ಜಿಲ್ಲೆಗಳು

ನ.18 ರಂದು ಮಹಿಳೆಯರಿಗಾಗಿ ಉದ್ಯೋಗ ಮೇಳ ಆಯೋಜನೆ

ಮೈಸೂರು :  ಇದೇ ತಿಂಗಳ ದಿನಾಂಕ 18 ರಂದು ನಗರದ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ  ಎಜುಕೇರ್ ಐಟಿಇಎಸ್ ಮತ್ತು ವುಮೆನ್ ಕ್ಯಾನ್ ಫೌಂಡೇಶನ್ ವತಿಯಿಂದ ಮಹಿಳೆಯರಿಗಾಗಿಯೇ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.

ಇಂದು ಜಿಲ್ಲಾಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಜುಕೇರ್ ವ್ಯವಸ್ಥಾಪಕ ನಿರ್ದೇಶಕರಾದ ರಚನಾ ಮಹೇಶ್ ಅವರು ಅಂದು ಬೆಳಿಗ್ಗೆ ೯.೩೦ ರಿಂದ ೬.೩೦ರವರೆಗೆ ಕಾರ್ಯಕ್ರಮ ನಡೆಲಿದೆ. ಇದು ಮಹಿಳೆಯರಿಗಾಗಿ ನಡೆಸುತ್ತಿರುವ ಉದ್ಯೋಗ ಮೇಳವಾಗಿದೆ. ಈಗಾಗಲೇ ೩೦ ಕಂಪನಿಗಳು ಬರುವುದಾಗಿ ನೋಂದಾವಣಿಯಾಗಿವೆ ಎಂದು ತಿಳಿಸಿದ್ದಾರೆ.

ಯಾರೆಲ್ಲಾ ಮಹಿಳೆಯರು ಭಾಗವಹಿಸಬಹುದು ? 

೧೮ರಿಂದ ೪೫ ವರ್ಷದ ಮಹಿಳೆಯರು ಮೇಳದಲ್ಲಿ ಉದ್ಯೋಗ ಹುಡುಕಬಹುದು. ಎಸ್‌ಎಸ್‌ಎಲ್‌ಸಿಯಿಂದ ಹಿಡಿದು ಯಾವುದೇ ಪದವಿ, ಡಿಪ್ಲೋಮಾ ಪಡೆದವರು ಅರ್ಹರಿದ್ದಾರೆ. ಇನ್ನು ಮಾರಾಟ ಪ್ರದರ್ಶನದಲ್ಲಿ ಮಹಿಳೆಯರೇ ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡಬಹುದು. ಹೀಗೆ ಮಾರಾಟ ಮಾಡುವ ಮಹಿಳೆಯರು ತಮ್ಮ ಸಂಸ್ಥೆಯ ಬ್ಯಾನರ್ ಅನ್ನು ಒಳಗೊಂಡಿರಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: ೬೩೬೪೩೪೦೦೨೭, ೭೨೦೪೮೦೯೦೮೫, ೮೬೬೦೨೩೯೬೯೯ ಸಂಪರ್ಕಿಸಬಹುದಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲ ಡಾ.ಸೋಮಣ್ಣ, ಡಾ.ನಿರಂಜನಬಾಬು, ಪ್ರತಿಭಾ ಗುರುರಾಜ್, ಶೋಭಾ, ನಂದಿನಿ ಇತರರು ಇದ್ದರು.

andolanait

Recent Posts

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

1 hour ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

1 hour ago

ಓದುಗರ ಪತ್ರ: ಆದ್ಯತೆಗಳ ಪಟ್ಟಿಯಲ್ಲಿ ಶಿಕ್ಷಣ ಎಲ್ಲಿದೆ?

ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…

1 hour ago

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

4 hours ago

ರಾಷ್ಟ್ರೀಯ ಕೆಟಲ್‌ಬಾಲ್ ಟೂರ್ನಿಯಲ್ಲಿ ಮಿಂಚಿದ ಪ್ರತಿಭೆಗಳು

ಹೇಮಂತ್‌ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್‌ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…

4 hours ago

ಮುಸುಕಿನ ಜೋಳಕ್ಕೆ ರೋಗ ಬಾಧೆ; ಸಂಕಷ್ಟಕ್ಕೆ ಸಿಲುಕಿದ ರೈತರು

ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ  ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…

4 hours ago