ಮೈಸೂರು: ನೆಲ-ಜಲ ಕುರಿತಂತೆ ಮಹಾಜನ್ ವರದಿ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ. ಎಲ್ಲಿಯ ತನಕ ಈ ವಿವಾದ ಇರುತ್ತದೆಯೋ ಅಲ್ಲಿಯ ತನಕವೂ ನಮ್ಮ ಹೋರಾಟ ಇರುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.
ನಗರದ ವಿದ್ಯಾವಿಕಾಸ ಶಿಕ್ಷಣ ಸಂಸ್ಥೆಯಲ್ಲಿ ನಡೆದ ವಿಚಾರಸಂಕಿರಣದಲ್ಲಿ ಮಾತನಾಡಿದ ಅವರು, ಕಾವೇರಿಯಿಂದ ಗೋದಾವರಿವರೆಗೆ ಕರ್ನಾಟಕ ರಾಜ್ಯವನ್ನು ರಚನೆ ಮಾಡಲಾಯಿತು. ಆದರೆ, ಮಹಾರಾಷ್ಟ್ರದವರು ಮರಾಠಿ ಭಾಷಿಕರು ಹೆಚ್ಚಿರುವ ಪ್ರದೇಶಗಳನ್ನು ಸೇರಿಸಬೇಕೆಂದು ಹೇಳಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರಿಂದ ಮಹಾಜನ್ ಆಯೋಗ ರಚಿಸಲಾಯಿತು. ಇದರಿಂದ ಕರ್ನಾಟಕಕ್ಕೆ ಅನ್ಯಾಯವಾದರೂ ಮಹಾಜನ್ ವರದಿ ಅಂತಿಮವೆಂದು ಒಪ್ಪಿಕೊಂಡಿದ್ದೇವೆ. ಆದರೆ, ಮಹಾರಾಷ್ಟ್ರ ಮಹಾಜನ್ ವರದಿ ಒಪ್ಪಲು ತಯಾರಿಲ್ಲ. ಆಗಿಂದಾಗ್ಗೆ ಮಹಾರಾಷ್ಟ್ರ ಈ ವಿಚಾರವನ್ನು ಕೆದಕಿಕೊಂಡು ಬರುತ್ತಿದೆ ಎಂದರು.
ಕಾಸರಗೋಡಿನ ಚಂದ್ರಗಿರಿ ಬಿಟ್ಟರೆ ಉಳಿದ ಪ್ರದೇಶಗಳಲ್ಲಿ ಮತ್ತು ಪಾವಗಡದ ಮಡಕಶಿರಾದಲ್ಲಿ ಕನ್ನಡಿಗರೇ ಹೆಚ್ಚಾಗಿದ್ದಾರೆ. ಆದರೆ, ಈ ಪ್ರದೇಶಗಳು ನಮಗೆ ಸೇರಿಲ್ಲ. ಕೊಂಕಣಿ ಮಾತನಾಡುವವರನ್ನು ಮರಾಠಿಗರು ಎನ್ನುತ್ತಾರೆ. ಬೆಂಗಳೂರಿನಲ್ಲಿ ಶೇ.೨೨ರಷ್ಟು ತಮಿಳಿಗರು, ಮತ್ತೊಂದು ಕಡೆ ತೆಲುಗು ಭಾಷಿಕರು ಇದ್ದಾರೆ. ಈ ರೀತಿ ಭಾಷಾವಾರು ಪ್ರಾಂತ್ಯ ವಿಂಗಡಣೆ ಮಾಡುತ್ತಾ ಹೋದರೆ ಕರ್ನಾಟಕ ಹಳೆ ಮೈಸೂರು ಪ್ರಾಂತ್ಯಕ್ಕೆ ಸೀಮಿತವಾಗಬೇಕಾಗುತ್ತದೆ ಎಂದರು.
ಗಡಿ ವಿಚಾರಗಳನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದ್ದರೂ ರಾಜಕೀಯ ಕಾರಣಕ್ಕಾಗಿ ಮುಂದಾಗುತ್ತಿಲ್ಲ. ಪ್ರತಿ ಚುನಾವಣೆ ಬಂದಾಗ ಗಡಿ ವಿಚಾರ, ಭಾವನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ ಎಂದು ಹೇಳಿದರು.
