ಜಿಲ್ಲೆಗಳು

‘ಯಾವ ತಾಯಿಗೂ ಇಂತಹ ಸ್ಥಿತಿ ಬರಬಾರದು…’

ಮುರುಘಾ ಶ್ರೀ ಲೈಂಗಿಕ ದೌರ್ಜನ್ಯ ಎಸಗಿರುವ ಬಾಲಕಿಯರ ತಾಯಿಯ ನೋವಿನ ನುಡಿ

ಮೈಸೂರು: ಅದೊಂದು ಮನಕಲಕುವ ಸನ್ನಿವೇಶ… ಮುಗ್ಧವಾಗಿ, ಆಟ- ಪಾಠಗಳಲ್ಲಿ ತಲ್ಲೀನವಾಗಿದ್ದ ನನ್ನ ಅಪ್ರಾಪ್ತ ಮಗಳನ್ನು ಸ್ವಾಮೀಜಿ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ವಿಚಾರ ಗೊತ್ತಾದರೂ ಕೂಡ ಅಸಹಾಯಕಳಾಗಿದ್ದೆ . ಯಾವ ತಾಯಿಗೂ ಇಂತಹ ಸ್ಥೀತಿ ಬರಬಾರದು ಎಂದು ಗದ್ಗದಿತ ಕಂಠದಿಂದ ಆ ಮಹಿಳೆ ಹೇಳುತ್ತಿದ್ದರೆ, ಕೇಳುತ್ತಿದ್ದವರು ಸಂತೈಸಲು ಪದಗಳಿಲ್ಲದೆ, ಮೌನವಾಗಿಯೇ ಆಕೆಯ ನೋವಿಗೆ ಮಮ್ಮಲ ಮರುಗಿದರು.

ಜನರ ಬಡತನವನ್ನೇ ಬಂಡವಾಳ ಮಾಡಿಕೊಂಡಿದ್ದ  ಸ್ವಾಮೀಜಿ ನನ್ನ ಮಕ್ಕಳಂತೆ ಇತರೆ ಮಕ್ಕಳನ್ನೂ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದರು ಎಂಬ ಸತ್ಯ ಅಲ್ಲಿರುವವರಿಗೆ ಗೊತ್ತಿತ್ತು. ಆದರೂ ಕೂಡ ಆ ಪೋಷಕರೆಲ್ಲರೂ ಮೌನಕ್ಕೆ ಶರಣಾಗಿದ್ದುದು ದುರಂತ ಎಂದು ಆಕೆ ಆಕ್ರೋಶದಿಂದ ನುಡಿದರು.

ಹಲವಾರು ವರ್ಷಗಳಿಂದ ಮಠದಲ್ಲಿ ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುವ ದುಷ್ಕೃತ್ಯ ನಿರಂತರವಾಗಿತ್ತು. ಸ್ವಾಮೀಜಿಯು ವಸತಿ ನಿಲಯದಲ್ಲಿದ್ದ ಹೆಣ್ಣು ಮಕ್ಕಳನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ಅನೇಕ ಮಕ್ಕಳು ನನ್ನ ಬಳಿ ನೋವು ತೋಡಿಕೊಂಡಿದ್ದರು. ಪ್ರಭಾವಿಯಾದ ಸ್ವಾಮೀಜಿ ವಿರುದ್ಧ ಮಾತನಾಡುವ ಧೈರ್ಯ ನನಗಿರಲಿಲ್ಲ . ಅದೊಂದು ದಿನ ನನ್ನ ಬಳಿಗೆ ಬಂದ ಮಗಳು ಅಳುತ್ತಲೇ ನಡೆಯುತ್ತಿರುವ ವಿಚಾರ ಹೇಳಿದ್ದಳು. ಸ್ವಾಮೀಜಿ ನನ್ನನ್ನು ಮಧ್ಯಾಹ್ನದ ವೇಳೆೆಯೇ ಅವರ ಕೊಠಡಿಗೆ ಕರೆಸಿಕೊಳ್ಳುತ್ತಾರೆ. ನನಗೆ ಇನ್ನಿಲ್ಲದ ಹಿಂಸೆ ನೀಡುತ್ತಾರೆ. ನನಗೆ ಹಾಸ್ಟೆನಲ್ಲಿ ಇರಲು ಇಷ್ಟವಿಲ್ಲ ಎಂದು ಹೇಳಿದಳು. ಆದರೂ ಅಸಹಾಯಕಳಾದ ನಾನು,  ಮಗಳನ್ನು ಮತ್ತೆ ಹಾಸ್ಟಲ್‌ಗೆ ಕಳುಹಿಸಿದೆ ಎಂದಾಗ ಧ್ವನಿಯಲ್ಲಿ ದುಃಖ ಚಾಚಿಕೊಂಡಿತ್ತು.

