ಜಿಲ್ಲೆಗಳು

ನೂತನ ದೇವಾಲಯ ನಿರ್ಮಾಣಕ್ಕೆ ಭೂಮಿಪೂಜೆ

ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಕ್ಷ್ಮಣ ದೊಡ್ಡಿ ಗ್ರಾಮದಲ್ಲಿ ಕರುಪ್ಪಸ್ವಾಮಿ ನೂತನ ದೇವಾಲಯ ನಿರ್ಮಾಣಕ್ಕೆ ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾದ ಸಂಚಾಲಕ ಜನಧ್ವನಿ ಬಿ.ವೆಂಕಟೇಶ್ ಇಂದು ಭೂಮಿಪೂಜೆ ನೆರವೇರಿಸಿದರು.
ಗ್ರಾಮದ ಸ್ಥಳಿಯ ಧಾರ್ಮಿಕ ಸಂಪ್ರದಾಯದಂತೆ ಸಸಿಗೆ ಆರತಿ ಬೆಳಗಿ ಪೂಜೆ ನೆರವೇರಿಸಿ ಹಾಲೆರೆದರು. ಈ ವೇಳೆ ಮಾತನಾಡಿದ ಬಿ. ವೆಂಕಟೇಶ್ ಅವರು ದೇವಾಲಯಗಳು ಜನತೆಯ ಶ್ರದ್ಧಾ ಭಕ್ತಿ ಜೊತೆಗೆ ಮನಶಾಂತಿಗೆ ಪೂರಕವಾದ ಕೇಂದ್ರಗಳಾಗಿವೆ. ಈ ದಿಸೆಯಲ್ಲಿ ಲಕ್ಷ್ಮಣ ದೊಡ್ಡಿಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗುತ್ತಿರುವ ಕರುಪ್ಪಸ್ವಾಮಿ ದೇವಾಲಯ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿರುವುದು ಸಂತಸ ತಂದಿದೆ  ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಂಡು ಸಾರ್ವಜನಿಕರ ಅನುಕೂಲಕ್ಕೆ ಬಳಕೆಯಾಗಲಿ ಎಂದು ಆಶೀಸಿದ ಅವರು ಕರುಪ್ಪಸ್ವಾಮಿ ದೇವರು ಜನತೆಗೆ ಸುಖ ಶಾಂತಿಯನ್ನು ಕರುಣಿಸಲಿ. ಗ್ರಾಮದ ಜನತೆಯ ಯಾವುದೇ ದುಃಖ ದುಮ್ಮಾನಗಳಿಗೆ ಎಂದಿಗೂ ನಾನು ಜೊತೆಯಾಗಿರುತ್ತೇನೆ ಎಂದು ಭರವಸೆ ನೀಡಿದರು.
ಆರತಿ ಎತ್ತಿ ಸ್ವಾಗತಿಸಿದ ಮಹಿಳೆಯರು: ಕರುಪ್ಪಸ್ವಾಮಿ ನೂತನ ದೇವಾಲಯ ನಿರ್ಮಾಣದ ಭೂಮಿ ಪೂಜೆಗೆ ಆಗಮಿಸಿದ ಬಿ. ವೆಂಕಟೇಶ್ ಅವರನ್ನು ಗ್ರಾಮದ ಮಹಿಳೆಯರು ಆರತಿ ಎತ್ತಿ ಸ್ವಾಗತಿಸಿದರು. ಗ್ರಾಮದ ಮುಖಂಡರುಗಳು ಶಾಲು ಹೂವಿನಹಾರ ಹಾಕಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಯಜಮಾನರುಗಳು, ಮುಖಂಡರುಗಳು, ಯುವಕರು, ಮಹಿಳೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

2 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

2 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

2 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

5 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

5 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

5 hours ago