ಹನೂರ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೂತನವಾಗಿ 22 ಕೊಠಡಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.
ಪಟ್ಟಣದ ಶ್ರೀ ಜಿ ವಿ ಗೌಡ ಪದವಿಪೂರ್ವ ಕಾಲೇಜು ಆವರಣದಲ್ಲಿ ನೂತನ ಕೊಠಡಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಹನೂರು ಶೈಕ್ಷಣಿಕ ವಲಯದ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿ ಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಿರುವುದರಿಂದ ಕೊಠಡಿಗಳ ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆ ವಿವೇಕ ಯೋಜನೆಯಡಿ ಸರ್ಕಾರ 22 ಹೊಸ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದೆ. ಮುಂದಿನ ಶೈಕ್ಷಣಿಕ ವರ್ಷಕ್ಕೆ ಈ ಕೊಠಡಿಗಳ ಸೌಲಭ್ಯ ದೊರಕಲಿದೆ .ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಿರ್ವಹಿಸಿ ಸುಮಾರು 30 ವರ್ಷ ಬಾಳಿಕೆ ಬರುವಂತೆ ನಿರ್ಮಾಣ ಮಾಡುವಂತೆ ಸಲಹೆ ನೀಡಿದರು.
ಕೇಸರಿ ಬಣ್ಣಕ್ಕೆ ಆಕ್ಷೇಪ: ಯಾವುದೇ ಒಂದು ಪಕ್ಷ ಚುನಾವಣೆಯಲ್ಲಿ ಅಧಿಕಾರ ಪಡೆಯಲು ಚಿನ್ಹೆ ಬಳಸಬೇಕು.ಅದನ್ನು ಹೊರತುಪಡಿಸಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದರೆ ಕಾಂಗ್ರೆಸ್ ಚಿಹ್ನೆ ಜಾ.ದಳ ಅಧಿಕಾರಕ್ಕೆ ಬಂದರೆ ಅದರ ಚಿಹ್ನೆ ಬಿಜೆಪಿ ಬಂದರೆ ಕಮಲದ ಚಿಹ್ನೆ ಬಣ್ಣ ಬಳಿಸುವುದು ತಪ್ಪು, ಸರ್ಕಾರ ನಡೆಸುವುದು ಜನರ ಆದಾಯದಿಂದ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಸಹ ಶಾಲೆಗೆ ಚೆನ್ನಾಗಿ ಕಾಣಲು ಯಾವ ಬಣ್ಣ ಬಳಸಬೇಕು ಅದನ್ನು ಬಳಸಬೇಕು. ಇದುವರೆಗೂ ಯಾವುದೇ ಒಂದು ಸರ್ಕಾರ ತಮ್ಮ ಪಕ್ಷಗಳ ಚಿಹ್ನೆಯ ಬಣ್ಣವನ್ನು ಬಳಿಸಿಲ್ಲ. ಈಗಿನ ಬಿಜೆಪಿ ಸರ್ಕಾರ ಕಮಲದ ಚಿಹ್ನೆ ಕೇಸರಿ ಎಂದು ಬಣ್ಣ ಬಳಿಯುವ ಯೋಚನೆ ಮಾಡಿದ್ದರು ಅದು ತಪ್ಪು. ಬಿಜೆಪಿಯವರು ಬೇಕಿದ್ದರೆ ತಮ್ಮ ಸ್ವಂತ ಹಣದಿಂದ ಶಾಲೆಗಳನ್ನು ಅಭಿವೃದ್ಧಿಪಡಿಸಿ ಯಾವ ಬಣ್ಣ ಬೇಕಾದರು ಬಳಸಿಕೊಳ್ಳಲಿ ಇದನ್ನು ಹೊರತುಪಡಿಸಿ , ಯಾವುದೇ ಕಾರಣಕ್ಕೂ ಉದ್ದೇಶಪೂರ್ವಕವಾಗಿ ಕೇಸರಿ ಬಣ್ಣ ಬಳೆಯುವುದಕ್ಕೆ ನನ್ನ ಆಕ್ಷೇಪವಿದೆ ಎಂದು ಶಾಸಕ ಆರ್ ನರೇಂದ್ರ ಪ್ರತಿಕ್ರಿಯಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಸದಸ್ಯರಾದ ಸಂಪತ್ ಕುಮಾರ್ ಸೋಮಶೇಖರ್, ಹರೀಶ್, ಪ್ರಾಂಶುಪಾಲ ಸ್ವಾಮಿ, ಮುಖ್ಯ ಶಿಕ್ಷಕ ಲಿಂಗರಾಜು, ಸಹ ಶಿಕ್ಷಕ ಶಾಂತರಾಜು ಬಿ ಆರ್ ಸಿ ದಿನೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು
ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.…
ಬೆಂಗಳೂರು: ಬಿಪಿಎಲ್ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.…
ಬೆಂಗಳೂರು: ನಟ ದರ್ಶನ್ ಹಾಗೂ ನಟ ಕಿಚ್ಚ ಸುದೀಪ್ ಫ್ಯಾನ್ಸ್ ವಾರ್ ತಾರಕಕ್ಕೇರಿರುವ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್…
ಮೈಸೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…
ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…
ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…