ಜಿಲ್ಲೆಗಳು

ರೈತರ ಸಮಸ್ಯೆ ಕೇಳುವವರಾರೂ ಇಲ್ಲ

ರೈತ ಸಂಘದ ಅನಿರ್ದಿಷ್ಟಾವಧಿ ಧರಣಿಗೆ ಬೆಂಬಲ ನೀಡಿ ಪೃಥ್ವಿರೆಡ್ಡಿ

ಮಂಡ್ಯ: ರೈತರ ಸಮಸ್ಯೆಗಳನ್ನು ಯಾರೂ ಕೇಳುತ್ತಿಲ್ಲ, ಮಾಜಿ ಶಾಸಕ ದಿ. ಕೆ.ಎಸ್.ಪುಟ್ಟಣ್ಣಯ್ಯ ಅವರು ಸದನದಲ್ಲಿ ದನಿ ಎತ್ತುತ್ತಿದ್ದರು. ಈಗ ಯಾರೂ ಇಲ್ಲ, ನಿಮ್ಮ ಸಮಸ್ಯೆಗಳನ್ನು ಯಾರು ಚರ್ಚೆ ಮಾಡುತ್ತಾರೆ ಎಂಬುದು ಮುಖ್ಯವಾಗಬೇಕು. ಈಗ ನಡೆಯುತ್ತಿರುವ ಚರ್ಚೆಯು ಕಾರ್ಪೋರೇಟ್ ಕಂಪನಿಗಳಿಗೆ ಲಾಭ ಮಾಡಿಕೊಡುವ ಉದ್ದೇಶವಾಗಿದೆ ಎಂದು ಎಎಪಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಆರೋಪಿಸಿದರು.

ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸುವ ಮೂಲಕ ಮಾತನಾಡಿದ ಅವರು, ಪಂಜಾಬ್‌ನಲ್ಲಿ ಪ್ರತಿ ಟನ್ ಕಬ್ಬಿಗೆ ಬೆಂಬಲ ಬೆಲೆ ನೀಡಲಾಗುತ್ತಿದೆ. ಇಲ್ಲಿ ಏಕೆ ನೀಡಲಾಗುತ್ತಿಲ್ಲ, ಪಂಜಾಬ್‌ನಲ್ಲಿ ಇಳುವರಿ ಶೇ.೭ ರಿಂದ ೮ ರಷ್ಟು ಇದೆ. ಕರ್ನಾಟಕದಲ್ಲಿ ಶೇ.೧೧ ರಿಂದ ೧೨ ರಷ್ಟು ಇದೆ. ಆದರೂ ತಾರತಮ್ಯ ಮಾಡುತ್ತಿರುವುದು ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಇಲ್ಲಿಗೆ ಬಂದಿರುವುದು ಮತ ಹಾಕಿಸಿಕೊಡುವ ದೃಷ್ಟಿಯಿಂದಲ್ಲ. ದೇಶದಲ್ಲಿಯೇ ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸಿ ಎನ್ನುವುದಷ್ಟೇ ನಮ್ಮ ಉದ್ದೇಶವಾಗಿದೆ. ಅಂತಹ ಕಾನೂನುಗಳು ಬರಬೇಕು. ಸಂಸತ್‌ನಲ್ಲಿ ಚರ್ಚೆಯಾಗುತ್ತಿದೆ ಎನ್ನುವ ನಿಟ್ಟಿನಲ್ಲಿ ಸಂಸತ್‌ನಲ್ಲಿ ಒಪ್ಪಿಕೊಂಡಿದ್ದರೆ ಅರ್ಧದಷ್ಟು ಜನ ಜೈಲಿಗೆ ಹೋಗುತ್ತಿದ್ದರು. ಕಾನೂನನ್ನು ದಿಟ್ಟವಾಗಿ ತರುವ ಕೆಲಸ ಆಗಬೇಕು ಎಂದು ಆಗ್ರಹಿಸಿದರು.

ರೈಲ್ವೆ ಹಾಗೂ ವಿಮಾನ ನಿಲ್ದಾಣಕ್ಕೆ ಜಾಗಗಳನ್ನು ಮಾರಿಕೊಳ್ಳುತ್ತಿದ್ದಾರೆ. ಗುಜರಾತ್‌ನಲ್ಲಿಯೂ ಇದೇ ಕಥೆ ಆಗಿದೆ. ವಿಮಾನ ಕೊಳ್ಳಬೇಕು ಎಂದರೆ ಅಲ್ಲಿ ಶೇ.೧೪ ಪಟ್ಟು ಜಾಸ್ತಿ ಮಾಡಿದ್ದಾರೆ. ಈ ಹಣವನ್ನು ಜನಸಾಮಾನ್ಯರಿಂದಲೇ ವಸೂಲಿ ಮಾಡಲಾಗುತ್ತಿದೆ. ಜನರಲ್ಲಿ ಮನವಿ ಏನೆಂದರೆ, ನಿಮ್ಮ ಪರವಾಗಿಯೇ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಮೊದಲು ರೈತರು ಒಗ್ಗಟ್ಟಾಗಬೇಕು. ಈ ಹಿಂದೆ ರೈತ ಸಂಘಕ್ಕೆ ರಾಜಕೀಯ ಪಕ್ಷಗಳು ಭಯಪಡುತ್ತಿದ್ದವು, ಈಗ ಯಾವ ಭಯವೂ ಇಲ್ಲದಂತಾಗಿದೆ ಎಂದು ವಿಷಾದಿಸಿದರು.

