ಜಿಲ್ಲೆಗಳು

ಚುನಾವಣೆಯಲ್ಲಿ ತಟಸ್ಥ ನಿಲುವು : ಸುಮಲತಾ

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬೆಂಬಲವಾಗಿ ನಿಲ್ಲದೆ, ತಟಸ್ಥವಾಗಿ ಉಳಿಯುವೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಿಳಿಸಿದರು.
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ವಿಜಯನಗರದಲ್ಲಿ ನೂತನವಾಗಿ ನಾಮಕರಣ ಮಾಡಿರುವ ‘ಡಾ.ಎಂ.ಎಚ್.ಅಂಬರೀಶ್ ರಸ್ತೆ’ ನಾಮಫಲಕವನ್ನು ಶನಿವಾರ ಸಂಜೆ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಂಬರುವ ಚುನಾವಣೆಗೆ ಸ್ಪರ್ಧೆ ಮಾಡುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಈವರೆಗೂ ತಟಸ್ಥವಾಗಿಯೇ ಇದ್ದೀನಿ. ಯಾರೊಂದಿಗೂ ಮಾತುಕತೆ ನಡೆಸಿಲ್ಲ. ಬೆಂಬಲದ ಬಗ್ಗೆ ಮಾತನಾಡಿಲ್ಲ. ಚುನಾವಣೆಗೆ ಸ್ಪರ್ಧೆ ಮಾಡುವುದು ಪುತ್ರ ಅಭಿಷೇಕ್‌ಗೆ ಬಿಟ್ಟದ್ದು ಎಂದು ಹೇಳಿದರು.
ವಿಜಯನಗರದ ಕಾಳಿದಾಸ ರಸ್ತೆಯಿಂದ ಹೆಬ್ಬಾಳು ಬಳಿಯ ರಿಂಗ್‌ರೋಡ್‌ಗೆ ಸಂಪರ್ಕಿಸುವ ನಡುವಿನ ೩.೫ ಕಿ.ಮೀ ರಸ್ತೆಗೆ ಅಂಬರೀಶ್ ಹೆಸರು ನಾಮಕರಣಮಾಡಿದ್ದು ಸಂತಸದ ಕ್ಷಣವಾಗಿದೆ. ಅಂಬರೀಶ್‌ಗೆ ಮೈಸೂರು ಇಷ್ಟವಾದ ಸ್ಥಳ. ಅಂಬರೀಶ್ ಕುಟುಂಬದವರೂ ಇಲ್ಲಿಯೇ ಇದ್ದಾರೆ. ಅಭಿಮಾನಿಗಳ ಬೇಡಿಕೆಯಿಂದ ಈ ರಸ್ತೆಗೆ ಹೆಸರು ಇಡಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ನಟ ಅಭಿಷೇಕ್ ಅಂಬರೀಶ್ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಮದ್ದೂರು ಕ್ಷೇತ್ರದಲ್ಲಿ ನನ್ನ ಹೆಸರು ಕೇಳಿ ಬರುತ್ತಿದೆ. ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದರು.
ಶಾಸಕ ಎಲ್.ನಾಗೇಂದ್ರ, ಮಹಾಪೌರ ಶಿವಕುಮಾರ್ ಇತರರು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

45 seconds ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

9 mins ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

11 mins ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

13 mins ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

15 mins ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

18 mins ago