ಜಿಲ್ಲೆಗಳು

ನ.7 ರಂದು ವಿವಿಧ ಸಮಾಜಗಳ ಸ್ವಾಮೀಜಿಗಳಿಗೆ ಗುರುವಂದನಾ ಕಾರ್ಯಕ್ರಮ

ಚಾಮರಾಜನಗರ: ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ಮಾಡಲು ಹೋರಾಟ ನಡೆಸಿದ ವಿವಿಧ ಸಮಾಜಗಳ ಸ್ವಾಮೀಜಿಗಳಿಗೆ  ನ.7 ರಂದು ಗುರುವಂದನೆ ಕಾರ್ಯಕ್ರಮವನ್ನು ಅಯೋಜಿಸಲಾಗಿದೆ ಎಂದು ತಾಲೂಕು ನಾಯಕ ವಿದ್ಯಾ ಕ್ಷೇಮಾಭಿವೃದ್ದಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸ ನಾಯಕ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಅಂದು ಸ್ವಾಭಿಮಾನಿ ಎಸ್ಸಿ,ಎಸ್ಟಿ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ  ಜಿಲ್ಲಾ ಸಮಿತಿ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ  ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿದೆ ಎಂದರು.ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ 253 ದಿನಗಳ ಕಾಲ ಅಹೋರಾತ್ರಿ ನಡೆಸಿ  ಎಸ್ ಸಿಗೆ ಶೇ.17  ರಷ್ಟು ಮೀಸಲಾತಿ ಹೆಚ್ಚಳ,  ಎಸ್ಟಿ ಶೇ.7 ರಷ್ಡು ಮೀಸಲಾತಿ ಹೆಚ್ಚಳ ಮಾಡಿಸಿರುವ ಸಮುದಾಯದ ಶ್ರೀಪ್ರಸನ್ನಾನಂದಪುರಿಸ್ವಾಮಿ, ಜ್ಞಾನಪ್ರಕಾಶಸ್ವಾಮೀಜಿ, ಮಾದಾರಚೆನ್ನಯ್ಯಸ್ವಾಮಿಜೀ, ಸೇವಾಲಾಲ್  ಸ್ವಾಮೀಜಿ, ಕೇದಾರನಾಥಸ್ವಾಮೀಜಿ ಸೇರಿದಂತೆ 9 ಶ್ರೀಗಳಿಗೆ ಅಂದು  ಗುರು ವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಸ್ಸಿ,ಎಸ್ಟಿ ಸಮುದಾಯ ದವರು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯ ಕ್ರಮವನ್ನು ಯಶ್ವಸಿಗೊಳಿಸಿ ಕೊಡುವಂತೆ ಮನವಿ ಮಾಡಿದರು.

ಎಸ್ ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಹಾಗೂ ಹೆಚ್ಚಳಕ್ಕೆ ಕಾರಣಕರ್ತರಾದ ವಿರೋಧಪಕ್ಷದವರಿಗೆ, ಜೆಡಿಎಸ್, ಬಿಎಸ್ಪಿ ಎಲ್ಲ ಪಕ್ಷದ ನಾಯಕರಿಗೆ ಈ ಮೂಲಕ ಅಭಿನಂದನೆ ಸಲ್ಲಿಸಲಾಗುವುದು ಎಂದರು.

ಗೋಷ್ಟಿಯಲ್ಲಿ ಮುಖಂಡರಾದ  ಕಪಿನಿನಾಯಕ, ನಗರಸಭಾ ಮಾಜಿ ಸದಸ್ಯ ಚೆಂಗುಮಣಿ, ಪರಶಿವಮೂರ್ತಿ, ಬಿಎಸ್ಪಿ ಜಿಲ್ಲಾ ಉಪಾಧ್ಯಕ್ಷ  ಬ್ಯಾಡಮೂಡ್ಲು ಬಸವಣ್ಣ ಹಾಜರಿದ್ದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago