ಜಿಲ್ಲೆಗಳು

‘ನಿನ್ನ ನೋಡಿ ಸುಮ್ನೆಂಗಿರ್ಲಿ’: ಮಂಗ್ಲಿ ಗಾಯನಕ್ಕೆ ಮೈಸೂರಿಗರು ಫಿದಾ

ಯುವ ದಸರಾದಲ್ಲಿ ಮಳೆಗೂ ಸೆಡ್ಡು ಹೊಡೆದು ಯುವ ಸಮೂಹ ಕುಣಿತ

ಮೈಸೂರು: ‘ಕಣ್ಣು ಹೊಡಿಯಾಕ ಮೊನ್ನೆ ಕಲತೀನಿ…ನಿನ್ನ ನೋಡಿ ಸುಮ್ನೆಂಗಿರ್ಲಿ’ ಎಂದು ಹಾಡುತ್ತಾ ಯುವ ದಸರಾ ವೇದಿಕೆಗೆ ಆಗಮಿಸಿದ ದಕ್ಷಿಣ ಭಾರತದ ಖ್ಯಾತ ಗಾಯಕಿ ಮಂಗ್ಲಿ, ನೆರೆದಿದ್ದ ಕಲಾಭಿಮಾನಿಗಳನ್ನು ಕುಣಿದು ಕುಪ್ಪಳಿಸುವಂತೆ ಮಾಡಿದರು.

ಯುವ ದಸರಾದ ಐದನೇ ದಿನದ ಕಾರ್ಯಕ್ರಮದಲ್ಲಿ ಮಳೆಗೂ ಸೆಡ್ಡು ಹೊಡೆದ ಯುವ ಸಮೂಹ ಗಾಯನ ರಸಸ್ವಾದ ಸವಿದರು. ಈ ವೇಳೆ ಮಾತನಾಡಿದ ಮಂಗ್ಲಿ ‘ನಾನು ಮೈಸೂರಲ್ಲಿ ನೀಡುತ್ತಿರುವ ಮೊದಲ ಕಾರ್ಯಕ್ರಮ ಇದಾಗಿದೆ. ನನಗೆ ಮೈಸೂರು ಎಂದರೇ ಬಹಳ ಇಷ್ಟ. ತೆಲುಗು ಒಂದು ಮನೆಯಾದರೆ, ಕನ್ನಡವೂ ನನ್ನ ಇನ್ನೊಂದು ಮನೆ’ ಎಂದು ಹೇಳಿದ್ದಕ್ಕೆ ಮೈಸೂರಿಗರು ಪಿಧಾ ಆದರು.

ಏಕ್ ಲವ್ ಯಾ ಚಿತ್ರದ ‘ಎಣ್ಣೆಗೂ…ಹೆಣ್ಣಿಗೂ…’, ‘ಯಕ್ಕಾ ಸಕ್ಕಾ’ ಹಾಡುಗಳ ಜೊತೆಗೆ ತೆಲುಗಿನ ಗೀತೆಗಳನ್ನು ಹಾಡಿದರು. ಪುನೀತ್ ರಾಜ್ ಕುಮಾರ್ ಚಿತ್ರದ ‘ಬೊಂಬೆ ಹೇಳುತೈತೆ ನೀನೆ ರಾಜಕುಮಾರ್’ ಹಾಡು ಹಾಡಿದರು. ಇವರಿಗೆ ಗಾಯಕ ಅನಿರುದ್ಧ ಸಾಥ್ ನೀಡಿದರು.

ನಟಿ ಹರ್ಷಿಕಾ ಪೂಣಚ್ಚ ಅವರು ತಮ್ಮ ನೃತ್ಯದ ಮೂಲಕ ಎಲ್ಲರ ಮನಸೂರೆಗೊಂಡರು. ‘ನೀನಾದೆನಾ, ನೀನಾದೆನಾ… ನಿನ್ನೊಂದಿಗೆ ಈ ಜೀವನ…’, ‘ಕಣ್ಣು ಹೊಡಿಯಾಕ ಮೊನ್ನೆ ಕಲತೀನಿ’ ‘ಯಕ್ಕ ಸಕ್ಕಾ’ ಹಾಡುಗಳಿಗೆ ನೃತ್ಯ ಪ್ರದರ್ಶಿಸಿದರು. ಬಾಲಿವುಡ್ ಗಾಯಕ, ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಮತ್ತು ತಂಡದವರು ಸಂಗೀತ ರಸಮಂಜರಿ ಹಿಂದೆ ಹಾಡುಗಳು ಪ್ರೇಕ್ಷಕರ ಮನ ಗೆದ್ದವು.

ಮೈಸೂರಿನವರೇ ಆದ ನಟಿ ಪಾಯಲ್ ಅವರು ‘ಜೋಕೆ… ನಾನು ಬಳ್ಳಿಯ ಮಿಂಚು’ ಮತ್ತು ‘ಡ್ಯಾನ್ಸ್ ಡ್ಯಾನ್ಸ್ ಡ್ಯಾನ್ಸ್ ಅಪ್ಪು’ ಹಾಡುಗಳಿಗೆ ಹೆಜ್ಜೆ ಹಾಕಿದರು. ರಂಗಿತರಂಗ ಖ್ಯಾತಿಯ ನಟಿ ರಾಧಿಕಾ ನಾರಾಯಣ್ ಅವರು ಅಪ್ಪು ಹಾಡುಗಳಿಗೆ ನೃತ್ಯ ಪ್ರದರ್ಶಿಸಿದರು. ಗಾಯಕ ಶಶಾಂಕ್ ಶೇಷಗಿರಿ, ಗಾಯಕಿ ಇಂಚರ ಹಾಡಿ ರಂಜಿಸಿದರು.

ಕಾರ್ಯಕ್ರಮದ ಆರಂಭದಲ್ಲಿಯೇ ಮಳೆ ತನ್ನ ಆಟ ಶುರು ಮಾಡಿತು. ೫ ನಿಮಿಷಗಳ ಕಾಲ ಬಿರುಸಾಗಿ ಸುರಿದ ಮಳೆ, ನಂತರ ತುಂತುರಾಗಿ ಉದುರಲಾರಂಭಿಸಿತು. ಆಸನದ ವ್ಯವಸ್ಥೆ ಇಲ್ಲದೆ, ಹಿಂದೆ ನಿಂತು ಕಾರ್ಯಕ್ರಮ ನೋಡುತ್ತಿದ್ದ ಪ್ರೇಕ್ಷಕರು ಕೊಡೆ ಹಿಡಿದು ಕಾರ್ಯಕ್ರಮ ಎಂಜಾಯ್ ಮಾಡಿದರು.

 

 

 

 

 

 

andolana

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

1 hour ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

3 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

11 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

11 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

11 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

12 hours ago