ಜಿಲ್ಲೆಗಳು

ನೂತನ ಕೊಠಡಿಗೆ ಶಾಸಕ ಆರ್ ನರೇಂದ್ರ ರವರಿಂದ ಭೂಮಿ ಪೂಜೆ

ಹನೂರ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೂತನವಾಗಿ 22 ಕೊಠಡಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.

ಪಟ್ಟಣದ ಶ್ರೀ ಜಿ ವಿ ಗೌಡ ಪದವಿಪೂರ್ವ ಕಾಲೇಜು ಆವರಣದಲ್ಲಿ ನೂತನ ಕೊಠಡಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಹನೂರು ಶೈಕ್ಷಣಿಕ ವಲಯದ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿ ಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಿರುವುದರಿಂದ ಕೊಠಡಿಗಳ ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆ ವಿವೇಕ ಯೋಜನೆಯಡಿ ಸರ್ಕಾರ 22 ಹೊಸ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದೆ. ಮುಂದಿನ ಶೈಕ್ಷಣಿಕ ವರ್ಷಕ್ಕೆ ಈ ಕೊಠಡಿಗಳ ಸೌಲಭ್ಯ ದೊರಕಲಿದೆ .ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಿರ್ವಹಿಸಿ ಸುಮಾರು 30 ವರ್ಷ ಬಾಳಿಕೆ ಬರುವಂತೆ ನಿರ್ಮಾಣ ಮಾಡುವಂತೆ ಸಲಹೆ ನೀಡಿದರು.

ಕೇಸರಿ ಬಣ್ಣಕ್ಕೆ ಆಕ್ಷೇಪ: ಯಾವುದೇ ಒಂದು ಪಕ್ಷ ಚುನಾವಣೆಯಲ್ಲಿ ಅಧಿಕಾರ ಪಡೆಯಲು ಚಿನ್ಹೆ ಬಳಸಬೇಕು.ಅದನ್ನು ಹೊರತುಪಡಿಸಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದರೆ ಕಾಂಗ್ರೆಸ್ ಚಿಹ್ನೆ ಜಾ.ದಳ ಅಧಿಕಾರಕ್ಕೆ ಬಂದರೆ ಅದರ ಚಿಹ್ನೆ ಬಿಜೆಪಿ ಬಂದರೆ ಕಮಲದ ಚಿಹ್ನೆ ಬಣ್ಣ ಬಳಿಸುವುದು ತಪ್ಪು, ಸರ್ಕಾರ ನಡೆಸುವುದು ಜನರ ಆದಾಯದಿಂದ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಸಹ ಶಾಲೆಗೆ ಚೆನ್ನಾಗಿ ಕಾಣಲು ಯಾವ ಬಣ್ಣ ಬಳಸಬೇಕು ಅದನ್ನು ಬಳಸಬೇಕು. ಇದುವರೆಗೂ ಯಾವುದೇ ಒಂದು ಸರ್ಕಾರ ತಮ್ಮ ಪಕ್ಷಗಳ ಚಿಹ್ನೆಯ ಬಣ್ಣವನ್ನು ಬಳಿಸಿಲ್ಲ. ಈಗಿನ ಬಿಜೆಪಿ ಸರ್ಕಾರ ಕಮಲದ ಚಿಹ್ನೆ ಕೇಸರಿ ಎಂದು ಬಣ್ಣ ಬಳಿಯುವ ಯೋಚನೆ ಮಾಡಿದ್ದರು ಅದು ತಪ್ಪು. ಬಿಜೆಪಿಯವರು ಬೇಕಿದ್ದರೆ ತಮ್ಮ ಸ್ವಂತ ಹಣದಿಂದ ಶಾಲೆಗಳನ್ನು ಅಭಿವೃದ್ಧಿಪಡಿಸಿ ಯಾವ ಬಣ್ಣ ಬೇಕಾದರು ಬಳಸಿಕೊಳ್ಳಲಿ ಇದನ್ನು ಹೊರತುಪಡಿಸಿ , ಯಾವುದೇ ಕಾರಣಕ್ಕೂ ಉದ್ದೇಶಪೂರ್ವಕವಾಗಿ ಕೇಸರಿ ಬಣ್ಣ ಬಳೆಯುವುದಕ್ಕೆ ನನ್ನ ಆಕ್ಷೇಪವಿದೆ ಎಂದು ಶಾಸಕ ಆರ್ ನರೇಂದ್ರ ಪ್ರತಿಕ್ರಿಯಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಸದಸ್ಯರಾದ ಸಂಪತ್ ಕುಮಾರ್ ಸೋಮಶೇಖರ್, ಹರೀಶ್, ಪ್ರಾಂಶುಪಾಲ ಸ್ವಾಮಿ, ಮುಖ್ಯ ಶಿಕ್ಷಕ ಲಿಂಗರಾಜು, ಸಹ ಶಿಕ್ಷಕ ಶಾಂತರಾಜು ಬಿ ಆರ್ ಸಿ ದಿನೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

23 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

23 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

23 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

23 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

24 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

24 hours ago