ಜಿಲ್ಲೆಗಳು

ಮುಡಾ ಅಧ್ಯಕ್ಷರಾಗಿ ಯಶಸ್ವಿ ಸೋಮಶೇಖರ್ ನೇಮಕ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ, ಮೈಸೂರು ನಗರ ಬಿಜೆಪಿ ಮಾಜಿಪ್ರಧಾನ ಕಾರ್ಯದರ್ಶಿ ಯಶಸ್ವಿ ಎಸ್. ಸೋಮಶೇಖರ್ ಅವರನ್ನು ರಾಜ್ಯಸರ್ಕಾರ ನೇಮಿಸಿದೆ. ಚುನಾವಣೆಗೆ ಕೇವಲ ನಾಲ್ಕು ತಿಂಗಳು ಬಾಕಿ ಇರುವ ಹೊತ್ತಲ್ಲೇ ಖಾಲಿ ಇದ್ದ ಮುಡಾ ಅಧ್ಯಕ್ಷ ಸ್ಥಾನಕ್ಕೆ ನೇಮಿಸುವ ಮೂಲಕ ಗೊಂದಲಕ್ಕೆ ತೆರೆ ಎಳೆಯಲಾಗಿದೆ.
ರಾಜ್ಯದ ಹಲವಾರು ನಿಗಮ ಮಂಡಳಿ,ಪ್ರಾಧಿಕಾರದ ಅಧ್ಯಕ್ಷರನ್ನು ಬದಲಾಯಿಸಿ ಹೊಸಬರನ್ನು ನೇಮಕ ಮಾಡಿದಾಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಎಚ್.ವಿ.ರಾಜೀವ್ ಅವರ ಸ್ಥಾನಕ್ಕೆ ಯಾರನ್ನೂ ನೇಮಿಸಿರಲಿಲ್ಲ. ಹೀಗಾಗಿ, ಜುಲೈ 25 ರಂದು ಎಚ್.ವಿ.ರಾಜೀವ್ ಅವರ ಅಧಿಕಾರಾವಧಿ ಅಂತ್ಯವಾಗಿತ್ತು. ಅಲ್ಲಿಂದ ಈತನಕ ಯಾರನ್ನೂ ನೇಮಿಸದೆ ಖಾಲಿ ಉಳಿದಿತ್ತು. ಕಾಡಾ,ಮೃಗಾಲಯ,ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ,ಮೈಲ್ಯಾಕ್ಗೆ ನೂತನ ಅಧ್ಯಕ್ಷರನ್ನು ನೇಮಿಸಿದರೂ ಮುಡಾದ ಹುದ್ದೆ ಖಾಲಿ ಉಳಿದಿದ್ದರಿಂದ ಸಾಕಷ್ಟು ರಾಜಕೀಯ ಒತ್ತಡಗಳು ಉಂಟಾಗಿತ್ತು. ಅದರಂತೆ, ಬಿಜೆಪಿ ಮುಖಂಡ ಯಶಸ್ವಿನಿ ಸೋಮಶೇಖರ್ ಅವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಕಂದಾಯ ಸಚಿವ ಆರ್.ಅಶೋಕ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದರು.

ಯಶಸ್ವಿ ಕುರಿತು: ಮೈಸೂರು ನಗರದಲ್ಲಿ ಕಳೆದ ಎರಡು ದಶಕಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡಿಕೊಂಡು ಬಂದಿರುವ ಯಶಸ್ವಿ ಸೋಮಶೇಖರ್ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ,ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿಮೂರು ವರ್ಷಗಳ ಕಾಲ ಕೆಲಸ ಮಾಡಿದ್ದರು. ರಿಯಲ್ ಎಸ್ಟೇಟ್, ಹೋಟೆಲ್ ಉದ್ಯಮದಲ್ಲೂ ತಮ್ಮನ್ನು ಗುರುತಿಸಿಕೊಂಡು ಕೆಲಸ ಮಾಡುತ್ತಿರುವ ಅವರಿಗೆ ಈಗ ಪ್ರತಿಷ್ಠಿತ ಮುಡಾ ಅಧ್ಯಕ್ಷಗಾದಿ ಒಲಿದಿದೆ. ನೇಮಕಾತಿ ಆದೇಶ ಸಿಕ್ಕಿರುವ ಕಾರಣ ಬುಧವಾರ ಬೆಳಿಗ್ಗೆ 11ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ.

andolanait

Recent Posts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…

3 mins ago

ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌: ಕಿಚ್ಚ ಸುದೀಪ್‌ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌ ಬಗ್ಗೆ ನಟ ಕಿಚ್ಚ ಸುದೀಪ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…

25 mins ago

ಓದುಗರ ಪತ್ರ: ಮರಗಳ ಕೊಂಬೆಗಳನ್ನು ಕತ್ತರಿಸಿ

ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…

56 mins ago

ಓದುಗರ ಪತ್ರ:  ಕುಸ್ತಿಪಟುಗಳಿಗೆ ತರಬೇತಿ ಸ್ವಾಗತಾರ್ಹ

ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…

1 hour ago

ಓದುಗರ ಪತ್ರ:  ರಾಜ್ಯ ಸರ್ಕಾರಿ ನೌಕರರಿಗೆ ವಸ್ತ್ರಸಂಹಿತೆ ಒಳ್ಳೆಯ ಬೆಳವಣಿಗೆ

ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…

1 hour ago

ಓದುಗರ ಪತ್ರ:  ವರುಣ ನಾಲೆಗೆ ತಡೆಗೋಡೆ ನಿರ್ಮಿಸಿ

ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ.…

1 hour ago