ಮುರುಘಾ ಶ್ರೀ ಲೈಂಗಿಕ ದೌರ್ಜನ್ಯ ಎಸಗಿರುವ ಬಾಲಕಿಯರ ತಾಯಿಯ ನೋವಿನ ನುಡಿ
ಮೈಸೂರು: ಅದೊಂದು ಮನಕಲಕುವ ಸನ್ನಿವೇಶ… ಮುಗ್ಧವಾಗಿ, ಆಟ- ಪಾಠಗಳಲ್ಲಿ ತಲ್ಲೀನವಾಗಿದ್ದ ನನ್ನ ಅಪ್ರಾಪ್ತ ಮಗಳನ್ನು ಸ್ವಾಮೀಜಿ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ವಿಚಾರ ಗೊತ್ತಾದರೂ ಕೂಡ ಅಸಹಾಯಕಳಾಗಿದ್ದೆ . ಯಾವ ತಾಯಿಗೂ ಇಂತಹ ಸ್ಥೀತಿ ಬರಬಾರದು ಎಂದು ಗದ್ಗದಿತ ಕಂಠದಿಂದ ಆ ಮಹಿಳೆ ಹೇಳುತ್ತಿದ್ದರೆ, ಕೇಳುತ್ತಿದ್ದವರು ಸಂತೈಸಲು ಪದಗಳಿಲ್ಲದೆ, ಮೌನವಾಗಿಯೇ ಆಕೆಯ ನೋವಿಗೆ ಮಮ್ಮಲ ಮರುಗಿದರು.
ಜನರ ಬಡತನವನ್ನೇ ಬಂಡವಾಳ ಮಾಡಿಕೊಂಡಿದ್ದ ಸ್ವಾಮೀಜಿ ನನ್ನ ಮಕ್ಕಳಂತೆ ಇತರೆ ಮಕ್ಕಳನ್ನೂ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದರು ಎಂಬ ಸತ್ಯ ಅಲ್ಲಿರುವವರಿಗೆ ಗೊತ್ತಿತ್ತು. ಆದರೂ ಕೂಡ ಆ ಪೋಷಕರೆಲ್ಲರೂ ಮೌನಕ್ಕೆ ಶರಣಾಗಿದ್ದುದು ದುರಂತ ಎಂದು ಆಕೆ ಆಕ್ರೋಶದಿಂದ ನುಡಿದರು.
ಹಲವಾರು ವರ್ಷಗಳಿಂದ ಮಠದಲ್ಲಿ ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುವ ದುಷ್ಕೃತ್ಯ ನಿರಂತರವಾಗಿತ್ತು. ಸ್ವಾಮೀಜಿಯು ವಸತಿ ನಿಲಯದಲ್ಲಿದ್ದ ಹೆಣ್ಣು ಮಕ್ಕಳನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ಅನೇಕ ಮಕ್ಕಳು ನನ್ನ ಬಳಿ ನೋವು ತೋಡಿಕೊಂಡಿದ್ದರು. ಪ್ರಭಾವಿಯಾದ ಸ್ವಾಮೀಜಿ ವಿರುದ್ಧ ಮಾತನಾಡುವ ಧೈರ್ಯ ನನಗಿರಲಿಲ್ಲ . ಅದೊಂದು ದಿನ ನನ್ನ ಬಳಿಗೆ ಬಂದ ಮಗಳು ಅಳುತ್ತಲೇ ನಡೆಯುತ್ತಿರುವ ವಿಚಾರ ಹೇಳಿದ್ದಳು. ಸ್ವಾಮೀಜಿ ನನ್ನನ್ನು ಮಧ್ಯಾಹ್ನದ ವೇಳೆೆಯೇ ಅವರ ಕೊಠಡಿಗೆ ಕರೆಸಿಕೊಳ್ಳುತ್ತಾರೆ. ನನಗೆ ಇನ್ನಿಲ್ಲದ ಹಿಂಸೆ ನೀಡುತ್ತಾರೆ. ನನಗೆ ಹಾಸ್ಟೆನಲ್ಲಿ ಇರಲು ಇಷ್ಟವಿಲ್ಲ ಎಂದು ಹೇಳಿದಳು. ಆದರೂ ಅಸಹಾಯಕಳಾದ ನಾನು, ಮಗಳನ್ನು ಮತ್ತೆ ಹಾಸ್ಟಲ್ಗೆ ಕಳುಹಿಸಿದೆ ಎಂದಾಗ ಧ್ವನಿಯಲ್ಲಿ ದುಃಖ ಚಾಚಿಕೊಂಡಿತ್ತು.
