ಜಿಲ್ಲೆಗಳು

‘ಯಾವ ತಾಯಿಗೂ ಇಂತಹ ಸ್ಥಿತಿ ಬರಬಾರದು…’

ಮುರುಘಾ ಶ್ರೀ ಲೈಂಗಿಕ ದೌರ್ಜನ್ಯ ಎಸಗಿರುವ ಬಾಲಕಿಯರ ತಾಯಿಯ ನೋವಿನ ನುಡಿ

ಮೈಸೂರು: ಅದೊಂದು ಮನಕಲಕುವ ಸನ್ನಿವೇಶ… ಮುಗ್ಧವಾಗಿ, ಆಟ- ಪಾಠಗಳಲ್ಲಿ ತಲ್ಲೀನವಾಗಿದ್ದ ನನ್ನ ಅಪ್ರಾಪ್ತ ಮಗಳನ್ನು ಸ್ವಾಮೀಜಿ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ವಿಚಾರ ಗೊತ್ತಾದರೂ ಕೂಡ ಅಸಹಾಯಕಳಾಗಿದ್ದೆ . ಯಾವ ತಾಯಿಗೂ ಇಂತಹ ಸ್ಥೀತಿ ಬರಬಾರದು ಎಂದು ಗದ್ಗದಿತ ಕಂಠದಿಂದ ಆ ಮಹಿಳೆ ಹೇಳುತ್ತಿದ್ದರೆ, ಕೇಳುತ್ತಿದ್ದವರು ಸಂತೈಸಲು ಪದಗಳಿಲ್ಲದೆ, ಮೌನವಾಗಿಯೇ ಆಕೆಯ ನೋವಿಗೆ ಮಮ್ಮಲ ಮರುಗಿದರು.

ಜನರ ಬಡತನವನ್ನೇ ಬಂಡವಾಳ ಮಾಡಿಕೊಂಡಿದ್ದ  ಸ್ವಾಮೀಜಿ ನನ್ನ ಮಕ್ಕಳಂತೆ ಇತರೆ ಮಕ್ಕಳನ್ನೂ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದರು ಎಂಬ ಸತ್ಯ ಅಲ್ಲಿರುವವರಿಗೆ ಗೊತ್ತಿತ್ತು. ಆದರೂ ಕೂಡ ಆ ಪೋಷಕರೆಲ್ಲರೂ ಮೌನಕ್ಕೆ ಶರಣಾಗಿದ್ದುದು ದುರಂತ ಎಂದು ಆಕೆ ಆಕ್ರೋಶದಿಂದ ನುಡಿದರು.

ಹಲವಾರು ವರ್ಷಗಳಿಂದ ಮಠದಲ್ಲಿ ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುವ ದುಷ್ಕೃತ್ಯ ನಿರಂತರವಾಗಿತ್ತು. ಸ್ವಾಮೀಜಿಯು ವಸತಿ ನಿಲಯದಲ್ಲಿದ್ದ ಹೆಣ್ಣು ಮಕ್ಕಳನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ಅನೇಕ ಮಕ್ಕಳು ನನ್ನ ಬಳಿ ನೋವು ತೋಡಿಕೊಂಡಿದ್ದರು. ಪ್ರಭಾವಿಯಾದ ಸ್ವಾಮೀಜಿ ವಿರುದ್ಧ ಮಾತನಾಡುವ ಧೈರ್ಯ ನನಗಿರಲಿಲ್ಲ . ಅದೊಂದು ದಿನ ನನ್ನ ಬಳಿಗೆ ಬಂದ ಮಗಳು ಅಳುತ್ತಲೇ ನಡೆಯುತ್ತಿರುವ ವಿಚಾರ ಹೇಳಿದ್ದಳು. ಸ್ವಾಮೀಜಿ ನನ್ನನ್ನು ಮಧ್ಯಾಹ್ನದ ವೇಳೆೆಯೇ ಅವರ ಕೊಠಡಿಗೆ ಕರೆಸಿಕೊಳ್ಳುತ್ತಾರೆ. ನನಗೆ ಇನ್ನಿಲ್ಲದ ಹಿಂಸೆ ನೀಡುತ್ತಾರೆ. ನನಗೆ ಹಾಸ್ಟೆನಲ್ಲಿ ಇರಲು ಇಷ್ಟವಿಲ್ಲ ಎಂದು ಹೇಳಿದಳು. ಆದರೂ ಅಸಹಾಯಕಳಾದ ನಾನು,  ಮಗಳನ್ನು ಮತ್ತೆ ಹಾಸ್ಟಲ್‌ಗೆ ಕಳುಹಿಸಿದೆ ಎಂದಾಗ ಧ್ವನಿಯಲ್ಲಿ ದುಃಖ ಚಾಚಿಕೊಂಡಿತ್ತು.

