ಜಿಲ್ಲೆಗಳು

ಚುನಾವಣೆಯಲ್ಲಿ ತಟಸ್ಥ ನಿಲುವು : ಸುಮಲತಾ

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬೆಂಬಲವಾಗಿ ನಿಲ್ಲದೆ, ತಟಸ್ಥವಾಗಿ ಉಳಿಯುವೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಿಳಿಸಿದರು.
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ವಿಜಯನಗರದಲ್ಲಿ ನೂತನವಾಗಿ ನಾಮಕರಣ ಮಾಡಿರುವ ‘ಡಾ.ಎಂ.ಎಚ್.ಅಂಬರೀಶ್ ರಸ್ತೆ’ ನಾಮಫಲಕವನ್ನು ಶನಿವಾರ ಸಂಜೆ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಂಬರುವ ಚುನಾವಣೆಗೆ ಸ್ಪರ್ಧೆ ಮಾಡುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಈವರೆಗೂ ತಟಸ್ಥವಾಗಿಯೇ ಇದ್ದೀನಿ. ಯಾರೊಂದಿಗೂ ಮಾತುಕತೆ ನಡೆಸಿಲ್ಲ. ಬೆಂಬಲದ ಬಗ್ಗೆ ಮಾತನಾಡಿಲ್ಲ. ಚುನಾವಣೆಗೆ ಸ್ಪರ್ಧೆ ಮಾಡುವುದು ಪುತ್ರ ಅಭಿಷೇಕ್‌ಗೆ ಬಿಟ್ಟದ್ದು ಎಂದು ಹೇಳಿದರು.
ವಿಜಯನಗರದ ಕಾಳಿದಾಸ ರಸ್ತೆಯಿಂದ ಹೆಬ್ಬಾಳು ಬಳಿಯ ರಿಂಗ್‌ರೋಡ್‌ಗೆ ಸಂಪರ್ಕಿಸುವ ನಡುವಿನ ೩.೫ ಕಿ.ಮೀ ರಸ್ತೆಗೆ ಅಂಬರೀಶ್ ಹೆಸರು ನಾಮಕರಣಮಾಡಿದ್ದು ಸಂತಸದ ಕ್ಷಣವಾಗಿದೆ. ಅಂಬರೀಶ್‌ಗೆ ಮೈಸೂರು ಇಷ್ಟವಾದ ಸ್ಥಳ. ಅಂಬರೀಶ್ ಕುಟುಂಬದವರೂ ಇಲ್ಲಿಯೇ ಇದ್ದಾರೆ. ಅಭಿಮಾನಿಗಳ ಬೇಡಿಕೆಯಿಂದ ಈ ರಸ್ತೆಗೆ ಹೆಸರು ಇಡಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ನಟ ಅಭಿಷೇಕ್ ಅಂಬರೀಶ್ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಮದ್ದೂರು ಕ್ಷೇತ್ರದಲ್ಲಿ ನನ್ನ ಹೆಸರು ಕೇಳಿ ಬರುತ್ತಿದೆ. ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದರು.
ಶಾಸಕ ಎಲ್.ನಾಗೇಂದ್ರ, ಮಹಾಪೌರ ಶಿವಕುಮಾರ್ ಇತರರು ಹಾಜರಿದ್ದರು.

andolanait

Recent Posts

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

12 mins ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

1 hour ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

2 hours ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

3 hours ago

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

4 hours ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

4 hours ago