ಮೈಸೂರು: ‘ಕುಸಿದಿರುವ ಕನ್ನಡ ಶಾಲೆಯೊಂದನ್ನು ಮರು ನಿರ್ಮಾಣ ಮಾಡಲು ಲೈಸೆನ್ಸ್ ಮತ್ತು ಪ್ಲಾನ್ ನೀಡುವಂತೆ ಕೋರಿ ೨೫ ತಿಂಗಳಾದ್ರೂ ನಗರಪಾಲಿಕೆ ವತಿಯಿಂದ ಇನ್ನು ಅನುಮತಿ ನೀಡಿಲ್ಲ’ ಎಂದು ಶ್ರೀ ವಿದ್ಯಾಶಂಕರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ರಾಮಕೃಷ್ಣ ಅಳಲು ತೋಡಿಕೊಂಡರು.
ನಗರದ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ಬುಧವಾರ ಮೈಸೂರು ನಗರಪಾಲಿಕೆಯ ಶ್ರೀ ಜಯಚಾಮರಾಜ ಒಡೆಯರ್ ಸಭಾಂಗಣದಲ್ಲಿ ‘ಅಂತಿಮ ಪಾಲಿಕೆ ಅದಾಲತ್’ನಲ್ಲಿ ಸಮಸ್ಯೆಗಳನ್ನು ತಿಳಿಸಿದರು.
೧೯೭೫ರಿಂದ ಉದಯಗಿರಿ ಮತ್ತು ಸಿದ್ಧಾರ್ಥನಗರದಲ್ಲಿ ಶ್ರೀವಿದ್ಯಾಶಂಕರ ಶಿಕ್ಷಣ ಸಂಸ್ಥೆಯು ಸಂಪೂರ್ಣ ಉಚಿತವಾಗಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿದೆ. ಸಿದ್ದಾರ್ಥನಗರದಲ್ಲಿನ ಮೈಸೂರ್ ಒನ್ ಬಳಿ ಇರುವ ಸಂಸ್ಥೆಯ ಕನ್ನಡ ನರ್ಸರಿ ಶಾಲೆಯ ಕಟ್ಟಡ ೨೦೧೬-೧೭ರಲ್ಲಿ ಕುಸಿದಿತ್ತು. ಕಟ್ಟಡವನ್ನು ಪುನರ್ ನಿರ್ಮಾಣ ಮಾಡಲು ೨೦೨೦ರಲ್ಲಿಯೇ ಲೈಸೆನ್ಸ್ ಮತ್ತು ಪ್ಲಾನ್ ನೀಡುವಂತೆ ಅರ್ಜಿ ಹಾಕಿದ್ದೆ. ಶಿಲ್ಪನಾಗ್ ಅವರು ಮತ್ತು ಇಂದಿನ ಪಾಲಿಕೆ ಆಯುಕ್ತರಾದ ಲಕ್ಷೀಕಾಂತ್ ರೆಡ್ಡಿ ಅವರು ತಲಾ ಎರಡು ಬಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ, ನಾನಾ ಕಾರಣಗಳನ್ನು ಹೇಳಿ ಇನ್ನೂ ಲೈಸೆನ್ಸ್ ಮತ್ತು ಪ್ಲಾನ್ ಅನ್ನು ನೀಡಿಲ್ಲ ಎಂದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್ ಶಿವಕುಮಾರ್ ಮತ್ತು ಆಯುಕ್ತ ಲಕ್ಷ್ಮೀಕಾಂತ್ ರೆಡ್ಡಿ ಅವರು ‘ ಡಿ.೮ರಂದು ನಡೆಯುವ ಕೌನ್ಸಿಲ್ ಸಭೆಯಲ್ಲಿ ಅನುಮೋದನೆ ನೀಡಲಾಗುವುದು’ ಎಂದು ಭರವಸೆ ನೀಡಲಾಗುವುದು ಎಂದರು.
ಗಾಯಿತ್ರಿಪುರಂನ ಕೃಷ್ಣ ಎಂಬವರು ಓರಿಯಂಟಲ್ ವಿಮೆ ಕಾನೂನು ಅನ್ವಯ ಹಣಕಟ್ಟಿ ರಸ್ತೆಯೊಂದನ್ನು ನಿರ್ವಹಣೆ ಮಾಡಲು ಎನ್ಒಸಿ ನೀಡುವಂತೆ ಕೇಳಿದರು. ಇದಕ್ಕೆ ಆಯುಕ್ತ ಲಕ್ಷೀಕಾಂತ್ ರೆಡ್ಡಿ, ಹಾಗೆ ನೀಡಲು ಅವಕಾಶವಿಲ್ಲ ಎಂದು ಪ್ರತಿಕ್ರಿಯಿಸಿದರು. ೨೦೧೮ರಲ್ಲಿ ಬೋಗಾದಿಯ ಸಿಎಫ್ಟಿಆರ್ಐ ಲೇಔಟ್ನಲ್ಲಿ ರಸ್ತೆ ನಿರ್ವಹಣೆ ಮಾಡಲು ವಾಸು ಎಂಬವರಿಗೆ ಎನ್ಒಸಿ ನೀಡಿ ಅವಕಾಶ ನೀಡಲಾಗಿದೆ. ನಮಗೆ ಯಾಕೆ ನೀಡುವುದಿಲ್ಲ ಎಂದು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮೀಕಾಂತ್ ರೆಡ್ಡಿ, ಈಗ ಹೀಗೆ ನೀಡಬಹುದಾದ ಯಾವುದೇ ನಿಯಮವಿಲ್ಲ. ಹಾಗಾಗಿ, ಕೊಡಲಾಗುವುದಿಲ್ಲ ಎಂದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…