ಯುವ ದಸರಾದಲ್ಲಿ ಮಳೆಗೂ ಸೆಡ್ಡು ಹೊಡೆದು ಯುವ ಸಮೂಹ ಕುಣಿತ
ಮೈಸೂರು: ‘ಕಣ್ಣು ಹೊಡಿಯಾಕ ಮೊನ್ನೆ ಕಲತೀನಿ…ನಿನ್ನ ನೋಡಿ ಸುಮ್ನೆಂಗಿರ್ಲಿ’ ಎಂದು ಹಾಡುತ್ತಾ ಯುವ ದಸರಾ ವೇದಿಕೆಗೆ ಆಗಮಿಸಿದ ದಕ್ಷಿಣ ಭಾರತದ ಖ್ಯಾತ ಗಾಯಕಿ ಮಂಗ್ಲಿ, ನೆರೆದಿದ್ದ ಕಲಾಭಿಮಾನಿಗಳನ್ನು ಕುಣಿದು ಕುಪ್ಪಳಿಸುವಂತೆ ಮಾಡಿದರು.
ಯುವ ದಸರಾದ ಐದನೇ ದಿನದ ಕಾರ್ಯಕ್ರಮದಲ್ಲಿ ಮಳೆಗೂ ಸೆಡ್ಡು ಹೊಡೆದ ಯುವ ಸಮೂಹ ಗಾಯನ ರಸಸ್ವಾದ ಸವಿದರು. ಈ ವೇಳೆ ಮಾತನಾಡಿದ ಮಂಗ್ಲಿ ‘ನಾನು ಮೈಸೂರಲ್ಲಿ ನೀಡುತ್ತಿರುವ ಮೊದಲ ಕಾರ್ಯಕ್ರಮ ಇದಾಗಿದೆ. ನನಗೆ ಮೈಸೂರು ಎಂದರೇ ಬಹಳ ಇಷ್ಟ. ತೆಲುಗು ಒಂದು ಮನೆಯಾದರೆ, ಕನ್ನಡವೂ ನನ್ನ ಇನ್ನೊಂದು ಮನೆ’ ಎಂದು ಹೇಳಿದ್ದಕ್ಕೆ ಮೈಸೂರಿಗರು ಪಿಧಾ ಆದರು.
ಏಕ್ ಲವ್ ಯಾ ಚಿತ್ರದ ‘ಎಣ್ಣೆಗೂ…ಹೆಣ್ಣಿಗೂ…’, ‘ಯಕ್ಕಾ ಸಕ್ಕಾ’ ಹಾಡುಗಳ ಜೊತೆಗೆ ತೆಲುಗಿನ ಗೀತೆಗಳನ್ನು ಹಾಡಿದರು. ಪುನೀತ್ ರಾಜ್ ಕುಮಾರ್ ಚಿತ್ರದ ‘ಬೊಂಬೆ ಹೇಳುತೈತೆ ನೀನೆ ರಾಜಕುಮಾರ್’ ಹಾಡು ಹಾಡಿದರು. ಇವರಿಗೆ ಗಾಯಕ ಅನಿರುದ್ಧ ಸಾಥ್ ನೀಡಿದರು.
ನಟಿ ಹರ್ಷಿಕಾ ಪೂಣಚ್ಚ ಅವರು ತಮ್ಮ ನೃತ್ಯದ ಮೂಲಕ ಎಲ್ಲರ ಮನಸೂರೆಗೊಂಡರು. ‘ನೀನಾದೆನಾ, ನೀನಾದೆನಾ… ನಿನ್ನೊಂದಿಗೆ ಈ ಜೀವನ…’, ‘ಕಣ್ಣು ಹೊಡಿಯಾಕ ಮೊನ್ನೆ ಕಲತೀನಿ’ ‘ಯಕ್ಕ ಸಕ್ಕಾ’ ಹಾಡುಗಳಿಗೆ ನೃತ್ಯ ಪ್ರದರ್ಶಿಸಿದರು. ಬಾಲಿವುಡ್ ಗಾಯಕ, ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಮತ್ತು ತಂಡದವರು ಸಂಗೀತ ರಸಮಂಜರಿ ಹಿಂದೆ ಹಾಡುಗಳು ಪ್ರೇಕ್ಷಕರ ಮನ ಗೆದ್ದವು.
ಮೈಸೂರಿನವರೇ ಆದ ನಟಿ ಪಾಯಲ್ ಅವರು ‘ಜೋಕೆ… ನಾನು ಬಳ್ಳಿಯ ಮಿಂಚು’ ಮತ್ತು ‘ಡ್ಯಾನ್ಸ್ ಡ್ಯಾನ್ಸ್ ಡ್ಯಾನ್ಸ್ ಅಪ್ಪು’ ಹಾಡುಗಳಿಗೆ ಹೆಜ್ಜೆ ಹಾಕಿದರು. ರಂಗಿತರಂಗ ಖ್ಯಾತಿಯ ನಟಿ ರಾಧಿಕಾ ನಾರಾಯಣ್ ಅವರು ಅಪ್ಪು ಹಾಡುಗಳಿಗೆ ನೃತ್ಯ ಪ್ರದರ್ಶಿಸಿದರು. ಗಾಯಕ ಶಶಾಂಕ್ ಶೇಷಗಿರಿ, ಗಾಯಕಿ ಇಂಚರ ಹಾಡಿ ರಂಜಿಸಿದರು.
ಕಾರ್ಯಕ್ರಮದ ಆರಂಭದಲ್ಲಿಯೇ ಮಳೆ ತನ್ನ ಆಟ ಶುರು ಮಾಡಿತು. ೫ ನಿಮಿಷಗಳ ಕಾಲ ಬಿರುಸಾಗಿ ಸುರಿದ ಮಳೆ, ನಂತರ ತುಂತುರಾಗಿ ಉದುರಲಾರಂಭಿಸಿತು. ಆಸನದ ವ್ಯವಸ್ಥೆ ಇಲ್ಲದೆ, ಹಿಂದೆ ನಿಂತು ಕಾರ್ಯಕ್ರಮ ನೋಡುತ್ತಿದ್ದ ಪ್ರೇಕ್ಷಕರು ಕೊಡೆ ಹಿಡಿದು ಕಾರ್ಯಕ್ರಮ ಎಂಜಾಯ್ ಮಾಡಿದರು.
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ…
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…