ನೇತ್ರಾರಾಜು ಕೊನೆಯವರೆಗೆ ತಾನು ತೆಗೆದ ಚಿತ್ರಗಳನ್ನು ಉತ್ತಮ ಎಂದು ಹೇಳಿಕೊಳ್ಳಲಿಲ್ಲ: ಕೃಪಾಕರ
ಮೈಸೂರು: ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಸಂಜೆ ‘ನೇತ್ರರಾಜು ಸ್ಮರಣೆ’ಯಲ್ಲಿ ಪತ್ರಿಕಾ ಛಾಯಾಗ್ರಾಹಕ ಎಸ್.ಆರ್.ಮಧುಸೂದನ್ ಹೊರ ತಂದಿರುವ ೨೦೨೩ರ ಕ್ಯಾಲೆಂಡರ್ ಅನ್ನು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಖ್ಯಾತ ವನ್ಯಜೀವಿ ತಜ್ಞರಾದ ಕೃಪಾಕರ-ಸೇನಾನಿ ಲೋಕಾರ್ಪಣೆಗೊಳಿಸಿದರು.
ನಂತರ ಮಾತನಾಡಿದ ಕೃಪಾಕರ ಅವರು, ನಮ್ಮ ನಡುವೆ ನೇತ್ರರಾಜು ಇಲ್ಲ ಅನ್ನಿಸುವುದಿಲ್ಲ. ಅವರೊಂದಿಗೆ ದೀರ್ಘ ಸಮಯ ಒಡನಾಟ ಇತ್ತು. ಟೋಪಿ ಹಾಕಿಸಿಕೊಳ್ಳುವುದು ಅವರ ಹವ್ಯಾಸವಾಗಿತ್ತು. ಹುಡುಕಿ ಹುಡುಕಿ ಟೋಪಿ ಹಾಕಿಸಿಕೊಳ್ಳುತ್ತಿದ್ದರು ಎಂದು ಹೇಳಿದರು.
ಕುತೂಹಲ ಇದ್ದವರಿಗೆ ಶಿಕ್ಷಣ ಬೇಕಿಲ್ಲ. ನೇತ್ರಾರಾಜು ಅವರಿಗೆ ಅಪರಿಮಿತವಾದ ಕುತೂಹಲ ಇತ್ತು. ಶಿಕ್ಷಣ ಪಡೆಯದಿದ್ದರೂ ಟೆಕ್ನಾಲಜಿ ಬಗ್ಗೆ ತಿಳಿವಳಿಕೆ ಇತ್ತು. ಹೊಸ ಹೊಸ ಸಾಫ್ಟ್ವೇರ್ ತರಿಸಿ ಪ್ರಯೋಗ ಮಾಡುತ್ತಿದ್ದರು. ಪ್ರಯೋಗ ಮಾಡುತ್ತಲೇ ಸಾಲಕ್ಕೆ ಸಿಲುಕಿದರು. ಕೊನೆಯವರೆಗೆ ತಾನು ತೆಗೆದ ಚಿತ್ರಗಳನ್ನು ಉತ್ತಮ ಎಂದು ಹೇಳಿಕೊಳ್ಳಲಿಲ್ಲ. ಇನ್ನೂ ಉತ್ತಮ ಚಿತ್ರ ತೆಗೆಯಬೇಕೆಂದು ಹಂಬಲಿಸುತ್ತಿದ್ದರು ಎಂದು ತಿಳಿಸಿದರು.
ಸೇನಾನಿ ಮಾತನಾಡಿ, ಛಾಯಾಗ್ರಾಹಕ ನೇತ್ರರಾಜು ಅಸಂಗತ ಕತೆಯಂತೆ ಕಾಣುತ್ತಾರೆ. ಝೆನ್ ವರ್ಣಿಸಲಾಗದಂತೆಯೇ ನೇತ್ರಾ ಕ್ಯಾರೆಕ್ಟರ್ ಹಿಡಿದಿಡುವುದು ಕಷ್ಟ. ನೇತ್ರರಾಜು ಇಲ್ಲದ ಕಲಾಮಂದಿರ ಕಲ್ಪಿಸಿಕೊಳ್ಳುವುದು ಕಷ್ಟವಾಗುತ್ತದೆ ಎಂದರಲ್ಲದೆ, ಸಾಹಿತ್ಯದ ಕಾರ್ಯಕ್ರಮಗಳು, ಚಳವಳಿಗಳಲ್ಲಿ ಅವರೊಂದಿಗಿನ ಒಡನಾಟವನ್ನು ಸ್ಮರಿಸಿದರು.
ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ನೇತ್ರರಾಜು ಅವರನ್ನು ಒಂದು ಬೆರಗು ಎಂದಿದ್ದರು. ಅವರಿಗೆ ಭೂತವೇ ಇಲ್ಲ. ಭವಿಷ್ಯದ ಬಗ್ಗೆ ಚಿಂತೆ ಇಲ್ಲ. ನಿಜವಾದ ದಿಗಂಬರ ಜೈನ ಎಂದು ನುಡಿದಿದ್ದಾರೆ ಎಂದು ಹೇಳಿದರು.
ಪತ್ರಿಕಾ ಛಾಯಾಗ್ರಾಹಕ ಎಸ್.ಆರ್.ಮಧುಸೂದನ್, ನೇತ್ರರಾಜು ಅವರ ಪುತ್ರಿ ಛಾಯಾಗ್ರಾಹಕಿ ನಿತ್ಯಾ, ನಗರ ಪಾಲಿಕೆ ಮಾಜಿ ಸದಸ್ಯ ಸ್ನೇಕ್ ಶ್ಯಾಂ ಹಾಜರಿದ್ದರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…