ಜಿಲ್ಲೆಗಳು

ಅರ್ಜುನನ ಅಂತ್ಯಕ್ರಿಯೆಗೆ ಸಿಎಂ, ಡಿಸಿಎಂ ಯಾಕೆ ಬರಲಿಲ್ಲ? ಸಾಮಾಜಿಕ ಜಾಲತಾಣದಲ್ಲಿ ಕೇಳಿಬಂತು ಕೂಗು

ಕಾಡಾನೆಯೊಂದರ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದ ದಸರಾ ಆನೆ ಅರ್ಜುನನ ಕುರಿತು ಇದೀಗ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಅರ್ಜುನನ ಮಾವುತ ವಿನು ಕಾಡಾನೆಗೆ ಗುಂಡು ಹಾರಿಸುವ ಬದಲು ಅರ್ಜುನನಿಗೆ ಗುಂಡು ಹಾರಿಸಿದರು ಎಂದು ಆರೋಪಿಸಿ ಅಂತ್ಯಸಂಸ್ಕಾರದ ವೇಳೆ ಕಣ್ಣೀರು ಹಾಕಿದ್ದು ಅರ್ಜುನನ ಸಾವಿನ ಕುರಿತು ಸಾಕಷ್ಟು ಅನುಮಾನಗಳು ಉಂಟಾಗುವ ಹಾಗೆ ಮಾಡಿದೆ.

ಇನ್ನು ಸಾಮಾಜಿಕ ಜಾಲತಾಣದಲ್ಲಿ ಅರ್ಜುನನ ಅಂತ್ಯಕ್ರಿಯೆಯ ಬಗ್ಗೆ ಪೋಸ್ಟ್‌ ಒಂದು ದೊಡ್ಡ ಮಟ್ಟದಲ್ಲಿ ವೈರಲ್‌ ಆಗಿದ್ದು, ಇದರಲ್ಲಿ ಮುಖ್ಯಮಂತ್ರಿಗಳಿಂದ ಹಿಡಿದು ಅರಣ್ಯ ಇಲಾಖೆಯ ಅಧಿಕಾರಿಗಳವರೆಗೆ ಹಲವು ಪ್ರಶ್ನೆಗಳನ್ನು ಹಾಕಲಾಗಿದೆ.

ವೈರಲ್‌ ಆಗಿರುವ ಪೋಸ್ಟ್‌ನಲ್ಲಿ ಏನಿದೆ?

ಈ ವೈರಲ್‌ ಪೋಸ್ಟ್‌ನಲ್ಲಿ “ಅರ್ಜುನ ಸತ್ತಾಗ ಯಾರಿಗೂ ಬೇಡ ದಸರಾ ಸಮಯದಲ್ಲಿ ಮಾತ್ರ ಬೇಕಾ ನಿಮಗೆ?” ಎಂಬ ಹೆಡ್‌ಲೈನ್‌ ಒಂದನ್ನು ಬರೆಯಲಾಗಿದ್ದು ಪ್ರಶ್ನೆಗಳು ಈ ಕೆಳಕಂಡಂತಿವೆ..

1. ಮೈಸೂರು ರಾಜರು ಯಾಕೆ ಬರಲಿಲ್ಲ?
2. ಮುಖ್ಯಮಂತ್ರಿಗಳು ಯಾಕೆ ಬರಲಿಲ್ಲ?
3. ಉಪಮುಖ್ಯಮಂತ್ರಿ ಯಾಕೆ ಬರಲಿಲ್ಲ?
4. ರಾಜಕಾರಣಿಗಳು ಯಾಕೆ ಬರಲಿಲ್ಲ?
5. ಮೈಸೂರಿನಲ್ಲಿ ಅಂತ್ಯಕ್ರಿಯೆ ಯಾಕೆ ಮಾಡಲಿಲ್ಲ?
6. ತರಾತುರಿಯಲ್ಲಿ ಯಾಕೆ ಅಂತ್ಯಕ್ರಿಯೆ ಮಾಡಿದರು?
7. ಅರ್ಜುನನ ಸಾವಿನ ಸಂದರ್ಭದ ವಿಡಿಯೊಗಳನ್ನು ಯಾಕೆ ಹಂಚಿಕೊಂಡಿಲ್ಲ?
8. ದಂತ ಕತ್ತರಿಸುವ ಅಗತ್ಯವೇನಿತ್ತು?
9. ಆನೆಗಳಿಗೆ 60 ವರ್ಷ ವಯಸ್ಸಾದರೆ ವಿಶ್ರಾಂತಿ ನೀಡಬೇಕು, ಅರ್ಜುನನಿಗೆ 64 ವರ್ಷ ವಯಸ್ಸಾದರೂ ಈ ಬೇಟೆ ಬೇಕಿತ್ತಾ?

ಈ ಪೋಸ್ಟ್‌ ಅನ್ನು ಹಲವಾರು ಮಂದಿ ಹಂಚಿಕೊಂಡಿದ್ದು ಸಂಬಂಧಪಟ್ಟವರು ಇದಕ್ಕೆ ಉತ್ತರ ನೀಡಲಿ ಎಂದು ಆಗ್ರಹಿಸಿದ್ದಾರೆ.

andolana

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

3 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

6 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

7 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

8 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

9 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

14 hours ago