ಜಿಲ್ಲೆಗಳು

ಮುಡಾ ಅಧ್ಯಕ್ಷರಾಗಿ ಯಶಸ್ವಿ ಸೋಮಶೇಖರ್ ನೇಮಕ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ, ಮೈಸೂರು ನಗರ ಬಿಜೆಪಿ ಮಾಜಿಪ್ರಧಾನ ಕಾರ್ಯದರ್ಶಿ ಯಶಸ್ವಿ ಎಸ್. ಸೋಮಶೇಖರ್ ಅವರನ್ನು ರಾಜ್ಯಸರ್ಕಾರ ನೇಮಿಸಿದೆ. ಚುನಾವಣೆಗೆ ಕೇವಲ ನಾಲ್ಕು ತಿಂಗಳು ಬಾಕಿ ಇರುವ ಹೊತ್ತಲ್ಲೇ ಖಾಲಿ ಇದ್ದ ಮುಡಾ ಅಧ್ಯಕ್ಷ ಸ್ಥಾನಕ್ಕೆ ನೇಮಿಸುವ ಮೂಲಕ ಗೊಂದಲಕ್ಕೆ ತೆರೆ ಎಳೆಯಲಾಗಿದೆ.
ರಾಜ್ಯದ ಹಲವಾರು ನಿಗಮ ಮಂಡಳಿ,ಪ್ರಾಧಿಕಾರದ ಅಧ್ಯಕ್ಷರನ್ನು ಬದಲಾಯಿಸಿ ಹೊಸಬರನ್ನು ನೇಮಕ ಮಾಡಿದಾಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಎಚ್.ವಿ.ರಾಜೀವ್ ಅವರ ಸ್ಥಾನಕ್ಕೆ ಯಾರನ್ನೂ ನೇಮಿಸಿರಲಿಲ್ಲ. ಹೀಗಾಗಿ, ಜುಲೈ 25 ರಂದು ಎಚ್.ವಿ.ರಾಜೀವ್ ಅವರ ಅಧಿಕಾರಾವಧಿ ಅಂತ್ಯವಾಗಿತ್ತು. ಅಲ್ಲಿಂದ ಈತನಕ ಯಾರನ್ನೂ ನೇಮಿಸದೆ ಖಾಲಿ ಉಳಿದಿತ್ತು. ಕಾಡಾ,ಮೃಗಾಲಯ,ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ,ಮೈಲ್ಯಾಕ್ಗೆ ನೂತನ ಅಧ್ಯಕ್ಷರನ್ನು ನೇಮಿಸಿದರೂ ಮುಡಾದ ಹುದ್ದೆ ಖಾಲಿ ಉಳಿದಿದ್ದರಿಂದ ಸಾಕಷ್ಟು ರಾಜಕೀಯ ಒತ್ತಡಗಳು ಉಂಟಾಗಿತ್ತು. ಅದರಂತೆ, ಬಿಜೆಪಿ ಮುಖಂಡ ಯಶಸ್ವಿನಿ ಸೋಮಶೇಖರ್ ಅವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಕಂದಾಯ ಸಚಿವ ಆರ್.ಅಶೋಕ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದರು.

ಯಶಸ್ವಿ ಕುರಿತು: ಮೈಸೂರು ನಗರದಲ್ಲಿ ಕಳೆದ ಎರಡು ದಶಕಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡಿಕೊಂಡು ಬಂದಿರುವ ಯಶಸ್ವಿ ಸೋಮಶೇಖರ್ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ,ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿಮೂರು ವರ್ಷಗಳ ಕಾಲ ಕೆಲಸ ಮಾಡಿದ್ದರು. ರಿಯಲ್ ಎಸ್ಟೇಟ್, ಹೋಟೆಲ್ ಉದ್ಯಮದಲ್ಲೂ ತಮ್ಮನ್ನು ಗುರುತಿಸಿಕೊಂಡು ಕೆಲಸ ಮಾಡುತ್ತಿರುವ ಅವರಿಗೆ ಈಗ ಪ್ರತಿಷ್ಠಿತ ಮುಡಾ ಅಧ್ಯಕ್ಷಗಾದಿ ಒಲಿದಿದೆ. ನೇಮಕಾತಿ ಆದೇಶ ಸಿಕ್ಕಿರುವ ಕಾರಣ ಬುಧವಾರ ಬೆಳಿಗ್ಗೆ 11ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

4 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

13 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

13 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

13 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

16 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

16 hours ago