ಜಿಲ್ಲೆ ಜಿಲ್ಲೆಗೂ ವಿವಾದ: ನದಿ ನೀರಿನ ವಿಚಾರದಲ್ಲಿ ರಾಜ್ಯಗಳ ನಡುವೆ ಮಾತ್ರವಲ್ಲ, ಜಿಲ್ಲೆ-ಜಿಲ್ಲೆ ನಡೆವೆಯೂ ವಿವಾದ ಉಂಟಾಗಿದೆ. ಮದ್ರಾಸ್ ಆಳ್ವಿಕೆ ಇದ್ದಾಗ ಬರವಣಿಗೆ ಮೂಲಕ ಮೆಟ್ಟೂರು ಡ್ಯಾಂ ನಿರ್ಮಾಣಕ್ಕೆ ಬರೆದುಕೊಟ್ಟಿದ್ದು ತಪ್ಪು. ತಮಿಳುನಾಡು ವರ್ಷಕ್ಕೆ 11ರಿಂದ 12 ಲಕ್ಷ ಹೆಕ್ಟೇರ್ನಲ್ಲಿ ಮೂರು ಬೆಳೆ ಬೆಳೆದರೆ, ಕಾವೇರಿ ಪ್ರಾಂತ್ಯದಲ್ಲಿ ೫ ಲಕ್ಷ ಹೆಕ್ಟೇರ್ನಷ್ಟು ಬೆಳೆ ಬೆಳೆಯಲಾಗುತ್ತಿದೆ. ಉಪ ನದಿಗಳನ್ನು ಕಾವೇರಿ ವ್ಯಾಪ್ತಿಗೆ ಸೇರಿಸಿದ್ದು ತಪ್ಪಾಗಿದೆ. ನಮ್ಮ ನೀರನ್ನು ನಾವು ಬಳಸಿಕೊಳ್ಳುವುದಕ್ಕೂ ಅವಕಾಶ ಸಿಗದೆ ಸಮುದ್ರಕ್ಕೆ ಪೋಲಾಗುತ್ತಿದೆ. ಹೇಮಾವತಿ ನದಿಯಿಂದ ನಾಗಮಂಗಲ, ಕೆ.ಆರ್.ಪೇಟೆ, ತುಮಕೂರು ಭಾಗಕ್ಕೆ ನೀರು ಕೊಡಬಹುದಾಗಿತ್ತು. ಹೇಮಾವತಿ ನೀರು ಹೊರಗೆ ಹೋದರೆ ಕಾವೇರಿ ನದಿಯಿಂದ ಬಿಡುಗಡೆ ಮಾಡುತ್ತಾರೆಂದು ಲೆಕ್ಕ ಕೊಡಿ ಎನ್ನುತ್ತದೆ. ಹೊರರಾಜ್ಯಗಳ ವಿಚಾರ ಇರಲೀ ನಮ್ಮ ಭಾಗದ ನೀರನ್ನು ಬಳಸಿಕೊಳ್ಳಲು ದೊಡ್ಡತನ ಬಂದಿಲ್ಲ ಎಂದು ಹೇಳಿದರು.
ಎತ್ತಿನಹೊಳೆ, ಕುಮಾರಧಾರ ಇನ್ನಿತರ ನದಿಗಳ ನೀರನ್ನು ತಿರುಗಿಸುವುದು ಸೇರಿದಂತೆ ಅನೇಕ ಯೋಜನೆಗಳನ್ನು ಕೈಗೆತ್ತಿಕೊಳ್ಳಲು 1,500 ಕೋಟಿ ರೂ. ಬಳಕೆ ಮಾಡಲಾಗುವುದು ಎಂದರು.
ಅಂತರ್ರಾಜ್ಯ ಗಡಿ, ನೀರಾವರಿ ವಿವಾದಕ್ಕೆ ಸಂಬಂಧಿಸಿದಂತೆ ಪಠ್ಯಕ್ರಮವನ್ನೇ ಮಾಡುವ ಬಗ್ಗೆ ಚಿಂತನೆ ಮಾಡಬೇಕಾಗಿದೆ. ರಾಜಕೀಯವಾಗಿ ನಾವು ನಮ್ಮ ಹಕ್ಕನ್ನು ಪಡೆಯಲು ವಿಫಲವಾಗಿದ್ದೇವೆ. ಸದಾ ಕಾಲ ಅವರ ಮರ್ಜಿಯಲ್ಲಿ ಕುಳಿತುಕೊಳ್ಳುವ ಕೆಲಸಮಾಡದೆ ನಾವೇ ಕಮಾಂಡ್ ಮಾಡುವಂತಾಗಬೇಕಿದೆ.
-ಜೆ.ಸಿ.ಮಾಧುಸ್ವಾಮಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ.
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…