ಜಿಲ್ಲೆಗಳು

ಅರ್ಜುನನ ಅಂತ್ಯಕ್ರಿಯೆಗೆ ಸಿಎಂ, ಡಿಸಿಎಂ ಯಾಕೆ ಬರಲಿಲ್ಲ? ಸಾಮಾಜಿಕ ಜಾಲತಾಣದಲ್ಲಿ ಕೇಳಿಬಂತು ಕೂಗು

ಕಾಡಾನೆಯೊಂದರ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದ ದಸರಾ ಆನೆ ಅರ್ಜುನನ ಕುರಿತು ಇದೀಗ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಅರ್ಜುನನ ಮಾವುತ ವಿನು ಕಾಡಾನೆಗೆ ಗುಂಡು ಹಾರಿಸುವ ಬದಲು ಅರ್ಜುನನಿಗೆ ಗುಂಡು ಹಾರಿಸಿದರು ಎಂದು ಆರೋಪಿಸಿ ಅಂತ್ಯಸಂಸ್ಕಾರದ ವೇಳೆ ಕಣ್ಣೀರು ಹಾಕಿದ್ದು ಅರ್ಜುನನ ಸಾವಿನ ಕುರಿತು ಸಾಕಷ್ಟು ಅನುಮಾನಗಳು ಉಂಟಾಗುವ ಹಾಗೆ ಮಾಡಿದೆ.

ಇನ್ನು ಸಾಮಾಜಿಕ ಜಾಲತಾಣದಲ್ಲಿ ಅರ್ಜುನನ ಅಂತ್ಯಕ್ರಿಯೆಯ ಬಗ್ಗೆ ಪೋಸ್ಟ್‌ ಒಂದು ದೊಡ್ಡ ಮಟ್ಟದಲ್ಲಿ ವೈರಲ್‌ ಆಗಿದ್ದು, ಇದರಲ್ಲಿ ಮುಖ್ಯಮಂತ್ರಿಗಳಿಂದ ಹಿಡಿದು ಅರಣ್ಯ ಇಲಾಖೆಯ ಅಧಿಕಾರಿಗಳವರೆಗೆ ಹಲವು ಪ್ರಶ್ನೆಗಳನ್ನು ಹಾಕಲಾಗಿದೆ.

ವೈರಲ್‌ ಆಗಿರುವ ಪೋಸ್ಟ್‌ನಲ್ಲಿ ಏನಿದೆ?

ಈ ವೈರಲ್‌ ಪೋಸ್ಟ್‌ನಲ್ಲಿ “ಅರ್ಜುನ ಸತ್ತಾಗ ಯಾರಿಗೂ ಬೇಡ ದಸರಾ ಸಮಯದಲ್ಲಿ ಮಾತ್ರ ಬೇಕಾ ನಿಮಗೆ?” ಎಂಬ ಹೆಡ್‌ಲೈನ್‌ ಒಂದನ್ನು ಬರೆಯಲಾಗಿದ್ದು ಪ್ರಶ್ನೆಗಳು ಈ ಕೆಳಕಂಡಂತಿವೆ..

1. ಮೈಸೂರು ರಾಜರು ಯಾಕೆ ಬರಲಿಲ್ಲ?
2. ಮುಖ್ಯಮಂತ್ರಿಗಳು ಯಾಕೆ ಬರಲಿಲ್ಲ?
3. ಉಪಮುಖ್ಯಮಂತ್ರಿ ಯಾಕೆ ಬರಲಿಲ್ಲ?
4. ರಾಜಕಾರಣಿಗಳು ಯಾಕೆ ಬರಲಿಲ್ಲ?
5. ಮೈಸೂರಿನಲ್ಲಿ ಅಂತ್ಯಕ್ರಿಯೆ ಯಾಕೆ ಮಾಡಲಿಲ್ಲ?
6. ತರಾತುರಿಯಲ್ಲಿ ಯಾಕೆ ಅಂತ್ಯಕ್ರಿಯೆ ಮಾಡಿದರು?
7. ಅರ್ಜುನನ ಸಾವಿನ ಸಂದರ್ಭದ ವಿಡಿಯೊಗಳನ್ನು ಯಾಕೆ ಹಂಚಿಕೊಂಡಿಲ್ಲ?
8. ದಂತ ಕತ್ತರಿಸುವ ಅಗತ್ಯವೇನಿತ್ತು?
9. ಆನೆಗಳಿಗೆ 60 ವರ್ಷ ವಯಸ್ಸಾದರೆ ವಿಶ್ರಾಂತಿ ನೀಡಬೇಕು, ಅರ್ಜುನನಿಗೆ 64 ವರ್ಷ ವಯಸ್ಸಾದರೂ ಈ ಬೇಟೆ ಬೇಕಿತ್ತಾ?

ಈ ಪೋಸ್ಟ್‌ ಅನ್ನು ಹಲವಾರು ಮಂದಿ ಹಂಚಿಕೊಂಡಿದ್ದು ಸಂಬಂಧಪಟ್ಟವರು ಇದಕ್ಕೆ ಉತ್ತರ ನೀಡಲಿ ಎಂದು ಆಗ್ರಹಿಸಿದ್ದಾರೆ.

andolana

Recent Posts

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ…

6 mins ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

22 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

39 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

52 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago