ಚಾಮರಾಜನಗರ: ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ಮಾಡಲು ಹೋರಾಟ ನಡೆಸಿದ ವಿವಿಧ ಸಮಾಜಗಳ ಸ್ವಾಮೀಜಿಗಳಿಗೆ ನ.7 ರಂದು ಗುರುವಂದನೆ ಕಾರ್ಯಕ್ರಮವನ್ನು ಅಯೋಜಿಸಲಾಗಿದೆ ಎಂದು ತಾಲೂಕು ನಾಯಕ ವಿದ್ಯಾ ಕ್ಷೇಮಾಭಿವೃದ್ದಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸ ನಾಯಕ ತಿಳಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಅಂದು ಸ್ವಾಭಿಮಾನಿ ಎಸ್ಸಿ,ಎಸ್ಟಿ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಜಿಲ್ಲಾ ಸಮಿತಿ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿದೆ ಎಂದರು.ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ 253 ದಿನಗಳ ಕಾಲ ಅಹೋರಾತ್ರಿ ನಡೆಸಿ ಎಸ್ ಸಿಗೆ ಶೇ.17 ರಷ್ಟು ಮೀಸಲಾತಿ ಹೆಚ್ಚಳ, ಎಸ್ಟಿ ಶೇ.7 ರಷ್ಡು ಮೀಸಲಾತಿ ಹೆಚ್ಚಳ ಮಾಡಿಸಿರುವ ಸಮುದಾಯದ ಶ್ರೀಪ್ರಸನ್ನಾನಂದಪುರಿಸ್ವಾಮಿ, ಜ್ಞಾನಪ್ರಕಾಶಸ್ವಾಮೀಜಿ, ಮಾದಾರಚೆನ್ನಯ್ಯಸ್ವಾಮಿಜೀ, ಸೇವಾಲಾಲ್ ಸ್ವಾಮೀಜಿ, ಕೇದಾರನಾಥಸ್ವಾಮೀಜಿ ಸೇರಿದಂತೆ 9 ಶ್ರೀಗಳಿಗೆ ಅಂದು ಗುರು ವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಸ್ಸಿ,ಎಸ್ಟಿ ಸಮುದಾಯ ದವರು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯ ಕ್ರಮವನ್ನು ಯಶ್ವಸಿಗೊಳಿಸಿ ಕೊಡುವಂತೆ ಮನವಿ ಮಾಡಿದರು.
ಎಸ್ ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಹಾಗೂ ಹೆಚ್ಚಳಕ್ಕೆ ಕಾರಣಕರ್ತರಾದ ವಿರೋಧಪಕ್ಷದವರಿಗೆ, ಜೆಡಿಎಸ್, ಬಿಎಸ್ಪಿ ಎಲ್ಲ ಪಕ್ಷದ ನಾಯಕರಿಗೆ ಈ ಮೂಲಕ ಅಭಿನಂದನೆ ಸಲ್ಲಿಸಲಾಗುವುದು ಎಂದರು.
ಗೋಷ್ಟಿಯಲ್ಲಿ ಮುಖಂಡರಾದ ಕಪಿನಿನಾಯಕ, ನಗರಸಭಾ ಮಾಜಿ ಸದಸ್ಯ ಚೆಂಗುಮಣಿ, ಪರಶಿವಮೂರ್ತಿ, ಬಿಎಸ್ಪಿ ಜಿಲ್ಲಾ ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ ಹಾಜರಿದ್ದರು.
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…
ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…
ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು…
ಉತ್ತರಾಖಂಡ್: ಇಲ್ಲಿನ ಪವಿತ್ರ ಚಾರ್ ಧಾಮ್ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು…