ಜಿಲ್ಲೆಗಳು

ನ. 6 ರಂದು ಅಜ್ಜನ ಮನೆಯಿಂದ ಕಾರ್ತಿಕ ಸಂಭ್ರಮ ಕಾರ್ಯಕ್ರಮ

ಮೈಸೂರು: ಮೈಸೂರಿನ ಕಲಾ ಪ್ರಪಂಚ ಅಜ್ಜನ ಮನೆ ಸಂಸ್ಥೆವತಿಯಿಂದ ನ.೬ರಂದು ರಾಮಕೃಷ್ಣ ನಗರದ ರಮಾಗೋವಿಂದ ರಂಗಮಂದಿರದಲ್ಲಿ ಸೂರ್ಯೋದಯದಿಂದ ಚಂದ್ರೋದಯದವರೆಗೆ ಶೀರ್ಷಿಕೆಯಡಿ ಕಾರ್ತಿಕ ಸಂಭ್ರಮ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಕೃಷ್ಣ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ೧೨ ಗಂಟೆಗಳ ಅವಧಿಯಲ್ಲಿ ಮೈಸೂರಿನ ವಿವಿಧ ಕಲಾ ಶಾಲೆಯ ವಿದ್ಯಾರ್ಥಿಗಳು ವಿವಿಧ ಕಾರ್ಯಕ್ರಮಗಳನ್ನು ನೀಡಲಿದ್ದಾರೆ. ಜೊತೆಗೆ ವಿಶೇಷ ಚೇತನ ಮಕ್ಕಳು ಮೂರು ಗಂಟೆಗಳ ಕಾಲ ಕಾರ್ಯಕ್ರಮ ನೀಡಲಿದ್ದಾರೆ ಎಂದು ಅವರು ಹೇಳಿದರು.

ವಿದ್ವಾನ್ ಕೃಷ್ಣಮೂರ್ತಿ ಶಿಷ್ಯರಿಂದ ಮಂಗಳ ವಾದ್ಯ, ಡಾ.ಶ್ರೀಶಾ ಭಟ್ ಶಿಷ್ಯರಿಂದ ಚಂಡೆವಾದನ, ಡಾ.ಕೃಪಾಫಡ್ಕೆ ಶಿಷ್ಯರಿಂದ ಭರತನಾಟ್ಯ, ಅಮ್ಮ ರಾಮಚಂದ್ರ ಅವರ ನೇತೃತ್ವದಲ್ಲಿ ಕುಕ್ಕರಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಜಾನಪದ ಹಾಡುಗಳು, ಕವಿತಾ ಧನಂಜಯ ಅವರ ಶಿಷ್ಯರಿಂದ ನಾಟಕ, ಗಾನಭಾರತೀ ಕಲಾ ಶಾಲೆಯ ಮಕ್ಕಳಿಂದ ವಾದ್ಯವೃಂದ, ಸಂಧ್ಯಾಭಟ್ ಶಿಷ್ಯರಿಂದ ಹಿಂದೂಸ್ತಾನಿ ಸಂಗೀತ, ನಾಗಶ್ರೀ ಫಣಿ ಶಿಷ್ಯರಿಂದ ಜಾನಪದ ನೃತ್ಯ, ವಿದ್ವಾನ್ ವಿ.ಎಸ್.ರಮೇಶ್ ಶಿಷ್ಯರಿಂದ ತಾಳವಾದ್ಯ ಕಾರ್ಯಕ್ರಮ ಪ್ರದರ್ಶನಗೊಳ್ಳಲಿವೆ. ರಂಗರಾವ್ ಸ್ಮಾರಕ ವಿಶೇಷ ಚೇತನ ಶಾಲಾ ವಿದ್ಯಾರ್ಥಿಗಳಿಂದ ಹಾಡು ಮತ್ತು ನೃತ್ಯ, ಮೈತ್ರಿ ಬುದ್ದಿ ಮಾಂದ್ಯ ಮಕ್ಕಳ ಶಾಲೆಯ ವಿದ್ಯಾರ್ಥಿಗಳಿಂದ ಹಾಡುಗಾರಿಕೆ, ಇನ್ಸ್ಟಿಟ್ಯೂಟ್ ಆಫ್ ಮದರ್ ಅಂಡ್ ಡೆಫ್ ಚೈಲ್ಡ್ ಶಾಲಾ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನವಿದೆ ಎಂದು ಅವರು ಮಾಹಿತಿ ನೀಡಿದರು. ಸಂಸ್ಥೆಯ ಸುಮ ಕೃಷ್ಣ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

andolanait

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

25 mins ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

56 mins ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

1 hour ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

1 hour ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

2 hours ago