ಜಿಲ್ಲೆಗಳು

ಅನಧಿಕೃತ ಆಸ್ತಿಗಳಿಗೆ ಇನ್ನು ಖಾತೆ ಭಾಗ್ಯ

ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಗ್ರಾಪಂಗಳನ್ನು ಮೇಲ್ದರ್ಜೆಗೇರಿಸಿದಾಗ ಉಂಟಾದ ಕಾನೂನು ತೊಡಕು ದೂರ: ಜಿಟಿಡಿ

ಮೈಸೂರು: ವರ್ಷದ ಹಿಂದೆ ನಗರಕ್ಕೆ ಹೊಂದಿಕೊಂಡಂತಿರುವ ಗ್ರಾಪಂಗಳನ್ನು ಮೇಲ್ದರ್ಜೆಗೇರಿಸಿದ ಪರಿಣಾಮ ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬಂದಿರುವ ಗ್ರಾಪಂಗಳಲ್ಲಿ ಉದ್ಬವವಾಗಿದ್ದ ಅಧಿಕೃತ, ಅನಧಿಕೃತ ಆಸ್ತಿಗಳಿಗೆ ಖಾತೆ ಮಾಡುವ ಸಂಬಂಧ ಉಂಟಾಗಿದ್ದ ಆಡಳಿತಾತ್ಮಕ, ಕಾನೂನು ಸಮಸ್ಯೆ ಇದೀಗ ದೂರವಾಗಿದ್ದು, ಮಾಲೀಕರಿಗೆ ಖಾತೆ ಭಾಗ್ಯ ದೊರೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಜ.2ರಂದು ನಗರಾಭಿವೃದ್ಧಿ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ತಂತ್ರಾಂಶ ಸಿದ್ಧವಾದ ಮೇಲೆ ಖಾತೆ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ. ನಗರ ಹಾಗೂ ಪಟ್ಟಣ ಪಂಚಾಯಿತಿಗೆ ಮೇಲ್ದರ್ಜೆಗೇರಿಸಲ್ಪಟ್ಟ ಅಧಿಕೃತ, ಅನಧಿಕೃತ ಎಂದು ವಿಂಗಡಿಸಿರುವ ಆಸ್ತಿಗಳಿಗೆ ನಮೂನೆ-೩ ನೀಡಲು(ಖಾತೆ) ಆದೇಶದಲ್ಲಿ ತಿಳಿಸಲಾಗಿದೆ. ಇದರಿಂದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಂದಾಜು ೧೦೩ ಬಡಾವಣೆ, ಪ್ರದೇಶಗಳ ಸುಮಾರು ೫೪,೦೦೦ ಆಸ್ತಿ ಮಾಲೀಕರಿಗೆ ಅನುಕೂಲವಾಗಲಿದೆ. ಮಾತ್ರವಲ್ಲದೇ ಇದರಿಂದ ಕ್ರಯ, ವಿಕ್ರಯ ಮಾಡಲು, ಬ್ಯಾಂಕ್ ಸಾಲ ಸೌಲಭ್ಯ ಪಡೆಯಲು, ಖಾತಾ ಬದಲಾವಣೆ, ಕಟ್ಟಡ ನಿರ್ವಾಣಕ್ಕೆ ನಕ್ಷೆ ಅನುಮೋದನೆ ಮತ್ತು ಪರವಾನಗಿ ಪಡೆಉಲು ಸಹಕಾರಿಯಾಗಲಿದೆ. ಇದೀಗ ಈ ಎಲ್ಲಾ ಆಸ್ತಿಗಳ ದಾಖಲೆಗಳನ್ನು ಸಾಫ್ಟ್‌ವೇರ್‌ಗೆ ಅಳವಡಿಸುವ ಕಾರ್ಯ ನಡೆಯುತ್ತಿದೆ. ಫೆಬ್ರವರಿ ಮೊದಲ ವಾರದಿಂದಲೇ ಖಾತೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದರು.
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಮೈಸೂರು ಮಹಾ ನಗರಪಾಲಿಕೆಗೆ ಹೊಂದಿಕೊಂಡಂತಿರುವ ೧೦ ಗ್ರಾಮ ಪಂಚಾಯಿತಿಯ ವ್ಯಾಪ್ತಿಯನ್ನು (ಪೂರ್ಣ ಪ್ರಮಾಣ ಮತ್ತು ಭಾಗಶಃ) ಮೇಲ್ದರ್ಜೆಗೇರಿಸಿ ೧ ನಗರಸಭೆ (ಹೂಟಗಳ್ಳಿ ನಗರಸಭೆ), ೪ ಪಟ್ಟಣ ಪಂಚಾಯಿತಿಗಳನ್ನು (ಬೋಗಾದಿ, ರಮ್ಮನಹಳ್ಳಿ, ಶ್ರೀರಾಂಪುರ, ಕಡಕೊಳ) ರಚಿಸಲಾಯಿತು. ೨೦೨೧ರ ಆ.೧ರಿಂದ ಅಧಿಕೃತವಾಗಿ ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ಕಾರ್ಯ ಆರಂಭಿಸಿವೆ ಎಂದರು.
ಇದಕ್ಕೂ ಮುನ್ನ ಗ್ರಾಪಂಗಳಲ್ಲಿ ಕ್ರಮಬದ್ಧ ಆಸ್ತಿ (೯, ೧೧ಎ) ಕ್ರಮಬದ್ಧವಲ್ಲದ (೯, ೧೧ಬಿ) ಎಂದು ವರ್ಗೀಕರಿಸಿ ಖಾತಾ ವಿತರಿಸಲಾಗುತ್ತಿತ್ತು. ಆದರೆ, ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬಂದ ನಂತರ ಈ ಮಾದರಿ ಖಾತೆ ಮಾಡುವುದನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದ ಈ ವ್ಯಾಪ್ತಿಯ ಜನರು ಪರದಾಡುವಂತಾಗಿತ್ತು ಎಂದರು.
ಈಗ ಪಪಂ ಹಾಗೂ ನಗರ ಸಭೆ ವ್ಯಾಪ್ತಿಉ ಭೂ ಪರಿವರ್ತನೆಯಾಗಿ ಬಡಾವಣೆ ಅನುಮೋದನೆಯಾಗದೆ ಹಾಗೂ ಮೂಲ ಸೌಲಭ್ಯಗಳನ್ನು ಕಲ್ಪಿಸದ ರವಿನ್ಯೂ ಬಡಾವಣೆಯ ಆಸ್ತಿಗಳಿಗೆ (ನಮೂನೆ ೩) ಖಾತೆ ಮಾಡಿಕೊಡಲಾಗುತ್ತದೆ ಎಂದು ತಿಳಿದರು.
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸೃಷ್ಟಿಯಾಗಿರುವ ಈ ಸಮಸ್ಯೆಗಳ ಬಗ್ಗೆ ನಾನು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿದೆ. ಬಳಿಕ ವಿಧಾನಸಭಾ ಅಧಿವೇಶನದಲ್ಲಿ ಈ ವಿಚಾರ ಚರ್ಚಿಸಲಾಯಿತು. ನಂತರ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಯಿತು. ಸಮಿತಿಯು ಇದಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ವರದಿಯನ್ನು ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಯಿತು. ಇದಕ್ಕಾಗಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಮೇಲ್ದರ್ಜೆಗೇರಿಸಿದ ಪಟ್ಟಣ ಪಂಚಾಯಿತಿ, ನಗರಸಭೆ ವ್ಯಾಪ್ತಿಯ ಗ್ರಾಪಂಗಳಿಗೆ ನಾನಾ ಯೋಜನೆಗಳಲ್ಲಿ 203 ಕೋಟಿ ರೂ. ಅನುದಾನ ಮಂಜೂರಾಗಿದೆ. 550 ಮನೆಗಳು ಮಂಜೂರಾಗಿದೆ. ಸ್ವಚ್ಛತೆ ಕೆಲಸವೂ ನಡೆದಿದೆ. ಈಗ ಖಾತೆಗೆೆ ಸಂಬಂಧಿಸಿದ ಸಮಸ್ಯೆಯನ್ನೂ ಬಗೆಹರಿಸಲಾಗಿದೆ.
-ಜಿ.ಟಿ.ದೇವೇಗೌಡ, ಶಾಸಕ