ಇದೀಗ ಸತ್ಯವನ್ನು ಹೇಳಿರುವ ನನಗೆ ಅಲ್ಲಿನವರು ತೊಂದರೆ ಉಂಟುವಾಡಬಹುದು. ಹೀಗಾಗಿ ಸರ್ಕಾರ ನನ್ನ ಮಕ್ಕಳಿಗೆ ವಿದ್ಯಾಭ್ಯಾಸ ಹಾಗೂ ವಸತಿ ವ್ಯವಸ್ಥೆಯನ್ನು ಮಾಡಿಕೊಡಬೇಕು. ನನಗೆ ಸೂಕ್ತ ರಕ್ಷಣೆಯನ್ನು ನೀಡಬೇಕು. ನನಗೆ ಒಂದು ಉದ್ಯೋಗ ನೀಡಬೇಕು ಎಂದು ಮನವಿ ಮಾಡಿದರು.
ಮಠದಲ್ಲಿರುವ ಮಗು ಯಾರದ್ದು?
ಇಂತಹುದೊಂದು ಪ್ರಶ್ನೆ ಇದೀಗ ಎಲ್ಲರಲ್ಲಿ ಕುತೂಹಲ ಮೂಡಿಸಿದೆ. ಮುರಘಾ ಮಠದಲ್ಲಿ ನಾಲ್ಕೂವರೆ ವರ್ಷದ ಹೆಣ್ಣು ಮಗುವೊಂದಿರುವ ಬಗ್ಗೆ ಒಡನಾಡಿಯ ಪರಶು ಅವರಿಗೆ ಮಾಹಿತಿ ದೊರಕಿದೆ. ಮಗುವಿನ ತಂದೆ ಯಾರೂ ಎಂಬುದು ಮಠದ ಎಲ್ಲರಿಗೂ ಗೊತ್ತಿದೆ ಎಂದು ಕೆಲವರು ವಾಹಿತಿ ನೀಡಿದ್ದಾರೆ.
ಈ ಸಂಬಂಧ ಮಗುವಿನ ಮಗ್ಗೆ ವಾಹಿತಿ ಪಡೆಯುವ ಉದ್ದೇಶದಿಂದ ಪರಶು ಅವರು ನ್ಯಾಯಾಲಯದ ಗಮನಕ್ಕೆ ಈ ವಿಚಾರವನ್ನು ತಂದಿದ್ದಾರೆ. ಇದೀಗ ಮಠಕ್ಕೆ ತೆರಳಿರುವ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಮಗುವನ್ನು ಕರೆತಂದಿದ್ದಾರೆ.
‘ಸಿಬಿಐ ತನಿಖೆಯಾಗಲಿ’
ಈ ಪ್ರಕರಣದ ಸಂಬಂದ ಮಾತನಾಡಿದ ಒಡನಾಡಿ ಸಂಸ್ಥೆಯ ನಿರ್ದೇಶಕರಲ್ಲೊಬ್ಬರಾದ ಪರಶುರಾಮ್ ಅವರು, ಇದೊಂದು ದೊಡ್ಡ ಪ್ರಕರಣವಾಗಿದೆ. ಸ್ವಾಮೀಜಿಯು ಕನಿಷ್ಠ ಮೂವತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…