ಜಿಲ್ಲೆಗಳು

ಮೈಸೂರಿನಲ್ಲಿ ಎನ್ಐಎ ದಾಳಿ: ಓರ್ವನ ಸೆರೆ

ರಾಜ್ಯಾದ್ಯಂತ ಎನ್ ಐಎ ದಾಳಿ, ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಸಹಿತ ಹಲವರು ವಶಕ್ಕೆ

ಮೈಸೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸೇರಿದಂತೆ ಕೋಮು ದ್ವೇಷದ ಹಿನ್ನೆಲೆಯ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಎನ್ ಐಎ ರಾಜ್ಯದ ಹಲವು ಭಾಗಗಳಲ್ಲಿ ಇಂದು ದಾಳಿ ನಡೆಸಿ ಹಲವರನ್ನು ಬಂಧಿಸಿದೆ.

ಪ್ರವಾಸಿ ನಗರಿ ಮೈಸೂರಿನಲ್ಲಿ ಪಿಎಫ್ಐ ಮಾಜಿ ಕಾರ್ಯದರ್ಶಿಯನ್ನು ವಶಕ್ಕೆ ಪಡೆಯಲಾಗಿದೆ.
ಸುಲೈಮಾನ್ ಬಂಧಿತ ಆರೋಪಿಯಾಗಿದ್ದು, ಮೈಸೂರಿನ ಮಂಡಿಮೊಹಲ್ಲಾದಲ್ಲಿರುವ ಸುಲೈಮಾನ್ ಮನೆ ಮೇಲೆ ದಾಳಿ ಮಾಡಿ ವಶಕ್ಕೆ ಪಡೆಯಲಾಗಿದೆ.
ಇಂದು ಮುಂಜಾನೆ ದಿಢೀರ್ ದಾಳಿ ಮಾಡಿ ಸುಲೈಮಾನ್ ವಶಕ್ಕೆ ಪಡೆದ ಎಎನ್ಐ ಅಧಿಕಾರಿಗಳು, ಮೈಸೂರಿನ ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
ಇವನ್ನಲ್ಲದೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮತ್ತೆ ಮೂವರನ್ನು ಬಂಧಿಸಿದ ಎನ್ಐಎ ತನಿಖೆ ಚುರುಕುಗೊಳಿಸಿದೆ.
ಬೆಳ್ಳಾರೆ ಗ್ರಾ.ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆ, ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾರನ್ನು ಬಂಧಿಸಿದ ಎನ್ಐಎ ಉಪ್ಪಿನಂಗಡಿ,ಸುಳ್ಯದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.
ಹುಬ್ಬಳ್ಳಿ- ಹುಬ್ಬಳ್ಳಿಯಲ್ಲೂ ಎನ್ಐಎ ದಾಳಿ ಮಾಡಿದ್ದು, ಎಸ್ ಡಿಪಿಐ ಮುಖಂಡ ಇಸ್ಮಾಯಿಲ್ ನಾಲಾ‌ಬಂದ್ ವಿಚಾರಣೆ ನಡೆಸಿದ್ದಾರೆ.
ಹಳೇ‌ ಹುಬ್ಬಳ್ಳಿಯ ನೂರಾನಿ ಪ್ಲಾಟ್ ನಲ್ಲಿರುವ ಮನೆ ದಾಳಿ ಮಾಡಿದ್ದು, ಕಸಬಾಪೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಕಚೇರಿಯ ಮೇಲೂ ದಾಳಿ, ಪರಿಶೀಲನೆ ನಡೆಸಿದ್ದಾರೆ.
ಬೆಳಗಿನ ಜಾವ ನಾಲ್ಕು ಗಂಟೆಗೆ ರಾಜ್ಯದ ನಾನಾ ಭಾಗಗಳಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

 

andolanait

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

1 min ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

3 mins ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

5 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

7 mins ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

11 mins ago