ಜಿಲ್ಲೆಗಳು

ಮುಡಾ ಅಧ್ಯಕ್ಷರಾಗಿ ಯಶಸ್ವಿ ಸೋಮಶೇಖರ್ ನೇಮಕ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ, ಮೈಸೂರು ನಗರ ಬಿಜೆಪಿ ಮಾಜಿಪ್ರಧಾನ ಕಾರ್ಯದರ್ಶಿ ಯಶಸ್ವಿ ಎಸ್. ಸೋಮಶೇಖರ್ ಅವರನ್ನು ರಾಜ್ಯಸರ್ಕಾರ ನೇಮಿಸಿದೆ. ಚುನಾವಣೆಗೆ ಕೇವಲ ನಾಲ್ಕು ತಿಂಗಳು ಬಾಕಿ ಇರುವ ಹೊತ್ತಲ್ಲೇ ಖಾಲಿ ಇದ್ದ ಮುಡಾ ಅಧ್ಯಕ್ಷ ಸ್ಥಾನಕ್ಕೆ ನೇಮಿಸುವ ಮೂಲಕ ಗೊಂದಲಕ್ಕೆ ತೆರೆ ಎಳೆಯಲಾಗಿದೆ.
ರಾಜ್ಯದ ಹಲವಾರು ನಿಗಮ ಮಂಡಳಿ,ಪ್ರಾಧಿಕಾರದ ಅಧ್ಯಕ್ಷರನ್ನು ಬದಲಾಯಿಸಿ ಹೊಸಬರನ್ನು ನೇಮಕ ಮಾಡಿದಾಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಎಚ್.ವಿ.ರಾಜೀವ್ ಅವರ ಸ್ಥಾನಕ್ಕೆ ಯಾರನ್ನೂ ನೇಮಿಸಿರಲಿಲ್ಲ. ಹೀಗಾಗಿ, ಜುಲೈ 25 ರಂದು ಎಚ್.ವಿ.ರಾಜೀವ್ ಅವರ ಅಧಿಕಾರಾವಧಿ ಅಂತ್ಯವಾಗಿತ್ತು. ಅಲ್ಲಿಂದ ಈತನಕ ಯಾರನ್ನೂ ನೇಮಿಸದೆ ಖಾಲಿ ಉಳಿದಿತ್ತು. ಕಾಡಾ,ಮೃಗಾಲಯ,ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ,ಮೈಲ್ಯಾಕ್ಗೆ ನೂತನ ಅಧ್ಯಕ್ಷರನ್ನು ನೇಮಿಸಿದರೂ ಮುಡಾದ ಹುದ್ದೆ ಖಾಲಿ ಉಳಿದಿದ್ದರಿಂದ ಸಾಕಷ್ಟು ರಾಜಕೀಯ ಒತ್ತಡಗಳು ಉಂಟಾಗಿತ್ತು. ಅದರಂತೆ, ಬಿಜೆಪಿ ಮುಖಂಡ ಯಶಸ್ವಿನಿ ಸೋಮಶೇಖರ್ ಅವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಕಂದಾಯ ಸಚಿವ ಆರ್.ಅಶೋಕ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದರು.

ಯಶಸ್ವಿ ಕುರಿತು: ಮೈಸೂರು ನಗರದಲ್ಲಿ ಕಳೆದ ಎರಡು ದಶಕಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡಿಕೊಂಡು ಬಂದಿರುವ ಯಶಸ್ವಿ ಸೋಮಶೇಖರ್ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ,ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿಮೂರು ವರ್ಷಗಳ ಕಾಲ ಕೆಲಸ ಮಾಡಿದ್ದರು. ರಿಯಲ್ ಎಸ್ಟೇಟ್, ಹೋಟೆಲ್ ಉದ್ಯಮದಲ್ಲೂ ತಮ್ಮನ್ನು ಗುರುತಿಸಿಕೊಂಡು ಕೆಲಸ ಮಾಡುತ್ತಿರುವ ಅವರಿಗೆ ಈಗ ಪ್ರತಿಷ್ಠಿತ ಮುಡಾ ಅಧ್ಯಕ್ಷಗಾದಿ ಒಲಿದಿದೆ. ನೇಮಕಾತಿ ಆದೇಶ ಸಿಕ್ಕಿರುವ ಕಾರಣ ಬುಧವಾರ ಬೆಳಿಗ್ಗೆ 11ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ.

andolanait

Recent Posts

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌

ಬೆಂಗಳೂರು: ಮೈಸೂರು ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಪವಿತ್ರಾ ಎಂಬ…

21 mins ago

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಸದ್ಯಕ್ಕೆ ಬಸ್‌ ಟಿಕೆಟ್‌ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…

52 mins ago

ಹಾಸನ| ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ: ಸ್ಕೂಟರ್‌ನಿಂದ ಬಿದ್ದು ಯುವತಿ ಸಾವು

ಹಾಸನ: ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ…

1 hour ago

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

4 hours ago

ಸೌಂದರ್ಯ ಹದಗೆಡಿಸುವ ಫ್ಲೆಕ್ಸ್ ಹಾವಳಿ ತಡೆ ಅಗತ್ಯ

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…

4 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಚಿಂತೆಯಲ್ಲಿದ್ದಾರೆ?

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…

4 hours ago