ಯುವ ದಸರಾದಲ್ಲಿ ಮಳೆಗೂ ಸೆಡ್ಡು ಹೊಡೆದು ಯುವ ಸಮೂಹ ಕುಣಿತ
ಮೈಸೂರು: ‘ಕಣ್ಣು ಹೊಡಿಯಾಕ ಮೊನ್ನೆ ಕಲತೀನಿ…ನಿನ್ನ ನೋಡಿ ಸುಮ್ನೆಂಗಿರ್ಲಿ’ ಎಂದು ಹಾಡುತ್ತಾ ಯುವ ದಸರಾ ವೇದಿಕೆಗೆ ಆಗಮಿಸಿದ ದಕ್ಷಿಣ ಭಾರತದ ಖ್ಯಾತ ಗಾಯಕಿ ಮಂಗ್ಲಿ, ನೆರೆದಿದ್ದ ಕಲಾಭಿಮಾನಿಗಳನ್ನು ಕುಣಿದು ಕುಪ್ಪಳಿಸುವಂತೆ ಮಾಡಿದರು.
ಯುವ ದಸರಾದ ಐದನೇ ದಿನದ ಕಾರ್ಯಕ್ರಮದಲ್ಲಿ ಮಳೆಗೂ ಸೆಡ್ಡು ಹೊಡೆದ ಯುವ ಸಮೂಹ ಗಾಯನ ರಸಸ್ವಾದ ಸವಿದರು. ಈ ವೇಳೆ ಮಾತನಾಡಿದ ಮಂಗ್ಲಿ ‘ನಾನು ಮೈಸೂರಲ್ಲಿ ನೀಡುತ್ತಿರುವ ಮೊದಲ ಕಾರ್ಯಕ್ರಮ ಇದಾಗಿದೆ. ನನಗೆ ಮೈಸೂರು ಎಂದರೇ ಬಹಳ ಇಷ್ಟ. ತೆಲುಗು ಒಂದು ಮನೆಯಾದರೆ, ಕನ್ನಡವೂ ನನ್ನ ಇನ್ನೊಂದು ಮನೆ’ ಎಂದು ಹೇಳಿದ್ದಕ್ಕೆ ಮೈಸೂರಿಗರು ಪಿಧಾ ಆದರು.
ಏಕ್ ಲವ್ ಯಾ ಚಿತ್ರದ ‘ಎಣ್ಣೆಗೂ…ಹೆಣ್ಣಿಗೂ…’, ‘ಯಕ್ಕಾ ಸಕ್ಕಾ’ ಹಾಡುಗಳ ಜೊತೆಗೆ ತೆಲುಗಿನ ಗೀತೆಗಳನ್ನು ಹಾಡಿದರು. ಪುನೀತ್ ರಾಜ್ ಕುಮಾರ್ ಚಿತ್ರದ ‘ಬೊಂಬೆ ಹೇಳುತೈತೆ ನೀನೆ ರಾಜಕುಮಾರ್’ ಹಾಡು ಹಾಡಿದರು. ಇವರಿಗೆ ಗಾಯಕ ಅನಿರುದ್ಧ ಸಾಥ್ ನೀಡಿದರು.
ನಟಿ ಹರ್ಷಿಕಾ ಪೂಣಚ್ಚ ಅವರು ತಮ್ಮ ನೃತ್ಯದ ಮೂಲಕ ಎಲ್ಲರ ಮನಸೂರೆಗೊಂಡರು. ‘ನೀನಾದೆನಾ, ನೀನಾದೆನಾ… ನಿನ್ನೊಂದಿಗೆ ಈ ಜೀವನ…’, ‘ಕಣ್ಣು ಹೊಡಿಯಾಕ ಮೊನ್ನೆ ಕಲತೀನಿ’ ‘ಯಕ್ಕ ಸಕ್ಕಾ’ ಹಾಡುಗಳಿಗೆ ನೃತ್ಯ ಪ್ರದರ್ಶಿಸಿದರು. ಬಾಲಿವುಡ್ ಗಾಯಕ, ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಮತ್ತು ತಂಡದವರು ಸಂಗೀತ ರಸಮಂಜರಿ ಹಿಂದೆ ಹಾಡುಗಳು ಪ್ರೇಕ್ಷಕರ ಮನ ಗೆದ್ದವು.
ಮೈಸೂರಿನವರೇ ಆದ ನಟಿ ಪಾಯಲ್ ಅವರು ‘ಜೋಕೆ… ನಾನು ಬಳ್ಳಿಯ ಮಿಂಚು’ ಮತ್ತು ‘ಡ್ಯಾನ್ಸ್ ಡ್ಯಾನ್ಸ್ ಡ್ಯಾನ್ಸ್ ಅಪ್ಪು’ ಹಾಡುಗಳಿಗೆ ಹೆಜ್ಜೆ ಹಾಕಿದರು. ರಂಗಿತರಂಗ ಖ್ಯಾತಿಯ ನಟಿ ರಾಧಿಕಾ ನಾರಾಯಣ್ ಅವರು ಅಪ್ಪು ಹಾಡುಗಳಿಗೆ ನೃತ್ಯ ಪ್ರದರ್ಶಿಸಿದರು. ಗಾಯಕ ಶಶಾಂಕ್ ಶೇಷಗಿರಿ, ಗಾಯಕಿ ಇಂಚರ ಹಾಡಿ ರಂಜಿಸಿದರು.
ಕಾರ್ಯಕ್ರಮದ ಆರಂಭದಲ್ಲಿಯೇ ಮಳೆ ತನ್ನ ಆಟ ಶುರು ಮಾಡಿತು. ೫ ನಿಮಿಷಗಳ ಕಾಲ ಬಿರುಸಾಗಿ ಸುರಿದ ಮಳೆ, ನಂತರ ತುಂತುರಾಗಿ ಉದುರಲಾರಂಭಿಸಿತು. ಆಸನದ ವ್ಯವಸ್ಥೆ ಇಲ್ಲದೆ, ಹಿಂದೆ ನಿಂತು ಕಾರ್ಯಕ್ರಮ ನೋಡುತ್ತಿದ್ದ ಪ್ರೇಕ್ಷಕರು ಕೊಡೆ ಹಿಡಿದು ಕಾರ್ಯಕ್ರಮ ಎಂಜಾಯ್ ಮಾಡಿದರು.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…