ಜಿಲ್ಲೆಗಳು

‘ಕನ್ನಡ ನರ್ಸರಿ ಶಾಲೆ ಮರು ನಿರ್ಮಾಣಕ್ಕೆ 25 ತಿಂಗಳಾದ್ರೂ ಅನುಮತಿ ಇಲ್ಲ’

ಲೈಸೆನ್ಸ್ ಮತ್ತು ಪ್ಲಾನ್ ನೀಡುವಂತೆ ಕೇಳಿ ೨೫ ತಿಂಗಳಾಯಿತು: ರಾಮಕೃಷ್ಣ ಅಳಲು

ಮೈಸೂರು: ‘ಕುಸಿದಿರುವ ಕನ್ನಡ ಶಾಲೆಯೊಂದನ್ನು ಮರು ನಿರ್ಮಾಣ ಮಾಡಲು ಲೈಸೆನ್ಸ್ ಮತ್ತು ಪ್ಲಾನ್ ನೀಡುವಂತೆ ಕೋರಿ ೨೫ ತಿಂಗಳಾದ್ರೂ ನಗರಪಾಲಿಕೆ ವತಿಯಿಂದ ಇನ್ನು ಅನುಮತಿ ನೀಡಿಲ್ಲ’ ಎಂದು ಶ್ರೀ ವಿದ್ಯಾಶಂಕರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ರಾಮಕೃಷ್ಣ ಅಳಲು ತೋಡಿಕೊಂಡರು.
ನಗರದ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ಬುಧವಾರ ಮೈಸೂರು ನಗರಪಾಲಿಕೆಯ ಶ್ರೀ ಜಯಚಾಮರಾಜ ಒಡೆಯರ್ ಸಭಾಂಗಣದಲ್ಲಿ ‘ಅಂತಿಮ ಪಾಲಿಕೆ ಅದಾಲತ್’ನಲ್ಲಿ ಸಮಸ್ಯೆಗಳನ್ನು ತಿಳಿಸಿದರು.

೧೯೭೫ರಿಂದ ಉದಯಗಿರಿ ಮತ್ತು ಸಿದ್ಧಾರ್ಥನಗರದಲ್ಲಿ ಶ್ರೀವಿದ್ಯಾಶಂಕರ ಶಿಕ್ಷಣ ಸಂಸ್ಥೆಯು ಸಂಪೂರ್ಣ ಉಚಿತವಾಗಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿದೆ. ಸಿದ್ದಾರ್ಥನಗರದಲ್ಲಿನ ಮೈಸೂರ್ ಒನ್ ಬಳಿ ಇರುವ ಸಂಸ್ಥೆಯ ಕನ್ನಡ ನರ್ಸರಿ ಶಾಲೆಯ ಕಟ್ಟಡ ೨೦೧೬-೧೭ರಲ್ಲಿ ಕುಸಿದಿತ್ತು. ಕಟ್ಟಡವನ್ನು ಪುನರ್ ನಿರ್ಮಾಣ ಮಾಡಲು ೨೦೨೦ರಲ್ಲಿಯೇ ಲೈಸೆನ್ಸ್ ಮತ್ತು ಪ್ಲಾನ್ ನೀಡುವಂತೆ ಅರ್ಜಿ ಹಾಕಿದ್ದೆ. ಶಿಲ್ಪನಾಗ್ ಅವರು ಮತ್ತು ಇಂದಿನ ಪಾಲಿಕೆ ಆಯುಕ್ತರಾದ ಲಕ್ಷೀಕಾಂತ್ ರೆಡ್ಡಿ ಅವರು ತಲಾ ಎರಡು ಬಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ, ನಾನಾ ಕಾರಣಗಳನ್ನು ಹೇಳಿ ಇನ್ನೂ ಲೈಸೆನ್ಸ್ ಮತ್ತು ಪ್ಲಾನ್ ಅನ್ನು ನೀಡಿಲ್ಲ ಎಂದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್ ಶಿವಕುಮಾರ್ ಮತ್ತು ಆಯುಕ್ತ ಲಕ್ಷ್ಮೀಕಾಂತ್ ರೆಡ್ಡಿ ಅವರು ‘ ಡಿ.೮ರಂದು ನಡೆಯುವ ಕೌನ್ಸಿಲ್ ಸಭೆಯಲ್ಲಿ ಅನುಮೋದನೆ ನೀಡಲಾಗುವುದು’ ಎಂದು ಭರವಸೆ ನೀಡಲಾಗುವುದು ಎಂದರು.

ಗಾಯಿತ್ರಿಪುರಂನ ಕೃಷ್ಣ ಎಂಬವರು ಓರಿಯಂಟಲ್ ವಿಮೆ ಕಾನೂನು ಅನ್ವಯ ಹಣಕಟ್ಟಿ ರಸ್ತೆಯೊಂದನ್ನು ನಿರ್ವಹಣೆ ಮಾಡಲು ಎನ್‌ಒಸಿ ನೀಡುವಂತೆ ಕೇಳಿದರು. ಇದಕ್ಕೆ ಆಯುಕ್ತ ಲಕ್ಷೀಕಾಂತ್ ರೆಡ್ಡಿ, ಹಾಗೆ ನೀಡಲು ಅವಕಾಶವಿಲ್ಲ ಎಂದು ಪ್ರತಿಕ್ರಿಯಿಸಿದರು. ೨೦೧೮ರಲ್ಲಿ ಬೋಗಾದಿಯ ಸಿಎಫ್‌ಟಿಆರ್‌ಐ ಲೇಔಟ್‌ನಲ್ಲಿ ರಸ್ತೆ ನಿರ್ವಹಣೆ ಮಾಡಲು ವಾಸು ಎಂಬವರಿಗೆ ಎನ್‌ಒಸಿ ನೀಡಿ ಅವಕಾಶ ನೀಡಲಾಗಿದೆ. ನಮಗೆ ಯಾಕೆ ನೀಡುವುದಿಲ್ಲ ಎಂದು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮೀಕಾಂತ್ ರೆಡ್ಡಿ, ಈಗ ಹೀಗೆ ನೀಡಬಹುದಾದ ಯಾವುದೇ ನಿಯಮವಿಲ್ಲ. ಹಾಗಾಗಿ, ಕೊಡಲಾಗುವುದಿಲ್ಲ ಎಂದರು.

 

 

 

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago