ಜಿಲ್ಲೆಗಳು

‘ಕನ್ನಡ ನರ್ಸರಿ ಶಾಲೆ ಮರು ನಿರ್ಮಾಣಕ್ಕೆ 25 ತಿಂಗಳಾದ್ರೂ ಅನುಮತಿ ಇಲ್ಲ’

ಲೈಸೆನ್ಸ್ ಮತ್ತು ಪ್ಲಾನ್ ನೀಡುವಂತೆ ಕೇಳಿ ೨೫ ತಿಂಗಳಾಯಿತು: ರಾಮಕೃಷ್ಣ ಅಳಲು

ಮೈಸೂರು: ‘ಕುಸಿದಿರುವ ಕನ್ನಡ ಶಾಲೆಯೊಂದನ್ನು ಮರು ನಿರ್ಮಾಣ ಮಾಡಲು ಲೈಸೆನ್ಸ್ ಮತ್ತು ಪ್ಲಾನ್ ನೀಡುವಂತೆ ಕೋರಿ ೨೫ ತಿಂಗಳಾದ್ರೂ ನಗರಪಾಲಿಕೆ ವತಿಯಿಂದ ಇನ್ನು ಅನುಮತಿ ನೀಡಿಲ್ಲ’ ಎಂದು ಶ್ರೀ ವಿದ್ಯಾಶಂಕರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ರಾಮಕೃಷ್ಣ ಅಳಲು ತೋಡಿಕೊಂಡರು.
ನಗರದ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ಬುಧವಾರ ಮೈಸೂರು ನಗರಪಾಲಿಕೆಯ ಶ್ರೀ ಜಯಚಾಮರಾಜ ಒಡೆಯರ್ ಸಭಾಂಗಣದಲ್ಲಿ ‘ಅಂತಿಮ ಪಾಲಿಕೆ ಅದಾಲತ್’ನಲ್ಲಿ ಸಮಸ್ಯೆಗಳನ್ನು ತಿಳಿಸಿದರು.

೧೯೭೫ರಿಂದ ಉದಯಗಿರಿ ಮತ್ತು ಸಿದ್ಧಾರ್ಥನಗರದಲ್ಲಿ ಶ್ರೀವಿದ್ಯಾಶಂಕರ ಶಿಕ್ಷಣ ಸಂಸ್ಥೆಯು ಸಂಪೂರ್ಣ ಉಚಿತವಾಗಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿದೆ. ಸಿದ್ದಾರ್ಥನಗರದಲ್ಲಿನ ಮೈಸೂರ್ ಒನ್ ಬಳಿ ಇರುವ ಸಂಸ್ಥೆಯ ಕನ್ನಡ ನರ್ಸರಿ ಶಾಲೆಯ ಕಟ್ಟಡ ೨೦೧೬-೧೭ರಲ್ಲಿ ಕುಸಿದಿತ್ತು. ಕಟ್ಟಡವನ್ನು ಪುನರ್ ನಿರ್ಮಾಣ ಮಾಡಲು ೨೦೨೦ರಲ್ಲಿಯೇ ಲೈಸೆನ್ಸ್ ಮತ್ತು ಪ್ಲಾನ್ ನೀಡುವಂತೆ ಅರ್ಜಿ ಹಾಕಿದ್ದೆ. ಶಿಲ್ಪನಾಗ್ ಅವರು ಮತ್ತು ಇಂದಿನ ಪಾಲಿಕೆ ಆಯುಕ್ತರಾದ ಲಕ್ಷೀಕಾಂತ್ ರೆಡ್ಡಿ ಅವರು ತಲಾ ಎರಡು ಬಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ, ನಾನಾ ಕಾರಣಗಳನ್ನು ಹೇಳಿ ಇನ್ನೂ ಲೈಸೆನ್ಸ್ ಮತ್ತು ಪ್ಲಾನ್ ಅನ್ನು ನೀಡಿಲ್ಲ ಎಂದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್ ಶಿವಕುಮಾರ್ ಮತ್ತು ಆಯುಕ್ತ ಲಕ್ಷ್ಮೀಕಾಂತ್ ರೆಡ್ಡಿ ಅವರು ‘ ಡಿ.೮ರಂದು ನಡೆಯುವ ಕೌನ್ಸಿಲ್ ಸಭೆಯಲ್ಲಿ ಅನುಮೋದನೆ ನೀಡಲಾಗುವುದು’ ಎಂದು ಭರವಸೆ ನೀಡಲಾಗುವುದು ಎಂದರು.

ಗಾಯಿತ್ರಿಪುರಂನ ಕೃಷ್ಣ ಎಂಬವರು ಓರಿಯಂಟಲ್ ವಿಮೆ ಕಾನೂನು ಅನ್ವಯ ಹಣಕಟ್ಟಿ ರಸ್ತೆಯೊಂದನ್ನು ನಿರ್ವಹಣೆ ಮಾಡಲು ಎನ್‌ಒಸಿ ನೀಡುವಂತೆ ಕೇಳಿದರು. ಇದಕ್ಕೆ ಆಯುಕ್ತ ಲಕ್ಷೀಕಾಂತ್ ರೆಡ್ಡಿ, ಹಾಗೆ ನೀಡಲು ಅವಕಾಶವಿಲ್ಲ ಎಂದು ಪ್ರತಿಕ್ರಿಯಿಸಿದರು. ೨೦೧೮ರಲ್ಲಿ ಬೋಗಾದಿಯ ಸಿಎಫ್‌ಟಿಆರ್‌ಐ ಲೇಔಟ್‌ನಲ್ಲಿ ರಸ್ತೆ ನಿರ್ವಹಣೆ ಮಾಡಲು ವಾಸು ಎಂಬವರಿಗೆ ಎನ್‌ಒಸಿ ನೀಡಿ ಅವಕಾಶ ನೀಡಲಾಗಿದೆ. ನಮಗೆ ಯಾಕೆ ನೀಡುವುದಿಲ್ಲ ಎಂದು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮೀಕಾಂತ್ ರೆಡ್ಡಿ, ಈಗ ಹೀಗೆ ನೀಡಬಹುದಾದ ಯಾವುದೇ ನಿಯಮವಿಲ್ಲ. ಹಾಗಾಗಿ, ಕೊಡಲಾಗುವುದಿಲ್ಲ ಎಂದರು.

 

 

 

andolana

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

3 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

8 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

8 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

9 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

10 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

10 hours ago