ಇದೀಗ ಸತ್ಯವನ್ನು ಹೇಳಿರುವ ನನಗೆ ಅಲ್ಲಿನವರು ತೊಂದರೆ ಉಂಟುವಾಡಬಹುದು. ಹೀಗಾಗಿ ಸರ್ಕಾರ ನನ್ನ ಮಕ್ಕಳಿಗೆ ವಿದ್ಯಾಭ್ಯಾಸ ಹಾಗೂ ವಸತಿ ವ್ಯವಸ್ಥೆಯನ್ನು ಮಾಡಿಕೊಡಬೇಕು. ನನಗೆ ಸೂಕ್ತ ರಕ್ಷಣೆಯನ್ನು ನೀಡಬೇಕು. ನನಗೆ ಒಂದು ಉದ್ಯೋಗ ನೀಡಬೇಕು ಎಂದು ಮನವಿ ಮಾಡಿದರು.

ಮಠದಲ್ಲಿರುವ ಮಗು ಯಾರದ್ದು? 

ಇಂತಹುದೊಂದು ಪ್ರಶ್ನೆ ಇದೀಗ ಎಲ್ಲರಲ್ಲಿ ಕುತೂಹಲ ಮೂಡಿಸಿದೆ. ಮುರಘಾ ಮಠದಲ್ಲಿ ನಾಲ್ಕೂವರೆ ವರ್ಷದ ಹೆಣ್ಣು ಮಗುವೊಂದಿರುವ ಬಗ್ಗೆ ಒಡನಾಡಿಯ ಪರಶು ಅವರಿಗೆ ಮಾಹಿತಿ ದೊರಕಿದೆ. ಮಗುವಿನ ತಂದೆ ಯಾರೂ ಎಂಬುದು ಮಠದ ಎಲ್ಲರಿಗೂ ಗೊತ್ತಿದೆ ಎಂದು ಕೆಲವರು ವಾಹಿತಿ ನೀಡಿದ್ದಾರೆ.

ಈ ಸಂಬಂಧ ಮಗುವಿನ ಮಗ್ಗೆ ವಾಹಿತಿ ಪಡೆಯುವ ಉದ್ದೇಶದಿಂದ ಪರಶು ಅವರು ನ್ಯಾಯಾಲಯದ ಗಮನಕ್ಕೆ ಈ ವಿಚಾರವನ್ನು ತಂದಿದ್ದಾರೆ. ಇದೀಗ ಮಠಕ್ಕೆ ತೆರಳಿರುವ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಮಗುವನ್ನು ಕರೆತಂದಿದ್ದಾರೆ.

‘ಸಿಬಿಐ ತನಿಖೆಯಾಗಲಿ’

ಈ ಪ್ರಕರಣದ ಸಂಬಂದ ಮಾತನಾಡಿದ ಒಡನಾಡಿ ಸಂಸ್ಥೆಯ ನಿರ್ದೇಶಕರಲ್ಲೊಬ್ಬರಾದ ಪರಶುರಾಮ್ ಅವರು, ಇದೊಂದು ದೊಡ್ಡ ಪ್ರಕರಣವಾಗಿದೆ.  ಸ್ವಾಮೀಜಿಯು ಕನಿಷ್ಠ ಮೂವತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

andolana

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

2 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

3 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

3 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

3 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

3 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

4 hours ago