ಜಿಲ್ಲೆಗಳು

ನೇತ್ರರಾಜು ಸ್ಮರಣೆಯ ಕ್ಯಾಲೆಂಡರ್ ಲೋಕಾರ್ಪಣೆ

ನೇತ್ರಾರಾಜು ಕೊನೆಯವರೆಗೆ ತಾನು ತೆಗೆದ ಚಿತ್ರಗಳನ್ನು ಉತ್ತಮ ಎಂದು ಹೇಳಿಕೊಳ್ಳಲಿಲ್ಲ: ಕೃಪಾಕರ

ಮೈಸೂರು: ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಸಂಜೆ ‘ನೇತ್ರರಾಜು ಸ್ಮರಣೆ’ಯಲ್ಲಿ ಪತ್ರಿಕಾ ಛಾಯಾಗ್ರಾಹಕ ಎಸ್.ಆರ್.ಮಧುಸೂದನ್ ಹೊರ ತಂದಿರುವ ೨೦೨೩ರ ಕ್ಯಾಲೆಂಡರ್ ಅನ್ನು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಖ್ಯಾತ ವನ್ಯಜೀವಿ ತಜ್ಞರಾದ ಕೃಪಾಕರ-ಸೇನಾನಿ ಲೋಕಾರ್ಪಣೆಗೊಳಿಸಿದರು.

ನಂತರ ಮಾತನಾಡಿದ ಕೃಪಾಕರ ಅವರು, ನಮ್ಮ ನಡುವೆ ನೇತ್ರರಾಜು ಇಲ್ಲ ಅನ್ನಿಸುವುದಿಲ್ಲ. ಅವರೊಂದಿಗೆ ದೀರ್ಘ ಸಮಯ ಒಡನಾಟ ಇತ್ತು. ಟೋಪಿ ಹಾಕಿಸಿಕೊಳ್ಳುವುದು ಅವರ ಹವ್ಯಾಸವಾಗಿತ್ತು. ಹುಡುಕಿ ಹುಡುಕಿ ಟೋಪಿ ಹಾಕಿಸಿಕೊಳ್ಳುತ್ತಿದ್ದರು ಎಂದು ಹೇಳಿದರು.
ಕುತೂಹಲ ಇದ್ದವರಿಗೆ ಶಿಕ್ಷಣ ಬೇಕಿಲ್ಲ. ನೇತ್ರಾರಾಜು ಅವರಿಗೆ ಅಪರಿಮಿತವಾದ ಕುತೂಹಲ ಇತ್ತು. ಶಿಕ್ಷಣ ಪಡೆಯದಿದ್ದರೂ ಟೆಕ್ನಾಲಜಿ ಬಗ್ಗೆ ತಿಳಿವಳಿಕೆ ಇತ್ತು. ಹೊಸ ಹೊಸ ಸಾಫ್ಟ್‌ವೇರ್ ತರಿಸಿ ಪ್ರಯೋಗ ಮಾಡುತ್ತಿದ್ದರು. ಪ್ರಯೋಗ ಮಾಡುತ್ತಲೇ ಸಾಲಕ್ಕೆ ಸಿಲುಕಿದರು. ಕೊನೆಯವರೆಗೆ ತಾನು ತೆಗೆದ ಚಿತ್ರಗಳನ್ನು ಉತ್ತಮ ಎಂದು ಹೇಳಿಕೊಳ್ಳಲಿಲ್ಲ. ಇನ್ನೂ ಉತ್ತಮ ಚಿತ್ರ ತೆಗೆಯಬೇಕೆಂದು ಹಂಬಲಿಸುತ್ತಿದ್ದರು ಎಂದು ತಿಳಿಸಿದರು.

ಸೇನಾನಿ ಮಾತನಾಡಿ, ಛಾಯಾಗ್ರಾಹಕ ನೇತ್ರರಾಜು ಅಸಂಗತ ಕತೆಯಂತೆ ಕಾಣುತ್ತಾರೆ. ಝೆನ್ ವರ್ಣಿಸಲಾಗದಂತೆಯೇ ನೇತ್ರಾ ಕ್ಯಾರೆಕ್ಟರ್ ಹಿಡಿದಿಡುವುದು ಕಷ್ಟ. ನೇತ್ರರಾಜು ಇಲ್ಲದ ಕಲಾಮಂದಿರ ಕಲ್ಪಿಸಿಕೊಳ್ಳುವುದು ಕಷ್ಟವಾಗುತ್ತದೆ ಎಂದರಲ್ಲದೆ, ಸಾಹಿತ್ಯದ ಕಾರ್ಯಕ್ರಮಗಳು, ಚಳವಳಿಗಳಲ್ಲಿ ಅವರೊಂದಿಗಿನ ಒಡನಾಟವನ್ನು ಸ್ಮರಿಸಿದರು.

ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ನೇತ್ರರಾಜು ಅವರನ್ನು ಒಂದು ಬೆರಗು ಎಂದಿದ್ದರು. ಅವರಿಗೆ ಭೂತವೇ ಇಲ್ಲ. ಭವಿಷ್ಯದ ಬಗ್ಗೆ ಚಿಂತೆ ಇಲ್ಲ. ನಿಜವಾದ ದಿಗಂಬರ ಜೈನ ಎಂದು ನುಡಿದಿದ್ದಾರೆ ಎಂದು ಹೇಳಿದರು.
ಪತ್ರಿಕಾ ಛಾಯಾಗ್ರಾಹಕ ಎಸ್.ಆರ್.ಮಧುಸೂದನ್, ನೇತ್ರರಾಜು ಅವರ ಪುತ್ರಿ ಛಾಯಾಗ್ರಾಹಕಿ ನಿತ್ಯಾ, ನಗರ ಪಾಲಿಕೆ ಮಾಜಿ ಸದಸ್ಯ ಸ್ನೇಕ್ ಶ್ಯಾಂ ಹಾಜರಿದ್ದರು.

andolanait

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

1 hour ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

2 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

2 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

2 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

3 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

3 hours ago