ರಾಜ್ಯಾದ್ಯಂತ ಎನ್ ಐಎ ದಾಳಿ, ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಸಹಿತ ಹಲವರು ವಶಕ್ಕೆ
ಮೈಸೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸೇರಿದಂತೆ ಕೋಮು ದ್ವೇಷದ ಹಿನ್ನೆಲೆಯ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಎನ್ ಐಎ ರಾಜ್ಯದ ಹಲವು ಭಾಗಗಳಲ್ಲಿ ಇಂದು ದಾಳಿ ನಡೆಸಿ ಹಲವರನ್ನು ಬಂಧಿಸಿದೆ.
ಪ್ರವಾಸಿ ನಗರಿ ಮೈಸೂರಿನಲ್ಲಿ ಪಿಎಫ್ಐ ಮಾಜಿ ಕಾರ್ಯದರ್ಶಿಯನ್ನು ವಶಕ್ಕೆ ಪಡೆಯಲಾಗಿದೆ.
ಸುಲೈಮಾನ್ ಬಂಧಿತ ಆರೋಪಿಯಾಗಿದ್ದು, ಮೈಸೂರಿನ ಮಂಡಿಮೊಹಲ್ಲಾದಲ್ಲಿರುವ ಸುಲೈಮಾನ್ ಮನೆ ಮೇಲೆ ದಾಳಿ ಮಾಡಿ ವಶಕ್ಕೆ ಪಡೆಯಲಾಗಿದೆ.
ಇಂದು ಮುಂಜಾನೆ ದಿಢೀರ್ ದಾಳಿ ಮಾಡಿ ಸುಲೈಮಾನ್ ವಶಕ್ಕೆ ಪಡೆದ ಎಎನ್ಐ ಅಧಿಕಾರಿಗಳು, ಮೈಸೂರಿನ ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
ಇವನ್ನಲ್ಲದೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮತ್ತೆ ಮೂವರನ್ನು ಬಂಧಿಸಿದ ಎನ್ಐಎ ತನಿಖೆ ಚುರುಕುಗೊಳಿಸಿದೆ.
ಬೆಳ್ಳಾರೆ ಗ್ರಾ.ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆ, ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾರನ್ನು ಬಂಧಿಸಿದ ಎನ್ಐಎ ಉಪ್ಪಿನಂಗಡಿ,ಸುಳ್ಯದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.
ಹುಬ್ಬಳ್ಳಿ- ಹುಬ್ಬಳ್ಳಿಯಲ್ಲೂ ಎನ್ಐಎ ದಾಳಿ ಮಾಡಿದ್ದು, ಎಸ್ ಡಿಪಿಐ ಮುಖಂಡ ಇಸ್ಮಾಯಿಲ್ ನಾಲಾಬಂದ್ ವಿಚಾರಣೆ ನಡೆಸಿದ್ದಾರೆ.
ಹಳೇ ಹುಬ್ಬಳ್ಳಿಯ ನೂರಾನಿ ಪ್ಲಾಟ್ ನಲ್ಲಿರುವ ಮನೆ ದಾಳಿ ಮಾಡಿದ್ದು, ಕಸಬಾಪೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಕಚೇರಿಯ ಮೇಲೂ ದಾಳಿ, ಪರಿಶೀಲನೆ ನಡೆಸಿದ್ದಾರೆ.
ಬೆಳಗಿನ ಜಾವ ನಾಲ್ಕು ಗಂಟೆಗೆ ರಾಜ್ಯದ ನಾನಾ ಭಾಗಗಳಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…
ಗಿರೀಶ್ ಹುಣಸೂರು ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…
ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…