ಮೈಸೂರು: ರಾಜ್ಯದೆಲ್ಲೆಡೆ ಕೋವಿಡ್ ರೂಪಾಂತರಿ ಜೆ.ಎನ್-1 ಹಂತ ಹಂತವಾಗಿ ಹೆಚ್ಚಾಗುತ್ತಿದೆ. ಈಗಾಗಲೇ ಕೊವಿಡ್ನಿಂದಾಗಿ ರಾಜ್ಯದಲ್ಲಿ ಮೂವರು ಬಲಿಯಾಗಿದ್ದಾರೆ. ಈಗಾಗಲೇ ಮುನ್ನೆಚ್ಚಿರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಕೆಲವು ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದೆ.
ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುನ್ನೆಚ್ಚಿಕೆ ವಹಿಸುವಂತೆ ಸರ್ಕಾರ ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಮೈಸೂರು ಜಿಲ್ಲಾಡಳಿತ ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ಇನ್ನು ಬರಲಿರುವ ಕ್ರಿಸ್ಮಸ್ ಹಾಗೂ ವರ್ಷಾಚರಣೆಗೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಕ್ರಿಸ್ಮಸ್ ಹಾಗೂ ವರ್ಷಾಚರಣೆಗೆ ಯಾವುದೇ ಪ್ರತ್ಯೇಕ ಮಾರ್ಗ ಸೂಚಿ ವಿಧಿಸಿಲ್ಲ. ಆದರೆ ಸಾರ್ವಜನಿಕರು ಮುನ್ನೆಚ್ಚಿಕೆ ವಹಿಸುವುದು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.
60ವರ್ಷ ಮೇಲ್ಪಟ್ಟ, ಕಾಯಿಲೆಯಿಂದ ಬಳಲುತ್ತಿರುವ, ರೋಗಿಗಳು ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗುಂಪಿನಲ್ಲಿ ಸೇರಬಾರದು. ಅಂತರ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…