ಜಿಲ್ಲೆಗಳು

ಅನಧಿಕೃತ ಆಸ್ತಿಗಳಿಗೆ ಇನ್ನು ಖಾತೆ ಭಾಗ್ಯ

ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಗ್ರಾಪಂಗಳನ್ನು ಮೇಲ್ದರ್ಜೆಗೇರಿಸಿದಾಗ ಉಂಟಾದ ಕಾನೂನು ತೊಡಕು ದೂರ: ಜಿಟಿಡಿ

ಮೈಸೂರು: ವರ್ಷದ ಹಿಂದೆ ನಗರಕ್ಕೆ ಹೊಂದಿಕೊಂಡಂತಿರುವ ಗ್ರಾಪಂಗಳನ್ನು ಮೇಲ್ದರ್ಜೆಗೇರಿಸಿದ ಪರಿಣಾಮ ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬಂದಿರುವ ಗ್ರಾಪಂಗಳಲ್ಲಿ ಉದ್ಬವವಾಗಿದ್ದ ಅಧಿಕೃತ, ಅನಧಿಕೃತ ಆಸ್ತಿಗಳಿಗೆ ಖಾತೆ ಮಾಡುವ ಸಂಬಂಧ ಉಂಟಾಗಿದ್ದ ಆಡಳಿತಾತ್ಮಕ, ಕಾನೂನು ಸಮಸ್ಯೆ ಇದೀಗ ದೂರವಾಗಿದ್ದು, ಮಾಲೀಕರಿಗೆ ಖಾತೆ ಭಾಗ್ಯ ದೊರೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಜ.2ರಂದು ನಗರಾಭಿವೃದ್ಧಿ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ತಂತ್ರಾಂಶ ಸಿದ್ಧವಾದ ಮೇಲೆ ಖಾತೆ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ. ನಗರ ಹಾಗೂ ಪಟ್ಟಣ ಪಂಚಾಯಿತಿಗೆ ಮೇಲ್ದರ್ಜೆಗೇರಿಸಲ್ಪಟ್ಟ ಅಧಿಕೃತ, ಅನಧಿಕೃತ ಎಂದು ವಿಂಗಡಿಸಿರುವ ಆಸ್ತಿಗಳಿಗೆ ನಮೂನೆ-೩ ನೀಡಲು(ಖಾತೆ) ಆದೇಶದಲ್ಲಿ ತಿಳಿಸಲಾಗಿದೆ. ಇದರಿಂದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಂದಾಜು ೧೦೩ ಬಡಾವಣೆ, ಪ್ರದೇಶಗಳ ಸುಮಾರು ೫೪,೦೦೦ ಆಸ್ತಿ ಮಾಲೀಕರಿಗೆ ಅನುಕೂಲವಾಗಲಿದೆ. ಮಾತ್ರವಲ್ಲದೇ ಇದರಿಂದ ಕ್ರಯ, ವಿಕ್ರಯ ಮಾಡಲು, ಬ್ಯಾಂಕ್ ಸಾಲ ಸೌಲಭ್ಯ ಪಡೆಯಲು, ಖಾತಾ ಬದಲಾವಣೆ, ಕಟ್ಟಡ ನಿರ್ವಾಣಕ್ಕೆ ನಕ್ಷೆ ಅನುಮೋದನೆ ಮತ್ತು ಪರವಾನಗಿ ಪಡೆಉಲು ಸಹಕಾರಿಯಾಗಲಿದೆ. ಇದೀಗ ಈ ಎಲ್ಲಾ ಆಸ್ತಿಗಳ ದಾಖಲೆಗಳನ್ನು ಸಾಫ್ಟ್‌ವೇರ್‌ಗೆ ಅಳವಡಿಸುವ ಕಾರ್ಯ ನಡೆಯುತ್ತಿದೆ. ಫೆಬ್ರವರಿ ಮೊದಲ ವಾರದಿಂದಲೇ ಖಾತೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದರು.
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಮೈಸೂರು ಮಹಾ ನಗರಪಾಲಿಕೆಗೆ ಹೊಂದಿಕೊಂಡಂತಿರುವ ೧೦ ಗ್ರಾಮ ಪಂಚಾಯಿತಿಯ ವ್ಯಾಪ್ತಿಯನ್ನು (ಪೂರ್ಣ ಪ್ರಮಾಣ ಮತ್ತು ಭಾಗಶಃ) ಮೇಲ್ದರ್ಜೆಗೇರಿಸಿ ೧ ನಗರಸಭೆ (ಹೂಟಗಳ್ಳಿ ನಗರಸಭೆ), ೪ ಪಟ್ಟಣ ಪಂಚಾಯಿತಿಗಳನ್ನು (ಬೋಗಾದಿ, ರಮ್ಮನಹಳ್ಳಿ, ಶ್ರೀರಾಂಪುರ, ಕಡಕೊಳ) ರಚಿಸಲಾಯಿತು. ೨೦೨೧ರ ಆ.೧ರಿಂದ ಅಧಿಕೃತವಾಗಿ ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ಕಾರ್ಯ ಆರಂಭಿಸಿವೆ ಎಂದರು.
ಇದಕ್ಕೂ ಮುನ್ನ ಗ್ರಾಪಂಗಳಲ್ಲಿ ಕ್ರಮಬದ್ಧ ಆಸ್ತಿ (೯, ೧೧ಎ) ಕ್ರಮಬದ್ಧವಲ್ಲದ (೯, ೧೧ಬಿ) ಎಂದು ವರ್ಗೀಕರಿಸಿ ಖಾತಾ ವಿತರಿಸಲಾಗುತ್ತಿತ್ತು. ಆದರೆ, ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬಂದ ನಂತರ ಈ ಮಾದರಿ ಖಾತೆ ಮಾಡುವುದನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದ ಈ ವ್ಯಾಪ್ತಿಯ ಜನರು ಪರದಾಡುವಂತಾಗಿತ್ತು ಎಂದರು.
ಈಗ ಪಪಂ ಹಾಗೂ ನಗರ ಸಭೆ ವ್ಯಾಪ್ತಿಉ ಭೂ ಪರಿವರ್ತನೆಯಾಗಿ ಬಡಾವಣೆ ಅನುಮೋದನೆಯಾಗದೆ ಹಾಗೂ ಮೂಲ ಸೌಲಭ್ಯಗಳನ್ನು ಕಲ್ಪಿಸದ ರವಿನ್ಯೂ ಬಡಾವಣೆಯ ಆಸ್ತಿಗಳಿಗೆ (ನಮೂನೆ ೩) ಖಾತೆ ಮಾಡಿಕೊಡಲಾಗುತ್ತದೆ ಎಂದು ತಿಳಿದರು.
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸೃಷ್ಟಿಯಾಗಿರುವ ಈ ಸಮಸ್ಯೆಗಳ ಬಗ್ಗೆ ನಾನು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿದೆ. ಬಳಿಕ ವಿಧಾನಸಭಾ ಅಧಿವೇಶನದಲ್ಲಿ ಈ ವಿಚಾರ ಚರ್ಚಿಸಲಾಯಿತು. ನಂತರ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಯಿತು. ಸಮಿತಿಯು ಇದಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ವರದಿಯನ್ನು ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಯಿತು. ಇದಕ್ಕಾಗಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಮೇಲ್ದರ್ಜೆಗೇರಿಸಿದ ಪಟ್ಟಣ ಪಂಚಾಯಿತಿ, ನಗರಸಭೆ ವ್ಯಾಪ್ತಿಯ ಗ್ರಾಪಂಗಳಿಗೆ ನಾನಾ ಯೋಜನೆಗಳಲ್ಲಿ 203 ಕೋಟಿ ರೂ. ಅನುದಾನ ಮಂಜೂರಾಗಿದೆ. 550 ಮನೆಗಳು ಮಂಜೂರಾಗಿದೆ. ಸ್ವಚ್ಛತೆ ಕೆಲಸವೂ ನಡೆದಿದೆ. ಈಗ ಖಾತೆಗೆೆ ಸಂಬಂಧಿಸಿದ ಸಮಸ್ಯೆಯನ್ನೂ ಬಗೆಹರಿಸಲಾಗಿದೆ.
-ಜಿ.ಟಿ.ದೇವೇಗೌಡ, ಶಾಸಕ

