ಜಿಲ್ಲೆಗಳು

‘ನಿನ್ನ ನೋಡಿ ಸುಮ್ನೆಂಗಿರ್ಲಿ’: ಮಂಗ್ಲಿ ಗಾಯನಕ್ಕೆ ಮೈಸೂರಿಗರು ಫಿದಾ

ಯುವ ದಸರಾದಲ್ಲಿ ಮಳೆಗೂ ಸೆಡ್ಡು ಹೊಡೆದು ಯುವ ಸಮೂಹ ಕುಣಿತ

ಮೈಸೂರು: ‘ಕಣ್ಣು ಹೊಡಿಯಾಕ ಮೊನ್ನೆ ಕಲತೀನಿ…ನಿನ್ನ ನೋಡಿ ಸುಮ್ನೆಂಗಿರ್ಲಿ’ ಎಂದು ಹಾಡುತ್ತಾ ಯುವ ದಸರಾ ವೇದಿಕೆಗೆ ಆಗಮಿಸಿದ ದಕ್ಷಿಣ ಭಾರತದ ಖ್ಯಾತ ಗಾಯಕಿ ಮಂಗ್ಲಿ, ನೆರೆದಿದ್ದ ಕಲಾಭಿಮಾನಿಗಳನ್ನು ಕುಣಿದು ಕುಪ್ಪಳಿಸುವಂತೆ ಮಾಡಿದರು.

ಯುವ ದಸರಾದ ಐದನೇ ದಿನದ ಕಾರ್ಯಕ್ರಮದಲ್ಲಿ ಮಳೆಗೂ ಸೆಡ್ಡು ಹೊಡೆದ ಯುವ ಸಮೂಹ ಗಾಯನ ರಸಸ್ವಾದ ಸವಿದರು. ಈ ವೇಳೆ ಮಾತನಾಡಿದ ಮಂಗ್ಲಿ ‘ನಾನು ಮೈಸೂರಲ್ಲಿ ನೀಡುತ್ತಿರುವ ಮೊದಲ ಕಾರ್ಯಕ್ರಮ ಇದಾಗಿದೆ. ನನಗೆ ಮೈಸೂರು ಎಂದರೇ ಬಹಳ ಇಷ್ಟ. ತೆಲುಗು ಒಂದು ಮನೆಯಾದರೆ, ಕನ್ನಡವೂ ನನ್ನ ಇನ್ನೊಂದು ಮನೆ’ ಎಂದು ಹೇಳಿದ್ದಕ್ಕೆ ಮೈಸೂರಿಗರು ಪಿಧಾ ಆದರು.

ಏಕ್ ಲವ್ ಯಾ ಚಿತ್ರದ ‘ಎಣ್ಣೆಗೂ…ಹೆಣ್ಣಿಗೂ…’, ‘ಯಕ್ಕಾ ಸಕ್ಕಾ’ ಹಾಡುಗಳ ಜೊತೆಗೆ ತೆಲುಗಿನ ಗೀತೆಗಳನ್ನು ಹಾಡಿದರು. ಪುನೀತ್ ರಾಜ್ ಕುಮಾರ್ ಚಿತ್ರದ ‘ಬೊಂಬೆ ಹೇಳುತೈತೆ ನೀನೆ ರಾಜಕುಮಾರ್’ ಹಾಡು ಹಾಡಿದರು. ಇವರಿಗೆ ಗಾಯಕ ಅನಿರುದ್ಧ ಸಾಥ್ ನೀಡಿದರು.

ನಟಿ ಹರ್ಷಿಕಾ ಪೂಣಚ್ಚ ಅವರು ತಮ್ಮ ನೃತ್ಯದ ಮೂಲಕ ಎಲ್ಲರ ಮನಸೂರೆಗೊಂಡರು. ‘ನೀನಾದೆನಾ, ನೀನಾದೆನಾ… ನಿನ್ನೊಂದಿಗೆ ಈ ಜೀವನ…’, ‘ಕಣ್ಣು ಹೊಡಿಯಾಕ ಮೊನ್ನೆ ಕಲತೀನಿ’ ‘ಯಕ್ಕ ಸಕ್ಕಾ’ ಹಾಡುಗಳಿಗೆ ನೃತ್ಯ ಪ್ರದರ್ಶಿಸಿದರು. ಬಾಲಿವುಡ್ ಗಾಯಕ, ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಮತ್ತು ತಂಡದವರು ಸಂಗೀತ ರಸಮಂಜರಿ ಹಿಂದೆ ಹಾಡುಗಳು ಪ್ರೇಕ್ಷಕರ ಮನ ಗೆದ್ದವು.

