ಜಿಲ್ಲೆಗಳು

ಮುಡಾ ಅಧ್ಯಕ್ಷರಾಗಿ ಯಶಸ್ವಿ ಸೋಮಶೇಖರ್ ನೇಮಕ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ, ಮೈಸೂರು ನಗರ ಬಿಜೆಪಿ ಮಾಜಿಪ್ರಧಾನ ಕಾರ್ಯದರ್ಶಿ ಯಶಸ್ವಿ ಎಸ್. ಸೋಮಶೇಖರ್ ಅವರನ್ನು ರಾಜ್ಯಸರ್ಕಾರ ನೇಮಿಸಿದೆ. ಚುನಾವಣೆಗೆ ಕೇವಲ ನಾಲ್ಕು ತಿಂಗಳು ಬಾಕಿ ಇರುವ ಹೊತ್ತಲ್ಲೇ ಖಾಲಿ ಇದ್ದ ಮುಡಾ ಅಧ್ಯಕ್ಷ ಸ್ಥಾನಕ್ಕೆ ನೇಮಿಸುವ ಮೂಲಕ ಗೊಂದಲಕ್ಕೆ ತೆರೆ ಎಳೆಯಲಾಗಿದೆ.
ರಾಜ್ಯದ ಹಲವಾರು ನಿಗಮ ಮಂಡಳಿ,ಪ್ರಾಧಿಕಾರದ ಅಧ್ಯಕ್ಷರನ್ನು ಬದಲಾಯಿಸಿ ಹೊಸಬರನ್ನು ನೇಮಕ ಮಾಡಿದಾಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಎಚ್.ವಿ.ರಾಜೀವ್ ಅವರ ಸ್ಥಾನಕ್ಕೆ ಯಾರನ್ನೂ ನೇಮಿಸಿರಲಿಲ್ಲ. ಹೀಗಾಗಿ, ಜುಲೈ 25 ರಂದು ಎಚ್.ವಿ.ರಾಜೀವ್ ಅವರ ಅಧಿಕಾರಾವಧಿ ಅಂತ್ಯವಾಗಿತ್ತು. ಅಲ್ಲಿಂದ ಈತನಕ ಯಾರನ್ನೂ ನೇಮಿಸದೆ ಖಾಲಿ ಉಳಿದಿತ್ತು. ಕಾಡಾ,ಮೃಗಾಲಯ,ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ,ಮೈಲ್ಯಾಕ್ಗೆ ನೂತನ ಅಧ್ಯಕ್ಷರನ್ನು ನೇಮಿಸಿದರೂ ಮುಡಾದ ಹುದ್ದೆ ಖಾಲಿ ಉಳಿದಿದ್ದರಿಂದ ಸಾಕಷ್ಟು ರಾಜಕೀಯ ಒತ್ತಡಗಳು ಉಂಟಾಗಿತ್ತು. ಅದರಂತೆ, ಬಿಜೆಪಿ ಮುಖಂಡ ಯಶಸ್ವಿನಿ ಸೋಮಶೇಖರ್ ಅವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಕಂದಾಯ ಸಚಿವ ಆರ್.ಅಶೋಕ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದರು.

ಯಶಸ್ವಿ ಕುರಿತು: ಮೈಸೂರು ನಗರದಲ್ಲಿ ಕಳೆದ ಎರಡು ದಶಕಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡಿಕೊಂಡು ಬಂದಿರುವ ಯಶಸ್ವಿ ಸೋಮಶೇಖರ್ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ,ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿಮೂರು ವರ್ಷಗಳ ಕಾಲ ಕೆಲಸ ಮಾಡಿದ್ದರು. ರಿಯಲ್ ಎಸ್ಟೇಟ್, ಹೋಟೆಲ್ ಉದ್ಯಮದಲ್ಲೂ ತಮ್ಮನ್ನು ಗುರುತಿಸಿಕೊಂಡು ಕೆಲಸ ಮಾಡುತ್ತಿರುವ ಅವರಿಗೆ ಈಗ ಪ್ರತಿಷ್ಠಿತ ಮುಡಾ ಅಧ್ಯಕ್ಷಗಾದಿ ಒಲಿದಿದೆ. ನೇಮಕಾತಿ ಆದೇಶ ಸಿಕ್ಕಿರುವ ಕಾರಣ ಬುಧವಾರ ಬೆಳಿಗ್ಗೆ 11ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ.

andolanait

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

46 mins ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

54 mins ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

2 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

3 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

4 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

4 hours ago