ಚಾಮರಾಜನಗರ: ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ಮಾಡಲು ಹೋರಾಟ ನಡೆಸಿದ ವಿವಿಧ ಸಮಾಜಗಳ ಸ್ವಾಮೀಜಿಗಳಿಗೆ ನ.7 ರಂದು ಗುರುವಂದನೆ ಕಾರ್ಯಕ್ರಮವನ್ನು ಅಯೋಜಿಸಲಾಗಿದೆ ಎಂದು ತಾಲೂಕು ನಾಯಕ ವಿದ್ಯಾ ಕ್ಷೇಮಾಭಿವೃದ್ದಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸ ನಾಯಕ ತಿಳಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಅಂದು ಸ್ವಾಭಿಮಾನಿ ಎಸ್ಸಿ,ಎಸ್ಟಿ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಜಿಲ್ಲಾ ಸಮಿತಿ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿದೆ ಎಂದರು.ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ 253 ದಿನಗಳ ಕಾಲ ಅಹೋರಾತ್ರಿ ನಡೆಸಿ ಎಸ್ ಸಿಗೆ ಶೇ.17 ರಷ್ಟು ಮೀಸಲಾತಿ ಹೆಚ್ಚಳ, ಎಸ್ಟಿ ಶೇ.7 ರಷ್ಡು ಮೀಸಲಾತಿ ಹೆಚ್ಚಳ ಮಾಡಿಸಿರುವ ಸಮುದಾಯದ ಶ್ರೀಪ್ರಸನ್ನಾನಂದಪುರಿಸ್ವಾಮಿ, ಜ್ಞಾನಪ್ರಕಾಶಸ್ವಾಮೀಜಿ, ಮಾದಾರಚೆನ್ನಯ್ಯಸ್ವಾಮಿಜೀ, ಸೇವಾಲಾಲ್ ಸ್ವಾಮೀಜಿ, ಕೇದಾರನಾಥಸ್ವಾಮೀಜಿ ಸೇರಿದಂತೆ 9 ಶ್ರೀಗಳಿಗೆ ಅಂದು ಗುರು ವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಸ್ಸಿ,ಎಸ್ಟಿ ಸಮುದಾಯ ದವರು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯ ಕ್ರಮವನ್ನು ಯಶ್ವಸಿಗೊಳಿಸಿ ಕೊಡುವಂತೆ ಮನವಿ ಮಾಡಿದರು.
ಎಸ್ ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಹಾಗೂ ಹೆಚ್ಚಳಕ್ಕೆ ಕಾರಣಕರ್ತರಾದ ವಿರೋಧಪಕ್ಷದವರಿಗೆ, ಜೆಡಿಎಸ್, ಬಿಎಸ್ಪಿ ಎಲ್ಲ ಪಕ್ಷದ ನಾಯಕರಿಗೆ ಈ ಮೂಲಕ ಅಭಿನಂದನೆ ಸಲ್ಲಿಸಲಾಗುವುದು ಎಂದರು.
ಗೋಷ್ಟಿಯಲ್ಲಿ ಮುಖಂಡರಾದ ಕಪಿನಿನಾಯಕ, ನಗರಸಭಾ ಮಾಜಿ ಸದಸ್ಯ ಚೆಂಗುಮಣಿ, ಪರಶಿವಮೂರ್ತಿ, ಬಿಎಸ್ಪಿ ಜಿಲ್ಲಾ ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ ಹಾಜರಿದ್ದರು.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…