ಮೈಸೂರಿನವರೇ ಆದ ನಟಿ ಪಾಯಲ್ ಅವರು ‘ಜೋಕೆ… ನಾನು ಬಳ್ಳಿಯ ಮಿಂಚು’ ಮತ್ತು ‘ಡ್ಯಾನ್ಸ್ ಡ್ಯಾನ್ಸ್ ಡ್ಯಾನ್ಸ್ ಅಪ್ಪು’ ಹಾಡುಗಳಿಗೆ ಹೆಜ್ಜೆ ಹಾಕಿದರು. ರಂಗಿತರಂಗ ಖ್ಯಾತಿಯ ನಟಿ ರಾಧಿಕಾ ನಾರಾಯಣ್ ಅವರು ಅಪ್ಪು ಹಾಡುಗಳಿಗೆ ನೃತ್ಯ ಪ್ರದರ್ಶಿಸಿದರು. ಗಾಯಕ ಶಶಾಂಕ್ ಶೇಷಗಿರಿ, ಗಾಯಕಿ ಇಂಚರ ಹಾಡಿ ರಂಜಿಸಿದರು.

ಕಾರ್ಯಕ್ರಮದ ಆರಂಭದಲ್ಲಿಯೇ ಮಳೆ ತನ್ನ ಆಟ ಶುರು ಮಾಡಿತು. ೫ ನಿಮಿಷಗಳ ಕಾಲ ಬಿರುಸಾಗಿ ಸುರಿದ ಮಳೆ, ನಂತರ ತುಂತುರಾಗಿ ಉದುರಲಾರಂಭಿಸಿತು. ಆಸನದ ವ್ಯವಸ್ಥೆ ಇಲ್ಲದೆ, ಹಿಂದೆ ನಿಂತು ಕಾರ್ಯಕ್ರಮ ನೋಡುತ್ತಿದ್ದ ಪ್ರೇಕ್ಷಕರು ಕೊಡೆ ಹಿಡಿದು ಕಾರ್ಯಕ್ರಮ ಎಂಜಾಯ್ ಮಾಡಿದರು.

 

 

 

 

 

 

andolana

Recent Posts

ಹಿರಿಯ ಪತ್ರಕರ್ತ ರಾಜಕುಮಾರ್‌ ಬಾಹುಸಾರ್‌ ಇನ್ನಿಲ್ಲ

ಮೈಸೂರು : ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಪತ್ರಕರ್ತ ರಾಜಕುಮಾರ್ ಬಾಹುಸಾರ್(64) ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಸಂಜೆ…

49 mins ago

ಬಹುಮಹಡಿ ಕಟ್ಟಡ, ಮನೆ ನಿರ್ಮಾಣಕ್ಕೆ ಕಡಿವಾಣ ಹಾಕಿ : ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಾಗರಿಕರ ಆಗ್ರಹ

ಮೈಸೂರು : ಚಾಮುಂಡಿ ಬೆಟ್ಟ ಉಳಿಸಿ ಎಂಬ ಆಶಯದಲ್ಲಿ ಹಲವು ಸಂಘಟನೆಗಳು ಹಾಗೂ ನಾಗರಿಕರು ಸೇರಿ ‘ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಡಿಗೆ’…

2 hours ago

ಬೆಂಗಳೂರು ಅಭಿವೃದ್ಧಿಗೆ 1.5 ಲಕ್ಷ ಕೋಟಿ ರೂ ಹೂಡಿಕೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರು ನಗರದ ಜನಸಂಖ್ಯೆ ಮುಂದಿನ 20 ರಿಂದ 25 ವರ್ಷಗಳಲ್ಲಿನ ದ್ವಿಗುಣಗೊಳ್ಳಲಿದ್ದು, ನಗರದ ಮೂಲ ಸೌಕರ್ಯ ಕೊರತೆ…

2 hours ago

ಮೈಸೂರು | ರೈಲಿಗೆ ತಲೆಕೊಟ್ಟು ನಿವೃತ್ತ ಎಎಸ್‌ಐ ಸಾವು

ಮೈಸೂರು : ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕುಕ್ಕರಹಳ್ಳಿ ರೈಲ್ವೆ ಗೇಟ್‌ ಬಳಿ ನಡೆದಿದೆ.ಜ…

3 hours ago

ರಂಜಿತಾ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ : ಕಾಡಿನಲ್ಲಿ ಆರೋಪಿ ಶವ ಪತ್ತೆ!

ಶಿರಸಿ : ಇಲ್ಲಿನ ಯಲ್ಲಾಪುರದಲ್ಲಿ ನಡೆದ ವಿವಾಹಿತೆ ರಂಜಿತಾ ಹತ್ಯೆ ಕೇಸ್‌ಗೆ ಬಿಗ್‌ ಟ್ವೀಸ್ಟ್‌ ಸಿಕ್ಕಿದ್ದು, ಹತ್ಯೆ ಆರೋಪಿ ರಫೀಕ್‌…

3 hours ago

ಸಮುದಾಯದ ಸಂಘಟನೆ ಅಗತ್ಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿಂದುಳಿದವರು ಸಂಘಟಿಸಿದರೆ ಜಾತೀಯತೆಯಾಗುವುದಿಲ್ಲ. ಉಪಜಾತಿಗಳಲ್ಲಿ ವಿಭಜಿಸದೇ ಒಂದೇ ಶಕ್ತಿಯಾಗಿ ಸಂಘಟಿತರಾಗಿ ಎಂದು ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ…

3 hours ago