ಇದೀಗ ಸತ್ಯವನ್ನು ಹೇಳಿರುವ ನನಗೆ ಅಲ್ಲಿನವರು ತೊಂದರೆ ಉಂಟುವಾಡಬಹುದು. ಹೀಗಾಗಿ ಸರ್ಕಾರ ನನ್ನ ಮಕ್ಕಳಿಗೆ ವಿದ್ಯಾಭ್ಯಾಸ ಹಾಗೂ ವಸತಿ ವ್ಯವಸ್ಥೆಯನ್ನು ಮಾಡಿಕೊಡಬೇಕು. ನನಗೆ ಸೂಕ್ತ ರಕ್ಷಣೆಯನ್ನು ನೀಡಬೇಕು. ನನಗೆ ಒಂದು ಉದ್ಯೋಗ ನೀಡಬೇಕು ಎಂದು ಮನವಿ ಮಾಡಿದರು.

ಮಠದಲ್ಲಿರುವ ಮಗು ಯಾರದ್ದು? 

ಇಂತಹುದೊಂದು ಪ್ರಶ್ನೆ ಇದೀಗ ಎಲ್ಲರಲ್ಲಿ ಕುತೂಹಲ ಮೂಡಿಸಿದೆ. ಮುರಘಾ ಮಠದಲ್ಲಿ ನಾಲ್ಕೂವರೆ ವರ್ಷದ ಹೆಣ್ಣು ಮಗುವೊಂದಿರುವ ಬಗ್ಗೆ ಒಡನಾಡಿಯ ಪರಶು ಅವರಿಗೆ ಮಾಹಿತಿ ದೊರಕಿದೆ. ಮಗುವಿನ ತಂದೆ ಯಾರೂ ಎಂಬುದು ಮಠದ ಎಲ್ಲರಿಗೂ ಗೊತ್ತಿದೆ ಎಂದು ಕೆಲವರು ವಾಹಿತಿ ನೀಡಿದ್ದಾರೆ.

ಈ ಸಂಬಂಧ ಮಗುವಿನ ಮಗ್ಗೆ ವಾಹಿತಿ ಪಡೆಯುವ ಉದ್ದೇಶದಿಂದ ಪರಶು ಅವರು ನ್ಯಾಯಾಲಯದ ಗಮನಕ್ಕೆ ಈ ವಿಚಾರವನ್ನು ತಂದಿದ್ದಾರೆ. ಇದೀಗ ಮಠಕ್ಕೆ ತೆರಳಿರುವ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಮಗುವನ್ನು ಕರೆತಂದಿದ್ದಾರೆ.

‘ಸಿಬಿಐ ತನಿಖೆಯಾಗಲಿ’

ಈ ಪ್ರಕರಣದ ಸಂಬಂದ ಮಾತನಾಡಿದ ಒಡನಾಡಿ ಸಂಸ್ಥೆಯ ನಿರ್ದೇಶಕರಲ್ಲೊಬ್ಬರಾದ ಪರಶುರಾಮ್ ಅವರು, ಇದೊಂದು ದೊಡ್ಡ ಪ್ರಕರಣವಾಗಿದೆ.  ಸ್ವಾಮೀಜಿಯು ಕನಿಷ್ಠ ಮೂವತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

andolana

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

6 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

19 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

21 hours ago