ಜಿಲ್ಲೆಗಳು

ಹುಲಿ ದಾಳಿಗೆ ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ:ಎ.ಎಸ್.ಪೊನ್ನಣ್ಣ

ಮಡಿಕೇರಿ: ಪೊನ್ನಂಪೇಟೆ ವ್ಯಾಪ್ತಿಯ ಕೆ.ಬಾಡಗ ಗ್ರಾಮದಲ್ಲಿ ಇಬ್ಬರು ಹುಲಿ ದಾಳಿಗೆ ಬಲಿಯಾಗಲು ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯವೇ ಪ್ರಮುಖ ಕಾರಣವೆಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಆರೋಪಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಚೇತನ್ ಎಂಬಾತನನ್ನು ಹುಲಿ ಕೊಂದು ಹಾಕಿದೆ. ಸೋಮವಾರ ಬೆಳಿಗ್ಗೆ ವೃದ್ಧರೊಬ್ಬರನ್ನು ಬಲಿ ತೆಗೆದುಕೊಂಡಿದೆ. ಅರಣ್ಯ ಅಧಿಕಾರಿಗಳು ಚೇತನ್ ಮೃತಪಟ್ಟಾಗಲೇ ಎಚ್ಚೆತ್ತುಕೊಂಡಿದ್ದರೆ ವೃದ್ಧನ ಜೀವ ಉಳಿಯುತ್ತಿತ್ತು. ಅರಣ್ಯ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿ ಅಮಾನತುಗೊಳಿಸಬೇಕೆಂದು ಒತ್ತಾಯಿಸಿದರು.
ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರತಿನಿಧಿಗಳು ಅಧಿಕಾರಿಗಳಿಗೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲು ಆದೇಶ ಮಾಡದೆ, ಭಾವನಾತ್ಮಕ ಭಾಷಣಗಳನ್ನು ಮಾಡುತ್ತಿದ್ದಾರೆ. ಹುಲಿಗಳನ್ನು ಗುಂಡು ಹೊಡೆದು ಕೊಲ್ಲುವ ಮಾತುಗಳನ್ನಾಡುತ್ತಾರೆ. ಹುಲಿಯನ್ನು ಕೊಂದು ಜನರು ಜೈಲಿಗೆ ಹೋಗಬೇಕೆ? ಎಂದು ಪ್ರಶ್ನಿಸಿದರು.
ಜನಪ್ರತಿನಿಧಿಗಳು ನಾಟಕ ಮಾಡುವುದನ್ನು ಬಿಡಬೇಕು, ಜನರ ಜೀವನದೊಂದಿಗೆ ಚೆಲ್ಲಾಟ ಆಡಬಾರದು. ಹುಲಿಯನ್ನು ಕೊಂದ ತಕ್ಷಣ ಸಮಸ್ಯೆ ಬಗೆಹರಿಯಲು ಸಾಧ್ಯವಿಲ್ಲ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಬೇಕಿದೆ. ಹುಲಿ ಕಾಡು ಬಿಟ್ಟು ನಾಡಿಗೆ ಏಕೆ ಬರುತ್ತಿದೆ ಎನ್ನುವ ಬಗ್ಗೆ ಅಧ್ಯಯನ ನಡೆಯಬೇಕಿದೆ. ಕಾಡುಗಳನ್ನು ನಾಶ ಮಾಡಿ ತೋಟಗಳನ್ನೇ ಕಾಡೆಂದು ಅರಣ್ಯ ಅಧಿಕಾರಿಗಳು ಪ್ರತಿಬಿಂಬಿಸುತ್ತಿದ್ದಾರೆ. ಹುಲಿ ಎರಡು ಅಮಾಯಕ ಜೀವಗಳನ್ನು ಬಲಿ ಪಡೆದ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವೆಂದು ಅರಣ್ಯ ಅಧಿಕಾರಿಗಳು ತಮ್ಮ ಕಡತದಲ್ಲಿ ಉಲ್ಲೇಖಿಸಿದ್ದಾರೆ. ಇದು ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳುವ ಪ್ರಯತ್ನವಾಗಿದೆ ಎಂದು ಪೊನ್ನಣ್ಣ ಆರೋಪಿಸಿದರು.
ಸಂಬಂಧಪಟ್ಟ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಜಿಲ್ಲೆಗೆ ಭೇಟಿ ನೀಡಿ ವನ್ಯಜೀವಿಗಳ ದಾಳಿ ಕುರಿತು ಉನ್ನತ ಮಟ್ಟದ ಸಭೆ ನಡೆಸಬೇಕು. ಹುಲಿ ಉಪಟಳ ತಡೆಯುವಲ್ಲಿ ವಿಫಲರಾಗಿರುವ ಅರಣ್ಯ ಅಧಿಕಾರಿಗಳನ್ನು ಅಮಾನತುಗೊಳಿಸಿ ತನಿಖೆಗೆ ಒಳಪಡಿಸಬೇಕು, ಕಠಿಣ ಶಿಕ್ಷಯಾಗುವಂತೆ ನೋಡಿಕೊಳ್ಳಬೇಕು ಮತ್ತು ಹುಲಿ ಉಪಟಳದ ವಿರುದ್ಧ ಅರಣ್ಯ ಇಲಾಖೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಒತ್ತಾಯಿಸಿದರು.
ಕಾಂಗ್ರೆಸ್ ಕಾನೂನು ಘಟಕದ ಜಿಲ್ಲಾಧ್ಯಕ್ಷ ಶ್ರೀಧರ್ ನಾಯರ್‌, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಪ್ರಮುಖರಾದ ಕಿರಣ್ ಪೂವಯ್ಯ, ಬಲ್ಯಾಟಂಡ ಕೌಶಿಕ್ ಹಾಗೂ ಶರೀನ್ ಗಿರೀಶ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago