ಜಿಲ್ಲೆಗಳು

‘ಕನ್ನಡ ನರ್ಸರಿ ಶಾಲೆ ಮರು ನಿರ್ಮಾಣಕ್ಕೆ 25 ತಿಂಗಳಾದ್ರೂ ಅನುಮತಿ ಇಲ್ಲ’

ಲೈಸೆನ್ಸ್ ಮತ್ತು ಪ್ಲಾನ್ ನೀಡುವಂತೆ ಕೇಳಿ ೨೫ ತಿಂಗಳಾಯಿತು: ರಾಮಕೃಷ್ಣ ಅಳಲು

ಮೈಸೂರು: ‘ಕುಸಿದಿರುವ ಕನ್ನಡ ಶಾಲೆಯೊಂದನ್ನು ಮರು ನಿರ್ಮಾಣ ಮಾಡಲು ಲೈಸೆನ್ಸ್ ಮತ್ತು ಪ್ಲಾನ್ ನೀಡುವಂತೆ ಕೋರಿ ೨೫ ತಿಂಗಳಾದ್ರೂ ನಗರಪಾಲಿಕೆ ವತಿಯಿಂದ ಇನ್ನು ಅನುಮತಿ ನೀಡಿಲ್ಲ’ ಎಂದು ಶ್ರೀ ವಿದ್ಯಾಶಂಕರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ರಾಮಕೃಷ್ಣ ಅಳಲು ತೋಡಿಕೊಂಡರು.
ನಗರದ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ಬುಧವಾರ ಮೈಸೂರು ನಗರಪಾಲಿಕೆಯ ಶ್ರೀ ಜಯಚಾಮರಾಜ ಒಡೆಯರ್ ಸಭಾಂಗಣದಲ್ಲಿ ‘ಅಂತಿಮ ಪಾಲಿಕೆ ಅದಾಲತ್’ನಲ್ಲಿ ಸಮಸ್ಯೆಗಳನ್ನು ತಿಳಿಸಿದರು.

೧೯೭೫ರಿಂದ ಉದಯಗಿರಿ ಮತ್ತು ಸಿದ್ಧಾರ್ಥನಗರದಲ್ಲಿ ಶ್ರೀವಿದ್ಯಾಶಂಕರ ಶಿಕ್ಷಣ ಸಂಸ್ಥೆಯು ಸಂಪೂರ್ಣ ಉಚಿತವಾಗಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿದೆ. ಸಿದ್ದಾರ್ಥನಗರದಲ್ಲಿನ ಮೈಸೂರ್ ಒನ್ ಬಳಿ ಇರುವ ಸಂಸ್ಥೆಯ ಕನ್ನಡ ನರ್ಸರಿ ಶಾಲೆಯ ಕಟ್ಟಡ ೨೦೧೬-೧೭ರಲ್ಲಿ ಕುಸಿದಿತ್ತು. ಕಟ್ಟಡವನ್ನು ಪುನರ್ ನಿರ್ಮಾಣ ಮಾಡಲು ೨೦೨೦ರಲ್ಲಿಯೇ ಲೈಸೆನ್ಸ್ ಮತ್ತು ಪ್ಲಾನ್ ನೀಡುವಂತೆ ಅರ್ಜಿ ಹಾಕಿದ್ದೆ. ಶಿಲ್ಪನಾಗ್ ಅವರು ಮತ್ತು ಇಂದಿನ ಪಾಲಿಕೆ ಆಯುಕ್ತರಾದ ಲಕ್ಷೀಕಾಂತ್ ರೆಡ್ಡಿ ಅವರು ತಲಾ ಎರಡು ಬಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ, ನಾನಾ ಕಾರಣಗಳನ್ನು ಹೇಳಿ ಇನ್ನೂ ಲೈಸೆನ್ಸ್ ಮತ್ತು ಪ್ಲಾನ್ ಅನ್ನು ನೀಡಿಲ್ಲ ಎಂದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್ ಶಿವಕುಮಾರ್ ಮತ್ತು ಆಯುಕ್ತ ಲಕ್ಷ್ಮೀಕಾಂತ್ ರೆಡ್ಡಿ ಅವರು ‘ ಡಿ.೮ರಂದು ನಡೆಯುವ ಕೌನ್ಸಿಲ್ ಸಭೆಯಲ್ಲಿ ಅನುಮೋದನೆ ನೀಡಲಾಗುವುದು’ ಎಂದು ಭರವಸೆ ನೀಡಲಾಗುವುದು ಎಂದರು.

ಗಾಯಿತ್ರಿಪುರಂನ ಕೃಷ್ಣ ಎಂಬವರು ಓರಿಯಂಟಲ್ ವಿಮೆ ಕಾನೂನು ಅನ್ವಯ ಹಣಕಟ್ಟಿ ರಸ್ತೆಯೊಂದನ್ನು ನಿರ್ವಹಣೆ ಮಾಡಲು ಎನ್‌ಒಸಿ ನೀಡುವಂತೆ ಕೇಳಿದರು. ಇದಕ್ಕೆ ಆಯುಕ್ತ ಲಕ್ಷೀಕಾಂತ್ ರೆಡ್ಡಿ, ಹಾಗೆ ನೀಡಲು ಅವಕಾಶವಿಲ್ಲ ಎಂದು ಪ್ರತಿಕ್ರಿಯಿಸಿದರು. ೨೦೧೮ರಲ್ಲಿ ಬೋಗಾದಿಯ ಸಿಎಫ್‌ಟಿಆರ್‌ಐ ಲೇಔಟ್‌ನಲ್ಲಿ ರಸ್ತೆ ನಿರ್ವಹಣೆ ಮಾಡಲು ವಾಸು ಎಂಬವರಿಗೆ ಎನ್‌ಒಸಿ ನೀಡಿ ಅವಕಾಶ ನೀಡಲಾಗಿದೆ. ನಮಗೆ ಯಾಕೆ ನೀಡುವುದಿಲ್ಲ ಎಂದು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮೀಕಾಂತ್ ರೆಡ್ಡಿ, ಈಗ ಹೀಗೆ ನೀಡಬಹುದಾದ ಯಾವುದೇ ನಿಯಮವಿಲ್ಲ. ಹಾಗಾಗಿ, ಕೊಡಲಾಗುವುದಿಲ್ಲ ಎಂದರು.

 

 

 

andolana

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

2 mins ago

ಚಿಕ್ಕಮಗಳೂರು| ತೋಟದಲ್ಲಿ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…

15 mins ago

ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ…

37 mins ago

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಕೇಂದ್ರ ಸರ್ಕಾರದ ವಿರುದ್ಧ…

59 mins ago

ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ

ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್‌…

2 hours ago

ನಟ ದರ್ಶನ್‌ 49ನೇ ಹುಟ್ಟುಹಬ್ಬಕ್ಕೆ ಪತ್ನಿ ವಿಜಯಲಕ್ಷ್ಮೀ ಶುಭಾಶಯ

ನಟ ದರ್ಶನ್‌ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ ಬೆಂಗಳೂರಿನ…

2 hours ago