ಕೊಡಗಿನಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲ ಎಂಬ ಕೂಗು ಹಲವು ದಿನಗಳಿಂದ ಕೇಳಿ ಬರುತ್ತಲೇ ಇದೆ. ಸದ್ಯ ಜಿಲ್ಲೆಯಲ್ಲಿ ಮೃತಪಟ್ಟ ವ್ಯಕ್ತಿಯೋರ್ವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೊಡಗು ಜಿಲ್ಲೆಯ ಖ್ಯಾತ ಪೇಜ್ ʼಕೊಡಗು ಕನೆಕ್ಟ್ʼ ಬರೆದುಕೊಂಡಿದ್ದು, ಮಡಿಕೇರಿಯಲ್ಲಿ ಹೃದಯಸ್ತಂಭನಕ್ಕೆ ಒಳಗಾದವರಿಗೆ ಚಿಕಿತ್ಸೆ ನೀಡುವ ವ್ಯವಸ್ಥೆ ಇರುವ ಆಸ್ಪತ್ರೆ ಇದ್ದರೆ ಅವರು ಬದುಕುಳಿಯುತ್ತಿದ್ದರು ಎಂದು ಉಲ್ಲೇಖಿಸಿದೆ.
“46 ವರ್ಷದ ಮೂರ್ನಾಡು ಮೂಲದ ವ್ಯಕ್ತಿಗೆ ತಡರಾತ್ರಿ 2 ಗಂಟೆಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮಡಿಕೇರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಬೆಳಗ್ಗೆ 5 ಗಂಟೆಗೆ ಮೃತಪಟ್ಟಿದ್ದಾರೆ. ಕೊಡಗಿನಲ್ಲಿ ಹೃದಯಸ್ತಂಭನಕ್ಕೊಳಗಾದವರಿಗೆ ಅಗತ್ಯ ಚಿಕಿತ್ಸೆ ಒದಗಿಸುವ ಆಸ್ಪತ್ರೆ ಇದ್ದಿದ್ದರೆ ಆತ ಬದುಕುಳಿಯುತ್ತಿದ್ದ. ಕೊಡಗಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಎಂಬುದು ಕನಸಾಗಿಯೇ ಉಳಿದಿದೆ” ಎಂದು ಟ್ವೀಟ್ ಮಾಡಲಾಗಿದ್ದು, ಈ ಟ್ವೀಟ್ಗೆ ಸ್ಪಂದಿಸಿರುವ ನೆಟ್ಟಿಗರು ಕೊಡಗಿನಂತಹ ಪ್ರವಾಸಿ ತಾಣಗಳಿರುವ ಜಿಲ್ಲೆಯಲ್ಲಿ ಒಳ್ಳೆಯ ಆಸ್ಪತ್ರೆ ಇಲ್ಲದಿರುವ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ, ಕಿಡಿಕಾರಿದ್ದಾರೆ ಹಾಗೂ ಸಂಬಂಧಪಟ್ಟ ರಾಜಕೀಯ ವ್ಯಕ್ತಿಗಳ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…