ಹನೂರು: ಸೂಳೇರಿಪಾಳ್ಯ ಗ್ರಾಮಪಂಚಾಯಿತಿ ವ್ಯಾಪ್ತಿಯ ಆರನೇ ವಾರ್ಡ್ ಗೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತ ಸದಸ್ಯ ಬಸವರಾಜು ಶಾಸಕ ಆರ್ ನರೇಂದ್ರ ಅವರಿಗೆ ಸನ್ಮಾನಿಸಿದರು.
ಈ ವೇಳೆ ನೂತನ ಗ್ರಾಪಂ ಸದಸ್ಯ ಬಸವರಾಜು ಮಾತನಾಡಿ ನನಗೆ ಬೆಂಬಲ ನೀಡಿರುವ ವಾರ್ಡ್ ನ ಜನತೆಗೆ ಅವಶ್ಯಕವಾದ ಸಿಸಿ ರಸ್ತೆ, ವಿದ್ಯುತ್ ದೀಪ, ಚರಂಡಿ,ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳನ್ನು ದೊರಕಿಸುವಲ್ಲಿ ಮೊದಲ ಆದ್ಯತೆ ನೀಡುತ್ತೇನೆ. ಕಾಂಗ್ರೆಸ್ ಬೆಂಬಲಿತ ಸದಸ್ಯರೇ ಅಧ್ಯಕ್ಷರಾಗಿ ಇರುವುದರಿಂದ ನಮ್ಮ ವಾರ್ಡ್ ಗೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಇದೇ ವೇಳೆ ಗ್ರಾಪಂ ಅಧ್ಯಕ್ಷೆ ಸುಧಾ, ಪ್ರಾಥಮಿಕ ಕೃಷಿ ಪತ್ತಿನ ಅಧ್ಯಕ್ಷ ಸಿಕಂದರ್ ಪಾಷಾ, ಮುಖಂಡರುಗಳಾದ ಕಾಂಚಳ್ಳಿ ನಟರಾಜು, ಮಹದೇವು,ಕುಮಾರ್, ನವೀನ್, ನಾಗರಾಜು, ಶಿವಕುಮಾರ್, ವೆಂಕಟಪ್ಪ, ಸುರೇಶ್ ,ಮಹದೇಶ್, ಜ್ಯೋತಿ ರಾಚಪ್ಪ, ಸೇರಿದಂತೆ ಇನ್ನಿತರರು ಹಾಜರಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…