ಅಧಿಕೃತ ಆಸ್ತಿಗಳು :
-ಭೂ ಪರಿವರ್ತನೆಯಾಗಿ ಅನುಮೋದನೆಯಾಗಿರುವ ಬಡಾವಣೆಗಳು
-ಗ್ರಾಮ ಠಾಣಾ ಆಸ್ತಿಗಳು
-ಸರ್ಕಾರದಿಂದ ಮಂಜೂರಾದ ಆಸ್ತಿಗಳು
-ಕೆಐಎಡಿಬಿ ವತಿಯಿಂದ ಅನುಮೋದನೆಗೊಂಡ ಬಡಾವಣೆಗಳು

ಅನಧಿಕೃತ ಆಸ್ತಿಗಳು :
-ಭೂ ಪರಿವರ್ತನೆಾಂದ ಆದರೆ ಸಕ್ಷಮ ಪ್ರಾಧಿಕಾರ (ಮುಡಾ ಅಥವಾ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ) ದಿಂದ ಅನುಮೋದನೆಯಾಗದ ಬಡಾವಣೆಯ ಆಸ್ತಿಗಳು
-ಗ್ರಾಪಂಗಳು ಪೂರ್ಣ, ಭಾಗಶಃ ಮೇಲ್ದರ್ಜೆಗೇರಿಸಿ, ಪಂಚಾಯಿತಿಯಿಂದ ನಿರ್ವಹಿಸಿ, ಹಸ್ತಾಂತರಿಸಿದ ಆಸ್ತಿಗಳು
-ಕಟ್ಟಡ ಕಟ್ಟಲು ಪರವಾನಗಿ, ರಹದಾರಿ ಪಡೆಯದೆ ನಿರ್ಮಿಸಿದ ಕಟ್ಟಡಗಳು
-ಅಧಿಕೃತ ಆಸ್ತಿಯ ಮಾಲೀಕತ್ವ ಇಲ್ಲದ ನಿವೇಶನ, ಕಟ್ಟಡ

andolanait

Recent Posts

ಬಿಡದಿ ಟೌನ್‌ಶಿಪ್‌ : ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಏಟು ; ವಾಹನ ಜಖಂ

ಬಿಡದಿ : ಬಿಡದಿ ಟೌನ್​ಶಿಪ್ ವಿಚಾರದಲ್ಲಿ ಗದ್ದಲ–ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು…

60 mins ago

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು

ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…

6 hours ago

ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮತ್ತೊಮ್ಮೆ ಕಾನೂನು ಸಂಕಷ್ಟ

ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್‌ನಿಂದ ನೋಟಿಸ್…

6 hours ago

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

13 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

13 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

13 hours ago