ಜಿಲ್ಲೆಗಳು

‘ಕನ್ನಡ ನರ್ಸರಿ ಶಾಲೆ ಮರು ನಿರ್ಮಾಣಕ್ಕೆ 25 ತಿಂಗಳಾದ್ರೂ ಅನುಮತಿ ಇಲ್ಲ’

ಲೈಸೆನ್ಸ್ ಮತ್ತು ಪ್ಲಾನ್ ನೀಡುವಂತೆ ಕೇಳಿ ೨೫ ತಿಂಗಳಾಯಿತು: ರಾಮಕೃಷ್ಣ ಅಳಲು

ಮೈಸೂರು: ‘ಕುಸಿದಿರುವ ಕನ್ನಡ ಶಾಲೆಯೊಂದನ್ನು ಮರು ನಿರ್ಮಾಣ ಮಾಡಲು ಲೈಸೆನ್ಸ್ ಮತ್ತು ಪ್ಲಾನ್ ನೀಡುವಂತೆ ಕೋರಿ ೨೫ ತಿಂಗಳಾದ್ರೂ ನಗರಪಾಲಿಕೆ ವತಿಯಿಂದ ಇನ್ನು ಅನುಮತಿ ನೀಡಿಲ್ಲ’ ಎಂದು ಶ್ರೀ ವಿದ್ಯಾಶಂಕರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ರಾಮಕೃಷ್ಣ ಅಳಲು ತೋಡಿಕೊಂಡರು.
ನಗರದ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ಬುಧವಾರ ಮೈಸೂರು ನಗರಪಾಲಿಕೆಯ ಶ್ರೀ ಜಯಚಾಮರಾಜ ಒಡೆಯರ್ ಸಭಾಂಗಣದಲ್ಲಿ ‘ಅಂತಿಮ ಪಾಲಿಕೆ ಅದಾಲತ್’ನಲ್ಲಿ ಸಮಸ್ಯೆಗಳನ್ನು ತಿಳಿಸಿದರು.

೧೯೭೫ರಿಂದ ಉದಯಗಿರಿ ಮತ್ತು ಸಿದ್ಧಾರ್ಥನಗರದಲ್ಲಿ ಶ್ರೀವಿದ್ಯಾಶಂಕರ ಶಿಕ್ಷಣ ಸಂಸ್ಥೆಯು ಸಂಪೂರ್ಣ ಉಚಿತವಾಗಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿದೆ. ಸಿದ್ದಾರ್ಥನಗರದಲ್ಲಿನ ಮೈಸೂರ್ ಒನ್ ಬಳಿ ಇರುವ ಸಂಸ್ಥೆಯ ಕನ್ನಡ ನರ್ಸರಿ ಶಾಲೆಯ ಕಟ್ಟಡ ೨೦೧೬-೧೭ರಲ್ಲಿ ಕುಸಿದಿತ್ತು. ಕಟ್ಟಡವನ್ನು ಪುನರ್ ನಿರ್ಮಾಣ ಮಾಡಲು ೨೦೨೦ರಲ್ಲಿಯೇ ಲೈಸೆನ್ಸ್ ಮತ್ತು ಪ್ಲಾನ್ ನೀಡುವಂತೆ ಅರ್ಜಿ ಹಾಕಿದ್ದೆ. ಶಿಲ್ಪನಾಗ್ ಅವರು ಮತ್ತು ಇಂದಿನ ಪಾಲಿಕೆ ಆಯುಕ್ತರಾದ ಲಕ್ಷೀಕಾಂತ್ ರೆಡ್ಡಿ ಅವರು ತಲಾ ಎರಡು ಬಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ, ನಾನಾ ಕಾರಣಗಳನ್ನು ಹೇಳಿ ಇನ್ನೂ ಲೈಸೆನ್ಸ್ ಮತ್ತು ಪ್ಲಾನ್ ಅನ್ನು ನೀಡಿಲ್ಲ ಎಂದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್ ಶಿವಕುಮಾರ್ ಮತ್ತು ಆಯುಕ್ತ ಲಕ್ಷ್ಮೀಕಾಂತ್ ರೆಡ್ಡಿ ಅವರು ‘ ಡಿ.೮ರಂದು ನಡೆಯುವ ಕೌನ್ಸಿಲ್ ಸಭೆಯಲ್ಲಿ ಅನುಮೋದನೆ ನೀಡಲಾಗುವುದು’ ಎಂದು ಭರವಸೆ ನೀಡಲಾಗುವುದು ಎಂದರು.

ಗಾಯಿತ್ರಿಪುರಂನ ಕೃಷ್ಣ ಎಂಬವರು ಓರಿಯಂಟಲ್ ವಿಮೆ ಕಾನೂನು ಅನ್ವಯ ಹಣಕಟ್ಟಿ ರಸ್ತೆಯೊಂದನ್ನು ನಿರ್ವಹಣೆ ಮಾಡಲು ಎನ್‌ಒಸಿ ನೀಡುವಂತೆ ಕೇಳಿದರು. ಇದಕ್ಕೆ ಆಯುಕ್ತ ಲಕ್ಷೀಕಾಂತ್ ರೆಡ್ಡಿ, ಹಾಗೆ ನೀಡಲು ಅವಕಾಶವಿಲ್ಲ ಎಂದು ಪ್ರತಿಕ್ರಿಯಿಸಿದರು. ೨೦೧೮ರಲ್ಲಿ ಬೋಗಾದಿಯ ಸಿಎಫ್‌ಟಿಆರ್‌ಐ ಲೇಔಟ್‌ನಲ್ಲಿ ರಸ್ತೆ ನಿರ್ವಹಣೆ ಮಾಡಲು ವಾಸು ಎಂಬವರಿಗೆ ಎನ್‌ಒಸಿ ನೀಡಿ ಅವಕಾಶ ನೀಡಲಾಗಿದೆ. ನಮಗೆ ಯಾಕೆ ನೀಡುವುದಿಲ್ಲ ಎಂದು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮೀಕಾಂತ್ ರೆಡ್ಡಿ, ಈಗ ಹೀಗೆ ನೀಡಬಹುದಾದ ಯಾವುದೇ ನಿಯಮವಿಲ್ಲ. ಹಾಗಾಗಿ, ಕೊಡಲಾಗುವುದಿಲ್ಲ ಎಂದರು.

 

 

 

andolana

Recent Posts

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

3 mins ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

37 mins ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

44 mins ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

5 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

5 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

6 hours ago