ಪಂಜಾಬ್‌ನಲ್ಲಿ ಮುಖ್ಯಮಂತ್ರಿಯನ್ನೇ ಸೋಲಿಸಿದ ಹುಡುಗ ಕೇವಲ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ. ರೈತರನ್ನು ಚುನಾವಣೆಯಲ್ಲಿ ನಿಲ್ಲಿಸಿ ಗೆಲ್ಲಿಸುವುದು ಮುಖ್ಯವಾಗಬೇಕು. ಮುಂಬರುವ ಚುನಾವಣೆಯಲ್ಲಿ ರೈತರು ಚುನಾವಣೆಯಲ್ಲಿ ಸ್ಪರ್ಧಿಸಬೇಕು. ನಮ್ಮ ಆಮ್ ಆದ್ಮಿ ಪಕ್ಷ ಬೆಂಬಲ ನೀಡುತ್ತದೆ. ನಾವು ಒಳ್ಳೆಯ ಉದ್ದೇಶದಿಂದಲೇ ಸಲಹೆಯನ್ನು ನೀಡುತ್ತಿದ್ದೇವೆ, ಇದು ಕಾರ್ಯರೂಪಕ್ಕ ಬರಬೇಕು ಎಂದು ಸಲಹೆ ನೀಡಿದರು.

ಎಎಪಿ ಮುಖಂಡ ರವಿಕಿರಣ್ ಮಾತನಾಡಿ, ಇಂಜಿನಿಯರ್ ಮಾಡಿದ್ದರೂ ಕೂಡ ೨೫ ಲಕ್ಷ ಹಣ ಕೊಟ್ಟು ಮನ್‌ಮುಲ್‌ನಲ್ಲಿ ಕೆಲಸ ಪಡೆದುಕೊಳ್ಳುತ್ತಾರೆ. ಇಲ್ಲಿ ರೈತರ ಮಕ್ಕಳಿಗೆ ಕೆಲಸ ನೀಡಿದರೆ ಮಾತ್ರ ಅವರಿಗೆ ಹಾಲು ಉತ್ಪಾದನೆಯಿಂದ ಹಿಡಿದು ರೈತರ ಹೈನುಗಾರಿಕೆಯವರೆಗೂ ವಿಷಯ ತಿಳಿದಿರುತ್ತದೆ.

ಮನ್‌ಮುಲ್‌ನಲ್ಲಿ ರೈತರ ಮಕ್ಕಳಿಗೆ ಉದ್ಯೋಗಾವಕಾಶಗಳು ಹೆಚ್ಚಾದರೆ ಮನ್‌ಮುಲ್ ಉಳಿಯುತ್ತದೆ. ಈ ಭ್ರಷ್ಟಾಚಾರ ಹಾಗೂ ಹಗರಣಗಳು ಆಗ ಮಾತ್ರ ನಿಲ್ಲುತ್ತವೆ ಎಂದು ಹೇಳಿದರು.

ಎಎಪಿ ಜಿಲ್ಲಾ ಉಸ್ತುವಾರಿ ಬೂದನೂರು ಬೊಮ್ಮಯ್ಯ ಮಾತನಾಡಿ, ಮೈಶುಗರ್ ಸಕ್ಕರೆ ಕಾರ್ಖಾನೆ ಉಳಿವಿಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಈಗ ಆರಂಭವಾಗಿರುವ ಕಾರ್ಖಾನೆಯು ಕಬ್ಬಿಗೆ ೧,೫೦೦ ರೂ. ನಷ್ಟವಾಗುತ್ತಿದೆ ಎಂಬ ಆರೋಪವಿದೆ. ಇದನ್ನು ಸರ್ಕಾರ ನಡೆಸಲು ಆಗುವುದಿಲ್ಲ ಎಂದು ಅಲ್ಲೊಬ್ಬ ಸಚಿವ ಹೇಳುತ್ತಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಎಎಪಿ ಜಂಟಿ ಕಾರ್ಯದರ್ಶಿ ದರ್ಶನ್‌ಜೈನ್, ಅಬ್ದುಲ್, ಮಹದೇವಸ್ವಾಮಿ, ಶಿವಕುಮಾರ್, ಆಕಾಶ್, ಶಿವರಾಮು, ಗಂಗಾಧರಯ್ಯ, ಜಿಲ್ಲಾ ರೈತ ಸಂಘದ ಅಧ್ಯಕ್ಷ ಎ.ಎಲ್.ಕೆಂಪುಗೌಡ, ಮುಖಂಡರಾದ ಎಸ್.ಸಿ.ಮಧುಚಂದನ್, ತಗ್ಗಹಳ್ಳಿ ವೆಂಕಟೇಶ್, ನಾಗೇಶ್, ರವಿಕುಮಾರ್, ಶಿವಳ್ಳಿ ಚಂದ್ರು, ಪುಟ್ಟಸ್ವಾಮಿ ಹಾಜರಿದ್ದರು.

andolana

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

2 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

8 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

9 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

9 hours ago