ಅಧಿಕೃತ ಆಸ್ತಿಗಳು :
-ಭೂ ಪರಿವರ್ತನೆಯಾಗಿ ಅನುಮೋದನೆಯಾಗಿರುವ ಬಡಾವಣೆಗಳು
-ಗ್ರಾಮ ಠಾಣಾ ಆಸ್ತಿಗಳು
-ಸರ್ಕಾರದಿಂದ ಮಂಜೂರಾದ ಆಸ್ತಿಗಳು
-ಕೆಐಎಡಿಬಿ ವತಿಯಿಂದ ಅನುಮೋದನೆಗೊಂಡ ಬಡಾವಣೆಗಳು

ಅನಧಿಕೃತ ಆಸ್ತಿಗಳು :
-ಭೂ ಪರಿವರ್ತನೆಾಂದ ಆದರೆ ಸಕ್ಷಮ ಪ್ರಾಧಿಕಾರ (ಮುಡಾ ಅಥವಾ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ) ದಿಂದ ಅನುಮೋದನೆಯಾಗದ ಬಡಾವಣೆಯ ಆಸ್ತಿಗಳು
-ಗ್ರಾಪಂಗಳು ಪೂರ್ಣ, ಭಾಗಶಃ ಮೇಲ್ದರ್ಜೆಗೇರಿಸಿ, ಪಂಚಾಯಿತಿಯಿಂದ ನಿರ್ವಹಿಸಿ, ಹಸ್ತಾಂತರಿಸಿದ ಆಸ್ತಿಗಳು
-ಕಟ್ಟಡ ಕಟ್ಟಲು ಪರವಾನಗಿ, ರಹದಾರಿ ಪಡೆಯದೆ ನಿರ್ಮಿಸಿದ ಕಟ್ಟಡಗಳು
-ಅಧಿಕೃತ ಆಸ್ತಿಯ ಮಾಲೀಕತ್ವ ಇಲ್ಲದ ನಿವೇಶನ, ಕಟ್ಟಡ

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

5 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

6 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

6 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

7 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

7 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

7 hours ago