ಜಿಲ್ಲೆಗಳು

ಮುಡಾ ಅಧ್ಯಕ್ಷರಾಗಿ ಯಶಸ್ವಿ ಸೋಮಶೇಖರ್ ನೇಮಕ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ, ಮೈಸೂರು ನಗರ ಬಿಜೆಪಿ ಮಾಜಿಪ್ರಧಾನ ಕಾರ್ಯದರ್ಶಿ ಯಶಸ್ವಿ ಎಸ್. ಸೋಮಶೇಖರ್ ಅವರನ್ನು ರಾಜ್ಯಸರ್ಕಾರ ನೇಮಿಸಿದೆ. ಚುನಾವಣೆಗೆ ಕೇವಲ ನಾಲ್ಕು ತಿಂಗಳು ಬಾಕಿ ಇರುವ ಹೊತ್ತಲ್ಲೇ ಖಾಲಿ ಇದ್ದ ಮುಡಾ ಅಧ್ಯಕ್ಷ ಸ್ಥಾನಕ್ಕೆ ನೇಮಿಸುವ ಮೂಲಕ ಗೊಂದಲಕ್ಕೆ ತೆರೆ ಎಳೆಯಲಾಗಿದೆ.
ರಾಜ್ಯದ ಹಲವಾರು ನಿಗಮ ಮಂಡಳಿ,ಪ್ರಾಧಿಕಾರದ ಅಧ್ಯಕ್ಷರನ್ನು ಬದಲಾಯಿಸಿ ಹೊಸಬರನ್ನು ನೇಮಕ ಮಾಡಿದಾಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಎಚ್.ವಿ.ರಾಜೀವ್ ಅವರ ಸ್ಥಾನಕ್ಕೆ ಯಾರನ್ನೂ ನೇಮಿಸಿರಲಿಲ್ಲ. ಹೀಗಾಗಿ, ಜುಲೈ 25 ರಂದು ಎಚ್.ವಿ.ರಾಜೀವ್ ಅವರ ಅಧಿಕಾರಾವಧಿ ಅಂತ್ಯವಾಗಿತ್ತು. ಅಲ್ಲಿಂದ ಈತನಕ ಯಾರನ್ನೂ ನೇಮಿಸದೆ ಖಾಲಿ ಉಳಿದಿತ್ತು. ಕಾಡಾ,ಮೃಗಾಲಯ,ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ,ಮೈಲ್ಯಾಕ್ಗೆ ನೂತನ ಅಧ್ಯಕ್ಷರನ್ನು ನೇಮಿಸಿದರೂ ಮುಡಾದ ಹುದ್ದೆ ಖಾಲಿ ಉಳಿದಿದ್ದರಿಂದ ಸಾಕಷ್ಟು ರಾಜಕೀಯ ಒತ್ತಡಗಳು ಉಂಟಾಗಿತ್ತು. ಅದರಂತೆ, ಬಿಜೆಪಿ ಮುಖಂಡ ಯಶಸ್ವಿನಿ ಸೋಮಶೇಖರ್ ಅವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಕಂದಾಯ ಸಚಿವ ಆರ್.ಅಶೋಕ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದರು.

ಯಶಸ್ವಿ ಕುರಿತು: ಮೈಸೂರು ನಗರದಲ್ಲಿ ಕಳೆದ ಎರಡು ದಶಕಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡಿಕೊಂಡು ಬಂದಿರುವ ಯಶಸ್ವಿ ಸೋಮಶೇಖರ್ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ,ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿಮೂರು ವರ್ಷಗಳ ಕಾಲ ಕೆಲಸ ಮಾಡಿದ್ದರು. ರಿಯಲ್ ಎಸ್ಟೇಟ್, ಹೋಟೆಲ್ ಉದ್ಯಮದಲ್ಲೂ ತಮ್ಮನ್ನು ಗುರುತಿಸಿಕೊಂಡು ಕೆಲಸ ಮಾಡುತ್ತಿರುವ ಅವರಿಗೆ ಈಗ ಪ್ರತಿಷ್ಠಿತ ಮುಡಾ ಅಧ್ಯಕ್ಷಗಾದಿ ಒಲಿದಿದೆ. ನೇಮಕಾತಿ ಆದೇಶ ಸಿಕ್ಕಿರುವ ಕಾರಣ ಬುಧವಾರ ಬೆಳಿಗ್ಗೆ 11ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

13 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

14 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

15 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

16 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

21 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

21 hours ago