Mysore
20
scattered clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಚುನಾವಣೆಯಲ್ಲಿ ತಟಸ್ಥ ನಿಲುವು : ಸುಮಲತಾ

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬೆಂಬಲವಾಗಿ ನಿಲ್ಲದೆ, ತಟಸ್ಥವಾಗಿ ಉಳಿಯುವೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಿಳಿಸಿದರು.
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ವಿಜಯನಗರದಲ್ಲಿ ನೂತನವಾಗಿ ನಾಮಕರಣ ಮಾಡಿರುವ ‘ಡಾ.ಎಂ.ಎಚ್.ಅಂಬರೀಶ್ ರಸ್ತೆ’ ನಾಮಫಲಕವನ್ನು ಶನಿವಾರ ಸಂಜೆ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಂಬರುವ ಚುನಾವಣೆಗೆ ಸ್ಪರ್ಧೆ ಮಾಡುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಈವರೆಗೂ ತಟಸ್ಥವಾಗಿಯೇ ಇದ್ದೀನಿ. ಯಾರೊಂದಿಗೂ ಮಾತುಕತೆ ನಡೆಸಿಲ್ಲ. ಬೆಂಬಲದ ಬಗ್ಗೆ ಮಾತನಾಡಿಲ್ಲ. ಚುನಾವಣೆಗೆ ಸ್ಪರ್ಧೆ ಮಾಡುವುದು ಪುತ್ರ ಅಭಿಷೇಕ್‌ಗೆ ಬಿಟ್ಟದ್ದು ಎಂದು ಹೇಳಿದರು.
ವಿಜಯನಗರದ ಕಾಳಿದಾಸ ರಸ್ತೆಯಿಂದ ಹೆಬ್ಬಾಳು ಬಳಿಯ ರಿಂಗ್‌ರೋಡ್‌ಗೆ ಸಂಪರ್ಕಿಸುವ ನಡುವಿನ ೩.೫ ಕಿ.ಮೀ ರಸ್ತೆಗೆ ಅಂಬರೀಶ್ ಹೆಸರು ನಾಮಕರಣಮಾಡಿದ್ದು ಸಂತಸದ ಕ್ಷಣವಾಗಿದೆ. ಅಂಬರೀಶ್‌ಗೆ ಮೈಸೂರು ಇಷ್ಟವಾದ ಸ್ಥಳ. ಅಂಬರೀಶ್ ಕುಟುಂಬದವರೂ ಇಲ್ಲಿಯೇ ಇದ್ದಾರೆ. ಅಭಿಮಾನಿಗಳ ಬೇಡಿಕೆಯಿಂದ ಈ ರಸ್ತೆಗೆ ಹೆಸರು ಇಡಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ನಟ ಅಭಿಷೇಕ್ ಅಂಬರೀಶ್ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಮದ್ದೂರು ಕ್ಷೇತ್ರದಲ್ಲಿ ನನ್ನ ಹೆಸರು ಕೇಳಿ ಬರುತ್ತಿದೆ. ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದರು.
ಶಾಸಕ ಎಲ್.ನಾಗೇಂದ್ರ, ಮಹಾಪೌರ ಶಿವಕುಮಾರ್ ಇತರರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!