟ ಮಾಡುವ ಮಹಿಳೆಯರು ತಮ್ಮ ಸಂಸ್ಥೆಯ ಬ್ಯಾನರ್ ಅನ್ನು ಒಳಗೊಂಡಿರಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: ೬೩೬೪೩೪೦೦೨೭, ೭೨೦೪೮೦೯೦೮೫, ೮೬೬೦೨೩೯೬೯೯ ಸಂಪರ್ಕಿಸಬಹುದಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲ ಡಾ.ಸೋಮಣ್ಣ, ಡಾ.ನಿರಂಜನಬಾಬು, ಪ್ರತಿಭಾ ಗುರುರಾಜ್, ಶೋಭಾ, ನಂದಿನಿ ಇತರರು ಇದ್ದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

8 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

17 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

17 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

17 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

20 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

20 hours ago