ಮೈಸೂರು: ಮೈಸೂರಿನ ಕಲಾ ಪ್ರಪಂಚ ಅಜ್ಜನ ಮನೆ ಸಂಸ್ಥೆವತಿಯಿಂದ ನ.೬ರಂದು ರಾಮಕೃಷ್ಣ ನಗರದ ರಮಾಗೋವಿಂದ ರಂಗಮಂದಿರದಲ್ಲಿ ಸೂರ್ಯೋದಯದಿಂದ ಚಂದ್ರೋದಯದವರೆಗೆ ಶೀರ್ಷಿಕೆಯಡಿ ಕಾರ್ತಿಕ ಸಂಭ್ರಮ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಕೃಷ್ಣ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ೧೨ ಗಂಟೆಗಳ ಅವಧಿಯಲ್ಲಿ ಮೈಸೂರಿನ ವಿವಿಧ ಕಲಾ ಶಾಲೆಯ ವಿದ್ಯಾರ್ಥಿಗಳು ವಿವಿಧ ಕಾರ್ಯಕ್ರಮಗಳನ್ನು ನೀಡಲಿದ್ದಾರೆ. ಜೊತೆಗೆ ವಿಶೇಷ ಚೇತನ ಮಕ್ಕಳು ಮೂರು ಗಂಟೆಗಳ ಕಾಲ ಕಾರ್ಯಕ್ರಮ ನೀಡಲಿದ್ದಾರೆ ಎಂದು ಅವರು ಹೇಳಿದರು.
ವಿದ್ವಾನ್ ಕೃಷ್ಣಮೂರ್ತಿ ಶಿಷ್ಯರಿಂದ ಮಂಗಳ ವಾದ್ಯ, ಡಾ.ಶ್ರೀಶಾ ಭಟ್ ಶಿಷ್ಯರಿಂದ ಚಂಡೆವಾದನ, ಡಾ.ಕೃಪಾಫಡ್ಕೆ ಶಿಷ್ಯರಿಂದ ಭರತನಾಟ್ಯ, ಅಮ್ಮ ರಾಮಚಂದ್ರ ಅವರ ನೇತೃತ್ವದಲ್ಲಿ ಕುಕ್ಕರಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಜಾನಪದ ಹಾಡುಗಳು, ಕವಿತಾ ಧನಂಜಯ ಅವರ ಶಿಷ್ಯರಿಂದ ನಾಟಕ, ಗಾನಭಾರತೀ ಕಲಾ ಶಾಲೆಯ ಮಕ್ಕಳಿಂದ ವಾದ್ಯವೃಂದ, ಸಂಧ್ಯಾಭಟ್ ಶಿಷ್ಯರಿಂದ ಹಿಂದೂಸ್ತಾನಿ ಸಂಗೀತ, ನಾಗಶ್ರೀ ಫಣಿ ಶಿಷ್ಯರಿಂದ ಜಾನಪದ ನೃತ್ಯ, ವಿದ್ವಾನ್ ವಿ.ಎಸ್.ರಮೇಶ್ ಶಿಷ್ಯರಿಂದ ತಾಳವಾದ್ಯ ಕಾರ್ಯಕ್ರಮ ಪ್ರದರ್ಶನಗೊಳ್ಳಲಿವೆ. ರಂಗರಾವ್ ಸ್ಮಾರಕ ವಿಶೇಷ ಚೇತನ ಶಾಲಾ ವಿದ್ಯಾರ್ಥಿಗಳಿಂದ ಹಾಡು ಮತ್ತು ನೃತ್ಯ, ಮೈತ್ರಿ ಬುದ್ದಿ ಮಾಂದ್ಯ ಮಕ್ಕಳ ಶಾಲೆಯ ವಿದ್ಯಾರ್ಥಿಗಳಿಂದ ಹಾಡುಗಾರಿಕೆ, ಇನ್ಸ್ಟಿಟ್ಯೂಟ್ ಆಫ್ ಮದರ್ ಅಂಡ್ ಡೆಫ್ ಚೈಲ್ಡ್ ಶಾಲಾ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನವಿದೆ ಎಂದು ಅವರು ಮಾಹಿತಿ ನೀಡಿದರು. ಸಂಸ್ಥೆಯ ಸುಮ ಕೃಷ್ಣ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…